Homeಮುಖಪುಟಪ್ರೀತಿಸುವ ಕಲೆ - ಎರಿಕ್ ಫ್ರಾಂ : ಯೋಗೇಶ್ ಮಾಸ್ಟರ್

ಪ್ರೀತಿಸುವ ಕಲೆ – ಎರಿಕ್ ಫ್ರಾಂ : ಯೋಗೇಶ್ ಮಾಸ್ಟರ್

- Advertisement -
- Advertisement -

ಜಗತ್ತಿನಲ್ಲಿ ಅಗತ್ಯದ ಅಥವಾ ಸಾಂತ್ವನ ನೀಡುವಂತಹ ಅನೇಕ ಪರಿಕಲ್ಪನೆಗಳು ಅಪವ್ಯಾಖ್ಯಾನಕ್ಕೆ ಒಳಗಾಗಿವೆ. ದೇವರು, ಧರ್ಮ, ಸಂಬಂಧಗಳ ಮೌಲ್ಯ, ರಾಜಕೀಯ, ಸಂಸ್ಕೃತಿ ಇತ್ಯಾದಿಗಳಂತೆ ಪ್ರೀತಿಯೂ ಕೂಡಾ.

ಮೋಹ, ಕಾಮ, ವ್ಯಾಮೋಹ, ಇಷ್ಟ ಇತ್ಯಾದಿಗಳನ್ನೆಲ್ಲಾ ಪ್ರೀತಿ ಎಂದುಕೊಂಡುಬಿಡುವ ಉದಾಹರಣೆಗಳಿವೆ. ಹಾಗೆಯೇ ಪ್ರೀತಿಯೆಂದುಕೊಂಡು ವ್ಯಕ್ತಿಗೋ, ಸಿದ್ಧಾಂತಕ್ಕೋ ಅಥವಾ ಇನ್ನಾವುದಕ್ಕೋ ಅಂಟಿಕೊಂಡು ಅದು ಗೀಳಾಗಿ ಮನೋರೋಗವಾಗಿವೆ. ನಾನು ಪ್ರೀತಿಸುತ್ತೇನೆ ಎಂದು ವ್ಯಕ್ತಿಯನ್ನು ಬಂಧನದಲ್ಲಿಟ್ಟುಕೊಂಡು ಪೆÇಸೆಸ್ಸಿವ್ ಆಗಿರುವುದನ್ನು ಕಂಡಿದ್ದೇವೆ.

ಹಾಗಾದರೆ ಪ್ರೇಮವೆಂದರೆ ಏನು? ವ್ಯಾಖ್ಯಾನಕ್ಕೆ ಮೀರಿದ್ದು ಅಂತ ಉನ್ನತೀಕರಿಸಿ, ಅರಿಯುವ ಬದಲು ಅಪಾರ್ಥದಲ್ಲೇ ಬೆಚ್ಚಗಿಟ್ಟುಕೊಳ್ಳುವ ಧೋರಣೆಯಿಂದ ಪ್ರೀತಿ ಉನ್ನತ ಕ್ಲೀಷೆಯಾಗಿ ಪರಿಣಮಿಸಿದೆ. ಅದಕ್ಕಾಗಿಯೇ ಪ್ರೀತಿಯ ಬಗ್ಗೆ ಎರಿಕ್ ಫ್ರಾಂ ಅಚ್ಚುಕಟ್ಟಾಗಿ ಅರಿವಿನ ಒಳನೋಟವನ್ನು ಕೊಡಲು ತನ್ನ ಆರ್ಟ್ ಆಫ್ ಲವ್ಹಿಂಗ್ (1956) ಪುಸ್ತಕದಲ್ಲಿ ಪ್ರಯತ್ನಿಸಿದ್ದಾರೆ.

