Homeಅಂತರಾಷ್ಟ್ರೀಯಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

- Advertisement -
- Advertisement -

ಮಯಾನ್ಮಾರ್‌‌ನಲ್ಲಿ ಒಂದು ವರ್ಷದವರೆಗೆ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಸೈನ್ಯವು ದೇಶದ ಮೇಲೆ ಹಿಡಿತ ಸಾಧಿಸಿದೆ ಎಂದು ಮಯನ್ಮಾರ್ ಮಿಲಿಟರಿ ಟೆಲಿವಿಷನ್ ತಿಳಿಸಿದೆ. ಮಿಲಿಟರಿ ಒಡೆತನದ ಮೈವಾಡಿ ಟಿವಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘೋಷಣೆ ಮಾಡಲಾಗಿದೆ. ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

ದೇಶದ ರಾಜಧಾನಿ ನಾಯ್ಪಿಟಾವ್‌ನ ಫೋನ್ ಮತ್ತು ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿರುವುದರಿಂದ ಆಂಗ್ ಸಾನ್ ಸೂಕಿ ಅವರನ್ನು ಸಂಪರ್ಕಿಸಲಾಗುತ್ತಿಲ್ಲ ಎಂದು ಅವರ ಪಕ್ಷವಾದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಾರ್ಟಿ ಹೇಳಿದೆ.

ದೇಶದ ಸೈನ್ಯವು ಆಡಳಿತ ವಹಿಸಿಕೊಂಡಿರುವುದನ್ನು ಅಮೆರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವಾರು ದೇಶಗಳು ಕಳವಳ ವ್ಯಕ್ತಪಡಿಸಿದ್ದು, ಸೈನ್ಯಕ್ಕೆ ದೇಶದ ಕಾನೂನನ್ನು ಗೌರವಿಸುವಂತೆ ಒತ್ತಾಯಿಸಿವೆ.

ಇದನ್ನೂ ಓದಿ: ಇತ್ತೀಚಿನ ಭಾರತ-ಚೈನಾ ಗಡಿ ಘರ್ಷಣೆಗಳು: ಗಡಿ ನಿರ್ಧರಿಸಲು ಭಾರತವು ಚೌಕಾಶಿ ಮಾತುಕತೆಗೆ ತಯಾರಾಗಬೇಕು

“ಬರ್ಮಾದಲ್ಲಿ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಮತ್ತು ಇತರ ಅಧಿಕಾರಿಗಳ ಬಂಧನ ಸೇರಿದಂತೆ, ದೇಶವನ್ನು ಸೈನ್ಯವು ತೆಕ್ಕೆಗೆ ಪಡಿದುಕೊಂಡಿದೆ ಎಂಬ ಸುದ್ದಿಗಳಿಂದ ಅಮೆರಿಕ ಕಳವಳಗೊಂಡಿದೆ” ಎಂದು ಶ್ವೇತಭವನದ ವಕ್ತಾರ ಜೆನ್ ಸಾಕಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವರದಿಯಾದ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಜೋ ಬಿಡನ್ ಅವರಿಗೆ ವಿವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಚುನಾವಣಾ ಫಲಿತಾಂಶವನ್ನು ಬದಲಿಸುವ ಅಥವಾ ಮ್ಯಾನ್ಮಾರ್‌ನ ಪ್ರಜಾಪ್ರಭುತ್ವಕ್ಕೆ ಅಡ್ಡಿಯುಂಟುಮಾಡುವ ಯಾವುದೇ ಪ್ರಯತ್ನವನ್ನು ಅಮೆರಿಕ ವಿರೋಧಿಸುತ್ತದೆ ಮತ್ತು ಈ ಕ್ರಮಗಳನ್ನು ಹಿಂಪಡೆಯದಿದ್ದರೆ ಘಟನೆಗೆ ಜವಾಬ್ದಾರರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್ ಅವರು ಸೂಕಿ ಅವರನ್ನು ಬಿಡುಗಡೆ ಮಾಡಲು ಕರೆ ನೀಡಿದ್ದಾರೆ. “ನವೆಂಬರ್ 2020 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳಿಗೆ ಅನುಗುಣವಾಗಿ ರಾಷ್ಟ್ರೀಯ ಅಸೆಂಬ್ಲಿಯ ಶಾಂತಿಯುತ ಪುನರ್ನಿರ್ಮಾಣವನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೇಪಾಳ ಹಾಗೂ ಪಾಕಿಸ್ತಾನಕ್ಕಿಂತ ಭಾರತದ ಕನಿಷ್ಠ ವೇತನ ಕಡಿಮೆ: ವಿಶ್ವ ಸಂಸ್ಥೆ ವರದಿ

