Homeಮುಖಪುಟಪ್ರೀತಿಸುವ ಕಲೆ - ಎರಿಕ್ ಫ್ರಾಂ : ಯೋಗೇಶ್ ಮಾಸ್ಟರ್

ಪ್ರೀತಿಸುವ ಕಲೆ – ಎರಿಕ್ ಫ್ರಾಂ : ಯೋಗೇಶ್ ಮಾಸ್ಟರ್

- Advertisement -
- Advertisement -

ಜಗತ್ತಿನಲ್ಲಿ ಅಗತ್ಯದ ಅಥವಾ ಸಾಂತ್ವನ ನೀಡುವಂತಹ ಅನೇಕ ಪರಿಕಲ್ಪನೆಗಳು ಅಪವ್ಯಾಖ್ಯಾನಕ್ಕೆ ಒಳಗಾಗಿವೆ. ದೇವರು, ಧರ್ಮ, ಸಂಬಂಧಗಳ ಮೌಲ್ಯ, ರಾಜಕೀಯ, ಸಂಸ್ಕೃತಿ ಇತ್ಯಾದಿಗಳಂತೆ ಪ್ರೀತಿಯೂ ಕೂಡಾ.

ಮೋಹ, ಕಾಮ, ವ್ಯಾಮೋಹ, ಇಷ್ಟ ಇತ್ಯಾದಿಗಳನ್ನೆಲ್ಲಾ ಪ್ರೀತಿ ಎಂದುಕೊಂಡುಬಿಡುವ ಉದಾಹರಣೆಗಳಿವೆ. ಹಾಗೆಯೇ ಪ್ರೀತಿಯೆಂದುಕೊಂಡು ವ್ಯಕ್ತಿಗೋ, ಸಿದ್ಧಾಂತಕ್ಕೋ ಅಥವಾ ಇನ್ನಾವುದಕ್ಕೋ ಅಂಟಿಕೊಂಡು ಅದು ಗೀಳಾಗಿ ಮನೋರೋಗವಾಗಿವೆ. ನಾನು ಪ್ರೀತಿಸುತ್ತೇನೆ ಎಂದು ವ್ಯಕ್ತಿಯನ್ನು ಬಂಧನದಲ್ಲಿಟ್ಟುಕೊಂಡು ಪೆÇಸೆಸ್ಸಿವ್ ಆಗಿರುವುದನ್ನು ಕಂಡಿದ್ದೇವೆ.

ಹಾಗಾದರೆ ಪ್ರೇಮವೆಂದರೆ ಏನು? ವ್ಯಾಖ್ಯಾನಕ್ಕೆ ಮೀರಿದ್ದು ಅಂತ ಉನ್ನತೀಕರಿಸಿ, ಅರಿಯುವ ಬದಲು ಅಪಾರ್ಥದಲ್ಲೇ ಬೆಚ್ಚಗಿಟ್ಟುಕೊಳ್ಳುವ ಧೋರಣೆಯಿಂದ ಪ್ರೀತಿ ಉನ್ನತ ಕ್ಲೀಷೆಯಾಗಿ ಪರಿಣಮಿಸಿದೆ. ಅದಕ್ಕಾಗಿಯೇ ಪ್ರೀತಿಯ ಬಗ್ಗೆ ಎರಿಕ್ ಫ್ರಾಂ ಅಚ್ಚುಕಟ್ಟಾಗಿ ಅರಿವಿನ ಒಳನೋಟವನ್ನು ಕೊಡಲು ತನ್ನ ಆರ್ಟ್ ಆಫ್ ಲವ್ಹಿಂಗ್ (1956) ಪುಸ್ತಕದಲ್ಲಿ ಪ್ರಯತ್ನಿಸಿದ್ದಾರೆ.

