Homeಕರ್ನಾಟಕದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕ, ನಂತರ ಪೆಟ್ರೋಲ್ ಸುರಿದು ಯುವತಿಯನ್ನು ಕೊಲೆ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪ ತಹಶೀಲ್ದಾರ್‌ ಅಶೋಕ್‌ ಶರ್ಮಾ ಅವರ ಮಗಳಾದ ದಾನೇಶ್ವರಿ (23) ಅವರನ್ನು, ಬಾದಾಮಿ ಮೂಲದ ಲಿಂಗಾಯತ ಜಾತಿಗೆ ಸೇರಿದ ಶಿವಕುಮಾರ್‌ ಹಿರೇಹಾಳ ಕೊಲೆ ಮಾಡಿದ್ದನು. ಪೆಟ್ರೋಲ್‌ ಸುರಿದು ಹತ್ಯೆಗೈದು ಪರಾರಿಯಾಗಿದ್ದನು. ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಪವನ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಪ್ರಮುಖ ಆರೋಪಿ ಶಿವಕುಮಾರ್‌ನನ್ನು ಎಲ್ಲ ಸೆಕ್ಷನ್‌ ಅಡಿಯಲ್ಲಿ ಬಂಧಿಸಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಈತನ ಸ್ನೇಹಿತರ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಸಾಕ್ಷ್ಯಾಧಾರಗಳು ಸಿಕ್ಕಲ್ಲಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...