Homeಕರ್ನಾಟಕದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕ, ನಂತರ ಪೆಟ್ರೋಲ್ ಸುರಿದು ಯುವತಿಯನ್ನು ಕೊಲೆ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪ ತಹಶೀಲ್ದಾರ್‌ ಅಶೋಕ್‌ ಶರ್ಮಾ ಅವರ ಮಗಳಾದ ದಾನೇಶ್ವರಿ (23) ಅವರನ್ನು, ಬಾದಾಮಿ ಮೂಲದ ಲಿಂಗಾಯತ ಜಾತಿಗೆ ಸೇರಿದ ಶಿವಕುಮಾರ್‌ ಹಿರೇಹಾಳ ಕೊಲೆ ಮಾಡಿದ್ದನು. ಪೆಟ್ರೋಲ್‌ ಸುರಿದು ಹತ್ಯೆಗೈದು ಪರಾರಿಯಾಗಿದ್ದನು. ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಪವನ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಪ್ರಮುಖ ಆರೋಪಿ ಶಿವಕುಮಾರ್‌ನನ್ನು ಎಲ್ಲ ಸೆಕ್ಷನ್‌ ಅಡಿಯಲ್ಲಿ ಬಂಧಿಸಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಈತನ ಸ್ನೇಹಿತರ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಸಾಕ್ಷ್ಯಾಧಾರಗಳು ಸಿಕ್ಕಲ್ಲಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...