Homeಮುಖಪುಟಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

- Advertisement -
- Advertisement -

ಅಸ್ಸಾಂನ ದರ್‍ರಾಂಗ್‌ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ ಮೃತಪಟ್ಟ ವ್ಯಕ್ತಿಯ ಮೇಲೆ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ ಫೋಟೊ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಗುರುವಾರ ಸಂಜೆ ತಿಳಿಸಿದ್ದಾರೆ. ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಘಟನೆ ನಡೆದಿದ್ದು, ಅದಕ್ಕಾಗಿ ಪೊಲೀಸರು ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಿನ್ನೆಯ ಘಟನೆಯಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಕೈಯ್ಯಲ್ಲೊಂದು ಕೋಲು ಹಿಡಿದುಕೊಂಡು, ಪೊಲೀಸರನ್ನು ಅಟ್ಟಿಸಿಕೊಂಡು ಬಂದಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಗಿತ್ತು. ಗುಂಡು ಬೀಳುತ್ತಿದ್ದಂತೆ ನೆಲಕ್ಕೆ ಉರುಳಿದ ಪ್ರತಿಭಟನಾಕಾರನ ಮೇಲೆ ಪೊಲೀಸರು ಗುಂಪಾಗಿ ತೆರಳಿ ತೀವ್ರವಾಗಿ ಥಳಿಸಿದ್ದರು. ಈ ವೇಳೆ ಅಲ್ಲಿಯೆ ಇದ್ದ ಫೋಟೋ ಜರ್ನಲಿಸ್ಟ್‌‌ ಕೂಡಾ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದನು.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಯನ್ನು ಹೊಡೆದುರುಳಿಸಿದ ಅಸ್ಸಾಂ ಪೊಲೀಸ್‌‌

 

ಅಸ್ಸಾಂ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪತ್ರಕರ್ತ ಬಿಜೋಯ್ ಬೋನಿಯಾ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಲೀಸರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡ ಅಸ್ಸಾಂನ ವಿಶೇಷ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್, ಫೋಟೋ ಪತ್ರಕರ್ತನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

“ಎಲ್ಲೆಲ್ಲಿ SOP ಗಳು [ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳು] ಮತ್ತು ಪ್ರೋಟೋಕಾಲ್‌ಗಳ ಉಲ್ಲಂಘನೆಯಾಗುತ್ತದೆಯೋ ಅಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಈ ವಿಡಿಯೊ ನೋಡಿದ ನಂತರ ನಾನು ಹೇಳಬಹುದಾದ ಏಕೈಕ ವಿಷಯವೆಂದರೆ, ಪತ್ರಕರ್ತನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಪತ್ರಕರ್ತನ ಬಂಧನವಾಗಿದೆ ಎಂದು ಅಸ್ಸಾಂ ಡಿಜಿಪಿ ಟ್ವೀಟ್ ಮಾಡಿದ್ದಾರೆ. “ಪ್ರಸ್ತುತ ಸಿಪಜ್ಹಾರ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ವೈರಲ್ ವಿಡಿಯೋದಲ್ಲಿ ಗಾಯಗೊಂಡ ವ್ಯಕ್ತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಕ್ಯಾಮರಾಮ್ಯಾನ್ ಅನ್ನು ಬಂಧಿಸಲಾಗಿದೆ. ಸಿಎಂ ಹಿಮಂತ ಬಿಸ್ವಾ ಅವರ ಆದೇಶದಂತೆ ಈ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ಕೇಳಿದ್ದೇನೆ. ಕ್ಯಾಮರಾಮನ್ ಬಿಜೋಯ್ ಬೋನಿಯಾ ಅಸ್ಸಾಂ ಸಿಐಡಿಯ ವಶದಲ್ಲಿದ್ದಾನೆ” ಎಂದು ಹೇಳಿದ್ದಾರೆ.

ಹಲ್ಲೆ ನಡೆಸಿರುವ ವ್ಯಕ್ತಿ ಸರ್ಕಾರಿ ಛಾಯಾಗ್ರಾಹಕ ಎಂದು ಎನ್‌ಡಿಟಿವಿ ದೃಢಪಡಿಸಿದೆ. ಆತ ಸ್ಥಳದಲ್ಲಿದ್ದು, ಘರ್ಷನೆಯನ್ನು ಚಿತ್ರೀಕರಿಸುತ್ತಿದ್ದ ಎಂದು ಅದು ಹೇಳಿದೆ. ಆತನನ್ನು ಗುರುತಿಸಿರುವ ಇತರ ಕೆಲವು ಮಾಧ್ಯಮಗಳು, ಆತ ದರ್ರಾಂಗ್ ಜಿಲ್ಲಾಡಳಿತದ ಛಾಯಾಗ್ರಾಹಕ ಎಂದು ಹೇಳಿವೆ.

ಗುವಾಹಟಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ಹತ್ಯೆ ಮತ್ತು ಘಟನೆಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shame on these police and Media persons who are killing the poor innocent civilians. This is nothing but hitlerism and goonda Raj. This must stop and justice should be given to the poor citizens of Assam.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...