ಪ್ರೀತಿ ಎಂಬ ಪರಿಕಲ್ಪನೆಯನ್ನು ಬರೀ ಗಂಡುಹೆಣ್ಣುಗಳ ನಡುವಿನ ಆಕರ್ಷಣೆಯಿಂದ ಬಿಡುಗಡೆಗೊಳಿಸಿ ಉದಾತ್ತಗೊಳಿಸಿದ ಕೀರ್ತಿ ಯೇಸುಕ್ರಿಸ್ತನಿಗೇ ಸಲ್ಲುತ್ತದೆ. ಅವನಿಗೂ ಮುನ್ನ ಭಾರತೀಯ ಮತ್ತು ಇತರ ತತ್ವಶಾಸ್ತ್ರ ಮತ್ತು ಪುರಾಣಗಳಲ್ಲಿ ಕಾಮ ಮತ್ತು ನಿಷ್ಕಾಮವನ್ನು, ಪ್ರೇಮಿಗಳ ಪ್ರೇಮ, ಇತರ ಸಂಬಂಧಗಳೊಡನೆ ವಾತ್ಸಲ್ಯ ಅಥವಾ ವ್ಯಾಮೋಹ ನೋಡಬಹುದಿತ್ತು. ವಾತ್ಸಾಯನನ ಕಾಮಶಾಸ್ತ್ರದಲ್ಲಿ ಕಾಮದಾನಂದ ಪಡೆಯಬೇಕಾದರೆ ಸಂಗಾತಿಗಳು ಪರಸ್ಪರ ಇರಬೇಕಾಗಿರುವ ಧೋರಣೆಯನ್ನು ವಿವರಿಸುತ್ತಾನೆ. ಆದರೆ ಅನಿರ್ಬಂಧಿತ ಅಥವಾ ಕಟ್ಟಳೆಗಳಿಲ್ಲದ ಪ್ರೇಮದ ಪಾಠ ಆಗಿದ್ದು ಕ್ರಿಸ್ತನಿಂದ. ಅದನ್ನೇ ಮುಂದುವರಿಸಿ ಮನಶಾಸ್ತ್ರಜ್ಞನೂ ಮತ್ತು ಸಮಾಜ ತತ್ವಜ್ಞಾನಿಯೂ ಆದ ಎರಿಕ್ ಫ್ರಾಂ ಮನೋವೈಜ್ಞಾನಿಕವಾಗಿ ಸಾಮಾಜಿಕ ವರ್ತನಾ ಶಾಸ್ತ್ರದಲ್ಲಿ ಹೇಳುತ್ತಾರೆ.

ಎರಿಕ್ ಪ್ರೀತಿಸುವ ಕಲೆಯನ್ನು ಹೇಳಿಕೊಡುವ ಮುನ್ನ ಪ್ರೀತಿಸುವುದರಲ್ಲಿರುವ ಸಮಸ್ಯೆಗಳನ್ನು ಮೊದಲು ಗುರುತಿಸುವ ಪ್ರಯತ್ನ ಮಾಡುತ್ತಾರೆ. ಹೌದು, ಪ್ರೀತಿಸಲ್ಪಡುವ ಆನಂದಕ್ಕೆ ಆಸೆಪಟ್ಟು ಪ್ರೀತಿಸುವ ಕಲೆಯನ್ನು ಉಪೇಕ್ಷಿಸಿಬಿಡುತ್ತಾರೆ. ಬೇರೆ ಜೀವನಕ್ಕೆ ಅಗತ್ಯವಿರುವ ಎಷ್ಟೋ ವಿದ್ಯೆಗಳನ್ನು ಕಲಿಯುತ್ತಾ ಪ್ರೀತಿಸುವ ಕಲೆಯನ್ನು ಕಲಿಯಲು ಸಮಯ ಕೊಡುವುದಿಲ್ಲ. ಪ್ರೀತಿಸುವುದು (ಸಿನಿಮಾಗಳಲ್ಲಿ ತೋರಿಸುವಂತೆ) ಬಹಳ ಕಷ್ಟ, ತುಂಬಾ ಒದ್ದಾಡಿ ಹೋರಾಡಿದ ಮೇಲೆ ಕೊನೆಗೆ ಪ್ರೇಮಿಗಳು ಒಂದಾಗುತ್ತಾರೆ ಎಂಬ ಮನಸ್ಥಿತಿ.

ನಿಜವಾದ ಪ್ರೇಮದಲ್ಲಿ ಬೀಳುವುದಲ್ಲ, (ಫಾಲಿಂಗ್ ಇನ್ ಲವ್ಹ್) ಬದಲಾಗಿ ಹೇಗೆ ಪ್ರೇಮದಲ್ಲಿ ತೊಡಗಿಸಿಕೊಳ್ಳುವುದು ಎಂಬುದನ್ನು ನೋಡಬೇಕೆನ್ನುತ್ತಾರೆ. ಇದು ಸುಲಭವಲ್ಲ ನಿಜ. ಆದರೆ, ಇದು ಅಸ್ತಿತ್ವದ ಅರ್ಥವನ್ನು ಅನಾವರಣ ಮಾಡುತ್ತಾ ಮಾನವ ಬದುಕಿನ ಸಮಸ್ಯೆಗಳನ್ನು ಬಗೆಹರಿಸುತ್ತಾ ತೃಪ್ತ ಮತ್ತು ಸ್ವಾಸ್ಥ ಮನಸ್ಸನ್ನು ದೃಢಗೊಳಿಸುತ್ತದೆ. ಇನ್ನೇನು ಬೇಕು?

