Homeಮುಖಪುಟಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

- Advertisement -
- Advertisement -

ಕೊರೊನಾ ವೈರಸ್ ಟ್ರ್ಯಾಕಿಂಗ್ ಆ್ಯಪ್ ’ಆರೋಗ್ಯ ಸೇತು’ “ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ”ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಏಪ್ರಿಲ್ ಆರಂಭದಲ್ಲಿ ಸ್ವಯಂಪ್ರೇರಿತ ಬಳಕೆಗಾಗಿ ಉದ್ದೇಶಿಸಲಾದ ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

ಈ ಹಿನ್ನೆಲೆಯಲ್ಲಿ “ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ.

ಅಪ್ಲಿಕೇಶನ್‌ನಲ್ಲಿ ಗೌಪ್ಯತೆ ಕಾಳಜಿಗಳ ಬಗ್ಗೆ ಕೆಲವು ತಜ್ಞರು ಹೇಳಿದ್ದನ್ನು ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ. ಜಿಪಿಎಸ್ ಆಧಾರಿತ ಸ್ಥಳ ದತ್ತಾಂಶವನ್ನು ಬಳಸುವುದು ಒಂದು ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ವಿಸ್ತೃತ ಲಾಕ್‌ಡೌನ್‌ ಆರಂಭವಾಗುವ ಮೇ 04 ರಿಂದ ಪ್ರತಿಯೊಬ್ಬ ಖಾಸಗಿ ಕಂಪನಿಯ ಉದ್ಯೋಗಿಯು ತಮ್ಮ ಮೊಬೈಲ್‌ನಲ್ಲಿ ಆ್ಯಪ್ ಹೊಂದಿರಬೇಕು ಎಂದು ಸರ್ಕಾರ ಹೇಳಿದೆ. ಮನೆಯಿಂದ ಕೆಲಸ ಮಾಡುವವರು ಆ್ಯಪ್ ಬಳಸಬೇಕಾಗಿಲ್ಲ. ಮುಂದಿನ ಕೆಲವು ವಾರಗಳಲ್ಲಿ 30 ಕೋಟಿ ಆ್ಯಪ್ ಡೌನ್‌ಲೋಡ್‌ಗಳನ್ನು ಸಾಧಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕಂಟೈನ್‌ಮೆಂಟ್‌ ವಲಯದಲ್ಲಿರುವವರು ಪ್ರತಿಯೊಬ್ಬರು ಇದನ್ನು ಹೊಂದಿರಲೇಬೇಕಾಗುತ್ತದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದಾರೆ.

ಅಲ್ಲದೇ “ದೈನಂದಿನ ಹೊಸ ಸುಳ್ಳು. ಆರೋಗ್ಯ ಸೇತು ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ. ಇದು ದೃಢವಾದ ದತ್ತಾಂಶ ಭದ್ರತಾ ಸಾಮರ್ಥ್ಯ ಹೊಂದಿದೆ. ತಮ್ಮ ಜೀವನದುದ್ದಕ್ಕೂ ಕಣ್ಗಾವಲಿನಲ್ಲಿ ತೊಡಗಿರುವವರಿಗೆ, ತಂತ್ರಜ್ಞಾನವನ್ನು ಹೇಗೆ ಉತ್ತಮವಾಗಿ ಬಳಸಿಕೊಳ್ಳಬಹುದು ಎಂದು ತಿಳಿದಿರುವುದಿಲ್ಲ!” ಎಂದು ರವಿಶಂಕರ್‌ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಈ ಅಪ್ಲಿಕೇಶನ್‌ನ ಬಳಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಶಿಕ್ಷಣ ಸಂಸ್ಥೆಗಳು ಸಹ ಪ್ರೋತ್ಸಾಹಿಸಿವೆ.

ಭಾರತವು ಶನಿವಾರ 2,411 ಪ್ರಕರಣಗಳನ್ನು ಹೊಂದಿದ್ದು ಒಟ್ಟು 37,776 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 1,223 ಸಾವುಗಳು ಈವರೆಗೆ ವರದಿಯಾಗಿವೆ ಎಂದು ಅದು ಹೇಳಿದೆ. ಕಳೆದ 24 ಗಂಟೆಗಳಲ್ಲಿ ಎಪ್ಪತ್ತೊಂದು ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಲಾಕ್ ಡೌನ್ ನಂತರದ ಪ್ರಥಮ ಆದ್ಯತೆ – ಕೃಷಿ ಮತ್ತು ಗ್ರಾಮೀಣ ವಲಯಗಳ ಪುನಶ್ಚೇತನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...