Homeಮುಖಪುಟಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

- Advertisement -
- Advertisement -

ಕೊರೊನಾ ವೈರಸ್ ಟ್ರ್ಯಾಕಿಂಗ್ ಆ್ಯಪ್ ’ಆರೋಗ್ಯ ಸೇತು’ “ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ”ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಏಪ್ರಿಲ್ ಆರಂಭದಲ್ಲಿ ಸ್ವಯಂಪ್ರೇರಿತ ಬಳಕೆಗಾಗಿ ಉದ್ದೇಶಿಸಲಾದ ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

ಈ ಹಿನ್ನೆಲೆಯಲ್ಲಿ “ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ.

ಅಪ್ಲಿಕೇಶನ್‌ನಲ್ಲಿ ಗೌಪ್ಯತೆ ಕಾಳಜಿಗಳ ಬಗ್ಗೆ ಕೆಲವು ತಜ್ಞರು ಹೇಳಿದ್ದನ್ನು ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ. ಜಿಪಿಎಸ್ ಆಧಾರಿತ ಸ್ಥಳ ದತ್ತಾಂಶವನ್ನು ಬಳಸುವುದು ಒಂದು ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ವಿಸ್ತೃತ ಲಾಕ್‌ಡೌನ್‌ ಆರಂಭವಾಗುವ ಮೇ 04 ರಿಂದ ಪ್ರತಿಯೊಬ್ಬ ಖಾಸಗಿ ಕಂಪನಿಯ ಉದ್ಯೋಗಿಯು ತಮ್ಮ ಮೊಬೈಲ್‌ನಲ್ಲಿ ಆ್ಯಪ್ ಹೊಂದಿರಬೇಕು ಎಂದು ಸರ್ಕಾರ ಹೇಳಿದೆ. ಮನೆಯಿಂದ ಕೆಲಸ ಮಾಡುವವರು ಆ್ಯಪ್ ಬಳಸಬೇಕಾಗಿಲ್ಲ. ಮುಂದಿನ ಕೆಲವು ವಾರಗಳಲ್ಲಿ 30 ಕೋಟಿ ಆ್ಯಪ್ ಡೌನ್‌ಲೋಡ್‌ಗಳನ್ನು ಸಾಧಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕಂಟೈನ್‌ಮೆಂಟ್‌ ವಲಯದಲ್ಲಿರುವವರು ಪ್ರತಿಯೊಬ್ಬರು ಇದನ್ನು ಹೊಂದಿರಲೇಬೇಕಾಗುತ್ತದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದಾರೆ.

ಅಲ್ಲದೇ “ದೈನಂದಿನ ಹೊಸ ಸುಳ್ಳು. ಆರೋಗ್ಯ ಸೇತು ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ. ಇದು ದೃಢವಾದ ದತ್ತಾಂಶ ಭದ್ರತಾ ಸಾಮರ್ಥ್ಯ ಹೊಂದಿದೆ. ತಮ್ಮ ಜೀವನದುದ್ದಕ್ಕೂ ಕಣ್ಗಾವಲಿನಲ್ಲಿ ತೊಡಗಿರುವವರಿಗೆ, ತಂತ್ರಜ್ಞಾನವನ್ನು ಹೇಗೆ ಉತ್ತಮವಾಗಿ ಬಳಸಿಕೊಳ್ಳಬಹುದು ಎಂದು ತಿಳಿದಿರುವುದಿಲ್ಲ!” ಎಂದು ರವಿಶಂಕರ್‌ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಈ ಅಪ್ಲಿಕೇಶನ್‌ನ ಬಳಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಶಿಕ್ಷಣ ಸಂಸ್ಥೆಗಳು ಸಹ ಪ್ರೋತ್ಸಾಹಿಸಿವೆ.

ಭಾರತವು ಶನಿವಾರ 2,411 ಪ್ರಕರಣಗಳನ್ನು ಹೊಂದಿದ್ದು ಒಟ್ಟು 37,776 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 1,223 ಸಾವುಗಳು ಈವರೆಗೆ ವರದಿಯಾಗಿವೆ ಎಂದು ಅದು ಹೇಳಿದೆ. ಕಳೆದ 24 ಗಂಟೆಗಳಲ್ಲಿ ಎಪ್ಪತ್ತೊಂದು ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಲಾಕ್ ಡೌನ್ ನಂತರದ ಪ್ರಥಮ ಆದ್ಯತೆ – ಕೃಷಿ ಮತ್ತು ಗ್ರಾಮೀಣ ವಲಯಗಳ ಪುನಶ್ಚೇತನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...