Homeರಾಷ್ಟ್ರೀಯಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ...

ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರದ ನಾಲ್ಕು ದಿನಗಳ ನಂತರ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಬಿಜೆಪಿ ನಾಯಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಿಜೆಪಿ ಯುವ ಘಟಕದ ಪದಾಧಿಕಾರಿ ಹರ್ಷಿತ್ ಶ್ರೀವಾಸ್ತವ ತನ್ನ ಆಕ್ಷೇಪಾರ್ಹ ಪೋಸ್ಟ್‌ಗಳ ಮೂಲಕ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧಾರ್ಮಿಕ ಭಾವನೆಗಳೊಂದಿಗೆ ಚೆಲ್ಲಾಟವಾಡಲು ಪ್ರಯತ್ನಿಸುವವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಕಾನ್ಪುರ ಪೊಲೀಸ್ ಕಮಿಷನರ್ ವಿಜಯ್ ಮೀನಾ ಹೇಳಿದ್ದಾರೆ. ವಿವಾದ ಹೆಚ್ಚಾದ ನಂತರ ಹರ್ಷಿತ್‌ ಶ್ರೀವಾಸ್ತವ ಅವರ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಡಿಲಿಟ್ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ನಾಯಕಿ ನೂಪುರ್ ಶರ್ಮಾ ಟಿವಿ ಚರ್ಚೆಯ ವೇಳೆ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಕೆಯನ್ನು ಪ್ರತಿಭಟಿಸಿ ಕಳೆದ ಶುಕ್ರವಾರ ಕಾನ್ಪುರ ಬಂದ್‌ಗೆ ಕರೆ ನೀಡಲಾಗಿತ್ತು. ಈ ವೇಳೆ ಅಲ್ಲಿನ ಕೆಲವು ಭಾಗಗಳಲ್ಲಿ ಹಿಂಸಾಚಾರವು ಪ್ರಾರಂಭವಾಯಿತು. ಎರಡು ಗುಂಪುಗಳ ಸದಸ್ಯರು ಘರ್ಷಣೆಯಲ್ಲಿ ಏರ್ಪಟ್ಟು, ಪರಸ್ಪರ ಕಲ್ಲುಗಳ ತೂರಾಟ ನಡೆಸಿದ್ದರು.

ಇದನ್ನೂ ಓದಿ: ಆರೆಸ್ಸೆಸ್ಸಿನಲ್ಲಿ ದಲಿತರ ಸ್ಥಾನ ಏನು ಎಂಬುವುದಕ್ಕೆ ಛಲವಾದಿ ನಾರಾಯಣ ಸ್ವಾಮಿ ಉತ್ತರ: ಸಿದ್ದರಾಮಯ್ಯ

ಪ್ರವಾದಿಯವರ ಕುರಿತಾದ ಹೇಳಿಕೆಗಳಿಗಾಗಿ ಬಿಜೆಪಿ ಭಾನುವಾರ ನೂಪುರ್‌‌ ಶರ್ಮಾ ಅವರನ್ನು ಅಮಾನತುಗೊಳಿಸಿದೆ. ಜೊತೆಗೆ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನು ಉಚ್ಚಾಟಿಸಿದೆ. ಪ್ರವಾದಿ ವಿರುದ್ಧದ ಟೀಕೆಗಳಿಗೆ ವಿಶ್ವದಾದ್ಯಂತ ಭಾರೀ ಆಕ್ರೋಶ ಉಂಟಾಗಿದ್ದು, ಸುಮಾರು 16 ದೇಶಗಳು ಖಂಡಿಸಿವೆ.

ಸೋಮವಾರ ಕಾನ್ಪುರ ಪೊಲೀಸರು ಹಿಂಸಾಚಾರದಲ್ಲಿ ಭಾಗಿಯಾದವರ 40 ಚಿತ್ರಗಳನ್ನು ಬಿಡುಗಡೆ ಮಾಡಿದ್ದರು. ಸಿಸಿಟಿವಿ ಮತ್ತು ಮೊಬೈಲ್ ಫೋನ್‌ಗಳಲ್ಲಿ ಸೆರೆಯಾಗಿರುವ ಘಟನೆಯ ದೃಶ್ಯಗಳ ಆಧಾರದಲ್ಲಿ ಪೊಲೀಸರು ಆರೋಪಿಗಳ ಚಿತ್ರಗಳನ್ನು ಸಂಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಹಿಂಸಾಚಾರದಲ್ಲಿ ಸುಮಾರು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಈ ವರೆಗೆ 50 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಗಲಭೆಯಲ್ಲಿ 1,500 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿಯವರೆಗೂ ಮುಸ್ಲಿಮರ ವಿರುದ್ಧ ಹರಿಹಾಯುತ್ತಿದ್ದ ಬ್ರಾಹ್ಮಣರ ನೇತೃತ್ವದ ಆರ್.ಎಸ್.ಎಸ್., ಭಜರಂಗದಳ ಹಿಂದೂಪರವೆಂದು ಬೊಬ್ಬೆ ಹಾಕುತ್ತಿರುವ ಬಿ.ಜೆ.ಪಿ. ಬೆಂಬಲಿತ ಸಂಘಟನೆಗಳಿಗೆ ಜಾಗತಿಕ ಮಟ್ಟದಲ್ಲಿ ಎದ್ದಿರುವ ಕೂಗು ನುಂಗಲಾರದ ತುತ್ತಾಗಿದೆ. ಅದನ್ನು ಅರಗಿಸಿಕೊಳ್ಳಲು ಇಷ್ಟಕ್ಕೆಲ್ಲ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ನಾಟಕವಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿರುವ ಎಷ್ಟು ಜನರ ಮೇಲೆ ಇವರು ಕ್ರಮ ತೆಗೆದುಕೊಂಡಿದ್ದಾರೆ? ಪ್ರಬಲ ವಿರೋಧ ಎದುರಾದರೆ ಇಂತಹ ನಾಟಕವಾಡುವುದು ಜಗತ್ತಿಗೇ ಗೊತ್ತಿರುವ ವಿಚಾರ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...