ಪ್ರೇಮ ಜೀವನಪೂರ್ತಿ ತೊಡಗಿಸಿಕೊಳ್ಳಬೇಕಾಗಿರುವ ಸೃಜನಶೀಲ ಯೋಜನೆ ಎನ್ನುವ ಎರಿಕ್ ಫ್ರಾಂ ‘ಪ್ರೀತಿಸುವುದ ತಿಳಿಯದೇ ಪ್ರೀತಿಗೊಳಗಾಗುವ ಆತುರ ನಮ್ಮ ಪ್ರೀತಿಪಾತ್ರರನ್ನು ಹೇಗೆ ನೋಯಿಸುತ್ತದೆ’ ಎಂದು ವಿವರಿಸುತ್ತಾರೆ. ಸೋದರ ಪ್ರೇಮ, ಕುಟುಂಬ ಪ್ರೇಮ, ಸತಿ ಪತಿ ಪ್ರೇಮ ಇತ್ಯಾದಿಗಳೆಲ್ಲವೂ ಒಂದೇ ಪ್ರೇಮದ ಒಂದೇ ಮೂಲವನ್ನು ಹೊಂದಿದ್ದು ವಿವಿಧ ಹೊಣೆಗಾರಿಕೆ ಮತ್ತು ಅಭಿವ್ಯಕ್ತತೆಗಳಿಂದ ಬೇರೆಯಾಗಿ ತೋರುತ್ತದೆ ಎಂದು ವಿವರಿಸುತ್ತಾರೆ.

ಅಪ್ರಬುದ್ಧ ಪ್ರೇಮ ಹೇಳುವುದೇನೆಂದರೆ, ಗಿವ್ ರೆಸ್ಪೆಕ್ಟ್ ಟೇಕ್ ರೆಸ್ಪೆಕ್ಟ್ ತರ, ನನ್ನ ಪ್ರೀತಿಸಿದರೆ ನಾನು ಪ್ರೀತಿಸುತ್ತೇನೆ ಎಂದು. ಆದರೆ ಪಕ್ವವಾದ ಪ್ರೇಮವು ತನಗೆ ಪ್ರೀತಿಸಲು ಸಾಧ್ಯ, ಪ್ರೀತಿಸುತ್ತೇನೆ’ ಎಂಬುದು.

ಪ್ರೇಮವೆಂಬುದು ಇದ್ದಕ್ಕಿದ್ದಂತೆ ಆಗಿಬಿಡುವುದಲ್ಲ. ಅದೊಂದು ಗ್ರಹಿಕೆ, ತಿಳಿವಳಿಕೆ ಮತ್ತು ತರಬೇತಿಗಳ ಪ್ರಕ್ರಿಯೆಯ ಮನೋಭಾವದ ರೂಪ. ಆದ್ದರಿಂದಲೇ ಸಂಗೀತ, ನೃತ್ಯ, ವಿಜ್ಞಾನಗಳನ್ನೆಲ್ಲಾ ಕಲಿಯುವಂತೆ ಪ್ರೀತಿಸುವುದನ್ನೂ ಪ್ರಜ್ಞಾಪೂರ್ವಕವಾಗಿ ಕಲಿಯಬೇಕು ಎನ್ನುತ್ತಾರೆ.

ಪ್ರೇಮವೆಂಬುದು ನಿರ್ದಿಷ್ಟ ವ್ಯಕ್ತಿಯೊಂದಿಗೆ ನಾವು ಹೊಂದುವ ಸಂಬಂಧದ ತೀವ್ರ ಪ್ರಭಾವವೋ, ಭಾವ ತೀವ್ರತೆಯೋ ಖಂಡಿತ ಅಲ್ಲ. ಬದಲಾಗಿ ಅದೊಂದು ಧೋರಣೆ ಅಥವಾ ದೃಷ್ಟಿ.

ಒಟ್ಟಾರೆ ಪ್ರೀತಿಯೆಂಬುದು ವ್ಯವಹಾರವಲ್ಲ, ವ್ಯಸನವಲ್ಲ. ಜೀವನಶಕ್ತಿ.
ಒಟ್ಟಾರೆ ಒಲವೇಜೀವನ ಸಾಕ್ಷಾತ್ಕಾರ. ಹೇಗೆ? ಓದಿ, ಪ್ರೀತಿಸುವ ಕಲೆ. ಕನ್ನಡದಲ್ಲಿಯೂ ಅನುವಾದವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...