ಪ್ರೀತಿ ಎಂಬ ಪರಿಕಲ್ಪನೆಯನ್ನು ಬರೀ ಗಂಡುಹೆಣ್ಣುಗಳ ನಡುವಿನ ಆಕರ್ಷಣೆಯಿಂದ ಬಿಡುಗಡೆಗೊಳಿಸಿ ಉದಾತ್ತಗೊಳಿಸಿದ ಕೀರ್ತಿ ಯೇಸುಕ್ರಿಸ್ತನಿಗೇ ಸಲ್ಲುತ್ತದೆ. ಅವನಿಗೂ ಮುನ್ನ ಭಾರತೀಯ ಮತ್ತು ಇತರ ತತ್ವಶಾಸ್ತ್ರ ಮತ್ತು ಪುರಾಣಗಳಲ್ಲಿ ಕಾಮ ಮತ್ತು ನಿಷ್ಕಾಮವನ್ನು, ಪ್ರೇಮಿಗಳ ಪ್ರೇಮ, ಇತರ ಸಂಬಂಧಗಳೊಡನೆ ವಾತ್ಸಲ್ಯ ಅಥವಾ ವ್ಯಾಮೋಹ ನೋಡಬಹುದಿತ್ತು. ವಾತ್ಸಾಯನನ ಕಾಮಶಾಸ್ತ್ರದಲ್ಲಿ ಕಾಮದಾನಂದ ಪಡೆಯಬೇಕಾದರೆ ಸಂಗಾತಿಗಳು ಪರಸ್ಪರ ಇರಬೇಕಾಗಿರುವ ಧೋರಣೆಯನ್ನು ವಿವರಿಸುತ್ತಾನೆ. ಆದರೆ ಅನಿರ್ಬಂಧಿತ ಅಥವಾ ಕಟ್ಟಳೆಗಳಿಲ್ಲದ ಪ್ರೇಮದ ಪಾಠ ಆಗಿದ್ದು ಕ್ರಿಸ್ತನಿಂದ. ಅದನ್ನೇ ಮುಂದುವರಿಸಿ ಮನಶಾಸ್ತ್ರಜ್ಞನೂ ಮತ್ತು ಸಮಾಜ ತತ್ವಜ್ಞಾನಿಯೂ ಆದ ಎರಿಕ್ ಫ್ರಾಂ ಮನೋವೈಜ್ಞಾನಿಕವಾಗಿ ಸಾಮಾಜಿಕ ವರ್ತನಾ ಶಾಸ್ತ್ರದಲ್ಲಿ ಹೇಳುತ್ತಾರೆ.

ಎರಿಕ್ ಪ್ರೀತಿಸುವ ಕಲೆಯನ್ನು ಹೇಳಿಕೊಡುವ ಮುನ್ನ ಪ್ರೀತಿಸುವುದರಲ್ಲಿರುವ ಸಮಸ್ಯೆಗಳನ್ನು ಮೊದಲು ಗುರುತಿಸುವ ಪ್ರಯತ್ನ ಮಾಡುತ್ತಾರೆ. ಹೌದು, ಪ್ರೀತಿಸಲ್ಪಡುವ ಆನಂದಕ್ಕೆ ಆಸೆಪಟ್ಟು ಪ್ರೀತಿಸುವ ಕಲೆಯನ್ನು ಉಪೇಕ್ಷಿಸಿಬಿಡುತ್ತಾರೆ. ಬೇರೆ ಜೀವನಕ್ಕೆ ಅಗತ್ಯವಿರುವ ಎಷ್ಟೋ ವಿದ್ಯೆಗಳನ್ನು ಕಲಿಯುತ್ತಾ ಪ್ರೀತಿಸುವ ಕಲೆಯನ್ನು ಕಲಿಯಲು ಸಮಯ ಕೊಡುವುದಿಲ್ಲ. ಪ್ರೀತಿಸುವುದು (ಸಿನಿಮಾಗಳಲ್ಲಿ ತೋರಿಸುವಂತೆ) ಬಹಳ ಕಷ್ಟ, ತುಂಬಾ ಒದ್ದಾಡಿ ಹೋರಾಡಿದ ಮೇಲೆ ಕೊನೆಗೆ ಪ್ರೇಮಿಗಳು ಒಂದಾಗುತ್ತಾರೆ ಎಂಬ ಮನಸ್ಥಿತಿ.

ನಿಜವಾದ ಪ್ರೇಮದಲ್ಲಿ ಬೀಳುವುದಲ್ಲ, (ಫಾಲಿಂಗ್ ಇನ್ ಲವ್ಹ್) ಬದಲಾಗಿ ಹೇಗೆ ಪ್ರೇಮದಲ್ಲಿ ತೊಡಗಿಸಿಕೊಳ್ಳುವುದು ಎಂಬುದನ್ನು ನೋಡಬೇಕೆನ್ನುತ್ತಾರೆ. ಇದು ಸುಲಭವಲ್ಲ ನಿಜ. ಆದರೆ, ಇದು ಅಸ್ತಿತ್ವದ ಅರ್ಥವನ್ನು ಅನಾವರಣ ಮಾಡುತ್ತಾ ಮಾನವ ಬದುಕಿನ ಸಮಸ್ಯೆಗಳನ್ನು ಬಗೆಹರಿಸುತ್ತಾ ತೃಪ್ತ ಮತ್ತು ಸ್ವಾಸ್ಥ ಮನಸ್ಸನ್ನು ದೃಢಗೊಳಿಸುತ್ತದೆ. ಇನ್ನೇನು ಬೇಕು?

