Homeಮುಖಪುಟಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

- Advertisement -
- Advertisement -

ಅಸ್ಸಾಂನ ದರ್‍ರಾಂಗ್‌ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ ಮೃತಪಟ್ಟ ವ್ಯಕ್ತಿಯ ಮೇಲೆ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ ಫೋಟೊ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಗುರುವಾರ ಸಂಜೆ ತಿಳಿಸಿದ್ದಾರೆ. ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಘಟನೆ ನಡೆದಿದ್ದು, ಅದಕ್ಕಾಗಿ ಪೊಲೀಸರು ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಿನ್ನೆಯ ಘಟನೆಯಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಕೈಯ್ಯಲ್ಲೊಂದು ಕೋಲು ಹಿಡಿದುಕೊಂಡು, ಪೊಲೀಸರನ್ನು ಅಟ್ಟಿಸಿಕೊಂಡು ಬಂದಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಗಿತ್ತು. ಗುಂಡು ಬೀಳುತ್ತಿದ್ದಂತೆ ನೆಲಕ್ಕೆ ಉರುಳಿದ ಪ್ರತಿಭಟನಾಕಾರನ ಮೇಲೆ ಪೊಲೀಸರು ಗುಂಪಾಗಿ ತೆರಳಿ ತೀವ್ರವಾಗಿ ಥಳಿಸಿದ್ದರು. ಈ ವೇಳೆ ಅಲ್ಲಿಯೆ ಇದ್ದ ಫೋಟೋ ಜರ್ನಲಿಸ್ಟ್‌‌ ಕೂಡಾ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದನು.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಯನ್ನು ಹೊಡೆದುರುಳಿಸಿದ ಅಸ್ಸಾಂ ಪೊಲೀಸ್‌‌

 

ಅಸ್ಸಾಂ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪತ್ರಕರ್ತ ಬಿಜೋಯ್ ಬೋನಿಯಾ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಲೀಸರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡ ಅಸ್ಸಾಂನ ವಿಶೇಷ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್, ಫೋಟೋ ಪತ್ರಕರ್ತನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

“ಎಲ್ಲೆಲ್ಲಿ SOP ಗಳು [ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳು] ಮತ್ತು ಪ್ರೋಟೋಕಾಲ್‌ಗಳ ಉಲ್ಲಂಘನೆಯಾಗುತ್ತದೆಯೋ ಅಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಈ ವಿಡಿಯೊ ನೋಡಿದ ನಂತರ ನಾನು ಹೇಳಬಹುದಾದ ಏಕೈಕ ವಿಷಯವೆಂದರೆ, ಪತ್ರಕರ್ತನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಪತ್ರಕರ್ತನ ಬಂಧನವಾಗಿದೆ ಎಂದು ಅಸ್ಸಾಂ ಡಿಜಿಪಿ ಟ್ವೀಟ್ ಮಾಡಿದ್ದಾರೆ. “ಪ್ರಸ್ತುತ ಸಿಪಜ್ಹಾರ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ವೈರಲ್ ವಿಡಿಯೋದಲ್ಲಿ ಗಾಯಗೊಂಡ ವ್ಯಕ್ತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಕ್ಯಾಮರಾಮ್ಯಾನ್ ಅನ್ನು ಬಂಧಿಸಲಾಗಿದೆ. ಸಿಎಂ ಹಿಮಂತ ಬಿಸ್ವಾ ಅವರ ಆದೇಶದಂತೆ ಈ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ಕೇಳಿದ್ದೇನೆ. ಕ್ಯಾಮರಾಮನ್ ಬಿಜೋಯ್ ಬೋನಿಯಾ ಅಸ್ಸಾಂ ಸಿಐಡಿಯ ವಶದಲ್ಲಿದ್ದಾನೆ” ಎಂದು ಹೇಳಿದ್ದಾರೆ.

ಹಲ್ಲೆ ನಡೆಸಿರುವ ವ್ಯಕ್ತಿ ಸರ್ಕಾರಿ ಛಾಯಾಗ್ರಾಹಕ ಎಂದು ಎನ್‌ಡಿಟಿವಿ ದೃಢಪಡಿಸಿದೆ. ಆತ ಸ್ಥಳದಲ್ಲಿದ್ದು, ಘರ್ಷನೆಯನ್ನು ಚಿತ್ರೀಕರಿಸುತ್ತಿದ್ದ ಎಂದು ಅದು ಹೇಳಿದೆ. ಆತನನ್ನು ಗುರುತಿಸಿರುವ ಇತರ ಕೆಲವು ಮಾಧ್ಯಮಗಳು, ಆತ ದರ್ರಾಂಗ್ ಜಿಲ್ಲಾಡಳಿತದ ಛಾಯಾಗ್ರಾಹಕ ಎಂದು ಹೇಳಿವೆ.

ಗುವಾಹಟಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ಹತ್ಯೆ ಮತ್ತು ಘಟನೆಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shame on these police and Media persons who are killing the poor innocent civilians. This is nothing but hitlerism and goonda Raj. This must stop and justice should be given to the poor citizens of Assam.

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...