ಮ್ಯಾಯನ್ಮಾರ್‌‌‌ನಲ್ಲಿ ಕಳೆದ ವರ್ಷ ಚುನಾವಣೆ ನಡೆದಿದ್ದು, ಈ ಚುನಾವಣೆಯ ನಂತರ ಚುನಾಯಿತ ಸಂಸದರು ಸಂಸತ್ತಿನ ಮೊದಲ ಅಧಿವೇಶನಕ್ಕಾಗಿ ರಾಜಧಾನಿ ನಾಯ್ಪಿಟಾವ್‌ನಲ್ಲಿ ಸೋಮವಾರ ಒಟ್ಟುಗೂಡಬೇಕಿತ್ತು.

75 ವರ್ಷದ ಆಂಗ್ ಸಾನ್ ಸೂಕಿ ದೇಶದ ಅತ್ಯಂತ ಪ್ರಬಲ ರಾಜಕಾರಣಿಯಾಗಿದ್ದು, ದೇಶದ ಮಿಲಿಟರಿ ಆಡಳಿತದ ವಿರುದ್ಧ ದಶಕಗಳಿಂದ ಅಹಿಂಸಾತ್ಮಕ ಹೋರಾಟವನ್ನು ಮುನ್ನಡೆಸಿದ್ದರು. ನವೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸಂಸತ್ತಿನ ಕೆಳ ಮತ್ತು ಮೇಲ್ಮನೆಗಳಲ್ಲಿ ಸೂಕಿ ಅವರ ಪಕ್ಷವು 476 ಸ್ಥಾನಗಳಲ್ಲಿ 396 ಸ್ಥಾನಗಳನ್ನು ಪಡೆದುಕೊಂಡಿತ್ತು.

ಆದರೆ 2008 ರ ಮಿಲಿಟರಿ ಕರಡು ಸಂವಿಧಾನದಡಿಯಲ್ಲಿ ಸೈನ್ಯವು ಒಟ್ಟು ಸ್ಥಾನಗಳಲ್ಲಿ 25% ಸ್ಥಾನಗಳಲ್ಲಿ ಹಿಡಿತ ಹೊಂದಿದೆ. ಅಲ್ಲದೆ ಹಲವಾರು ಪ್ರಮುಖ ಮಂತ್ರಿ ಸ್ಥಾನಗಳ ನೇಮಕಾತಿಯನ್ನು ಕೂಡಾ ಸೈನ್ಯಕ್ಕೆ ಮೀಸಲಿಡಲಾಗಿದೆ. ಟಾಟ್ಮಾಡಾವ್ ಎಂದು ಕರೆಯಲ್ಪಡುವ ಸೈನ್ಯವು, ಚುನಾವಣೆಯಲ್ಲಿ ಭಾರಿ ಮತದಾನದ ವಂಚನೆ ಕಂಡುಬಂದಿದೆ ಎಂದು ಆರೋಪಿಸಿದೆಯಾದರೂ, ಅದಕ್ಕೆ ಪುರಾವೆ ನೀಡಲು ವಿಫಲವಾಗಿದೆ ಎಂದು ವರದಿಯಾಗಿದೆ. ದೇಶದ ಕೇಂದ್ರ ಚುನಾವಣಾ ಆಯೋಗ ಕಳೆದ ವಾರ ಈ ಆರೋಪಗಳನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: ಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...