ಪ್ರೇಮ ಜೀವನಪೂರ್ತಿ ತೊಡಗಿಸಿಕೊಳ್ಳಬೇಕಾಗಿರುವ ಸೃಜನಶೀಲ ಯೋಜನೆ ಎನ್ನುವ ಎರಿಕ್ ಫ್ರಾಂ ‘ಪ್ರೀತಿಸುವುದ ತಿಳಿಯದೇ ಪ್ರೀತಿಗೊಳಗಾಗುವ ಆತುರ ನಮ್ಮ ಪ್ರೀತಿಪಾತ್ರರನ್ನು ಹೇಗೆ ನೋಯಿಸುತ್ತದೆ’ ಎಂದು ವಿವರಿಸುತ್ತಾರೆ. ಸೋದರ ಪ್ರೇಮ, ಕುಟುಂಬ ಪ್ರೇಮ, ಸತಿ ಪತಿ ಪ್ರೇಮ ಇತ್ಯಾದಿಗಳೆಲ್ಲವೂ ಒಂದೇ ಪ್ರೇಮದ ಒಂದೇ ಮೂಲವನ್ನು ಹೊಂದಿದ್ದು ವಿವಿಧ ಹೊಣೆಗಾರಿಕೆ ಮತ್ತು ಅಭಿವ್ಯಕ್ತತೆಗಳಿಂದ ಬೇರೆಯಾಗಿ ತೋರುತ್ತದೆ ಎಂದು ವಿವರಿಸುತ್ತಾರೆ.

ಅಪ್ರಬುದ್ಧ ಪ್ರೇಮ ಹೇಳುವುದೇನೆಂದರೆ, ಗಿವ್ ರೆಸ್ಪೆಕ್ಟ್ ಟೇಕ್ ರೆಸ್ಪೆಕ್ಟ್ ತರ, ನನ್ನ ಪ್ರೀತಿಸಿದರೆ ನಾನು ಪ್ರೀತಿಸುತ್ತೇನೆ ಎಂದು. ಆದರೆ ಪಕ್ವವಾದ ಪ್ರೇಮವು ತನಗೆ ಪ್ರೀತಿಸಲು ಸಾಧ್ಯ, ಪ್ರೀತಿಸುತ್ತೇನೆ’ ಎಂಬುದು.

ಪ್ರೇಮವೆಂಬುದು ಇದ್ದಕ್ಕಿದ್ದಂತೆ ಆಗಿಬಿಡುವುದಲ್ಲ. ಅದೊಂದು ಗ್ರಹಿಕೆ, ತಿಳಿವಳಿಕೆ ಮತ್ತು ತರಬೇತಿಗಳ ಪ್ರಕ್ರಿಯೆಯ ಮನೋಭಾವದ ರೂಪ. ಆದ್ದರಿಂದಲೇ ಸಂಗೀತ, ನೃತ್ಯ, ವಿಜ್ಞಾನಗಳನ್ನೆಲ್ಲಾ ಕಲಿಯುವಂತೆ ಪ್ರೀತಿಸುವುದನ್ನೂ ಪ್ರಜ್ಞಾಪೂರ್ವಕವಾಗಿ ಕಲಿಯಬೇಕು ಎನ್ನುತ್ತಾರೆ.

ಪ್ರೇಮವೆಂಬುದು ನಿರ್ದಿಷ್ಟ ವ್ಯಕ್ತಿಯೊಂದಿಗೆ ನಾವು ಹೊಂದುವ ಸಂಬಂಧದ ತೀವ್ರ ಪ್ರಭಾವವೋ, ಭಾವ ತೀವ್ರತೆಯೋ ಖಂಡಿತ ಅಲ್ಲ. ಬದಲಾಗಿ ಅದೊಂದು ಧೋರಣೆ ಅಥವಾ ದೃಷ್ಟಿ.

ಒಟ್ಟಾರೆ ಪ್ರೀತಿಯೆಂಬುದು ವ್ಯವಹಾರವಲ್ಲ, ವ್ಯಸನವಲ್ಲ. ಜೀವನಶಕ್ತಿ.
ಒಟ್ಟಾರೆ ಒಲವೇಜೀವನ ಸಾಕ್ಷಾತ್ಕಾರ. ಹೇಗೆ? ಓದಿ, ಪ್ರೀತಿಸುವ ಕಲೆ. ಕನ್ನಡದಲ್ಲಿಯೂ ಅನುವಾದವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...