Homeಮುಖಪುಟಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

- Advertisement -
- Advertisement -

ಕೊರೊನಾ ವೈರಸ್ ಟ್ರ್ಯಾಕಿಂಗ್ ಆ್ಯಪ್ ’ಆರೋಗ್ಯ ಸೇತು’ “ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ”ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಏಪ್ರಿಲ್ ಆರಂಭದಲ್ಲಿ ಸ್ವಯಂಪ್ರೇರಿತ ಬಳಕೆಗಾಗಿ ಉದ್ದೇಶಿಸಲಾದ ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

ಈ ಹಿನ್ನೆಲೆಯಲ್ಲಿ “ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ.

ಅಪ್ಲಿಕೇಶನ್‌ನಲ್ಲಿ ಗೌಪ್ಯತೆ ಕಾಳಜಿಗಳ ಬಗ್ಗೆ ಕೆಲವು ತಜ್ಞರು ಹೇಳಿದ್ದನ್ನು ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ. ಜಿಪಿಎಸ್ ಆಧಾರಿತ ಸ್ಥಳ ದತ್ತಾಂಶವನ್ನು ಬಳಸುವುದು ಒಂದು ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ವಿಸ್ತೃತ ಲಾಕ್‌ಡೌನ್‌ ಆರಂಭವಾಗುವ ಮೇ 04 ರಿಂದ ಪ್ರತಿಯೊಬ್ಬ ಖಾಸಗಿ ಕಂಪನಿಯ ಉದ್ಯೋಗಿಯು ತಮ್ಮ ಮೊಬೈಲ್‌ನಲ್ಲಿ ಆ್ಯಪ್ ಹೊಂದಿರಬೇಕು ಎಂದು ಸರ್ಕಾರ ಹೇಳಿದೆ. ಮನೆಯಿಂದ ಕೆಲಸ ಮಾಡುವವರು ಆ್ಯಪ್ ಬಳಸಬೇಕಾಗಿಲ್ಲ. ಮುಂದಿನ ಕೆಲವು ವಾರಗಳಲ್ಲಿ 30 ಕೋಟಿ ಆ್ಯಪ್ ಡೌನ್‌ಲೋಡ್‌ಗಳನ್ನು ಸಾಧಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕಂಟೈನ್‌ಮೆಂಟ್‌ ವಲಯದಲ್ಲಿರುವವರು ಪ್ರತಿಯೊಬ್ಬರು ಇದನ್ನು ಹೊಂದಿರಲೇಬೇಕಾಗುತ್ತದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದಾರೆ.

ಅಲ್ಲದೇ “ದೈನಂದಿನ ಹೊಸ ಸುಳ್ಳು. ಆರೋಗ್ಯ ಸೇತು ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ. ಇದು ದೃಢವಾದ ದತ್ತಾಂಶ ಭದ್ರತಾ ಸಾಮರ್ಥ್ಯ ಹೊಂದಿದೆ. ತಮ್ಮ ಜೀವನದುದ್ದಕ್ಕೂ ಕಣ್ಗಾವಲಿನಲ್ಲಿ ತೊಡಗಿರುವವರಿಗೆ, ತಂತ್ರಜ್ಞಾನವನ್ನು ಹೇಗೆ ಉತ್ತಮವಾಗಿ ಬಳಸಿಕೊಳ್ಳಬಹುದು ಎಂದು ತಿಳಿದಿರುವುದಿಲ್ಲ!” ಎಂದು ರವಿಶಂಕರ್‌ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಈ ಅಪ್ಲಿಕೇಶನ್‌ನ ಬಳಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಶಿಕ್ಷಣ ಸಂಸ್ಥೆಗಳು ಸಹ ಪ್ರೋತ್ಸಾಹಿಸಿವೆ.

ಭಾರತವು ಶನಿವಾರ 2,411 ಪ್ರಕರಣಗಳನ್ನು ಹೊಂದಿದ್ದು ಒಟ್ಟು 37,776 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 1,223 ಸಾವುಗಳು ಈವರೆಗೆ ವರದಿಯಾಗಿವೆ ಎಂದು ಅದು ಹೇಳಿದೆ. ಕಳೆದ 24 ಗಂಟೆಗಳಲ್ಲಿ ಎಪ್ಪತ್ತೊಂದು ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಲಾಕ್ ಡೌನ್ ನಂತರದ ಪ್ರಥಮ ಆದ್ಯತೆ – ಕೃಷಿ ಮತ್ತು ಗ್ರಾಮೀಣ ವಲಯಗಳ ಪುನಶ್ಚೇತನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...