Homeಮುಖಪುಟಪ್ರೀತಿಸುವ ಕಲೆ - ಎರಿಕ್ ಫ್ರಾಂ : ಯೋಗೇಶ್ ಮಾಸ್ಟರ್

ಪ್ರೀತಿಸುವ ಕಲೆ – ಎರಿಕ್ ಫ್ರಾಂ : ಯೋಗೇಶ್ ಮಾಸ್ಟರ್

- Advertisement -
- Advertisement -

ಜಗತ್ತಿನಲ್ಲಿ ಅಗತ್ಯದ ಅಥವಾ ಸಾಂತ್ವನ ನೀಡುವಂತಹ ಅನೇಕ ಪರಿಕಲ್ಪನೆಗಳು ಅಪವ್ಯಾಖ್ಯಾನಕ್ಕೆ ಒಳಗಾಗಿವೆ. ದೇವರು, ಧರ್ಮ, ಸಂಬಂಧಗಳ ಮೌಲ್ಯ, ರಾಜಕೀಯ, ಸಂಸ್ಕೃತಿ ಇತ್ಯಾದಿಗಳಂತೆ ಪ್ರೀತಿಯೂ ಕೂಡಾ.

ಮೋಹ, ಕಾಮ, ವ್ಯಾಮೋಹ, ಇಷ್ಟ ಇತ್ಯಾದಿಗಳನ್ನೆಲ್ಲಾ ಪ್ರೀತಿ ಎಂದುಕೊಂಡುಬಿಡುವ ಉದಾಹರಣೆಗಳಿವೆ. ಹಾಗೆಯೇ ಪ್ರೀತಿಯೆಂದುಕೊಂಡು ವ್ಯಕ್ತಿಗೋ, ಸಿದ್ಧಾಂತಕ್ಕೋ ಅಥವಾ ಇನ್ನಾವುದಕ್ಕೋ ಅಂಟಿಕೊಂಡು ಅದು ಗೀಳಾಗಿ ಮನೋರೋಗವಾಗಿವೆ. ನಾನು ಪ್ರೀತಿಸುತ್ತೇನೆ ಎಂದು ವ್ಯಕ್ತಿಯನ್ನು ಬಂಧನದಲ್ಲಿಟ್ಟುಕೊಂಡು ಪೆÇಸೆಸ್ಸಿವ್ ಆಗಿರುವುದನ್ನು ಕಂಡಿದ್ದೇವೆ.

ಹಾಗಾದರೆ ಪ್ರೇಮವೆಂದರೆ ಏನು? ವ್ಯಾಖ್ಯಾನಕ್ಕೆ ಮೀರಿದ್ದು ಅಂತ ಉನ್ನತೀಕರಿಸಿ, ಅರಿಯುವ ಬದಲು ಅಪಾರ್ಥದಲ್ಲೇ ಬೆಚ್ಚಗಿಟ್ಟುಕೊಳ್ಳುವ ಧೋರಣೆಯಿಂದ ಪ್ರೀತಿ ಉನ್ನತ ಕ್ಲೀಷೆಯಾಗಿ ಪರಿಣಮಿಸಿದೆ. ಅದಕ್ಕಾಗಿಯೇ ಪ್ರೀತಿಯ ಬಗ್ಗೆ ಎರಿಕ್ ಫ್ರಾಂ ಅಚ್ಚುಕಟ್ಟಾಗಿ ಅರಿವಿನ ಒಳನೋಟವನ್ನು ಕೊಡಲು ತನ್ನ ಆರ್ಟ್ ಆಫ್ ಲವ್ಹಿಂಗ್ (1956) ಪುಸ್ತಕದಲ್ಲಿ ಪ್ರಯತ್ನಿಸಿದ್ದಾರೆ.

ಪ್ರೀತಿ ಎಂಬ ಪರಿಕಲ್ಪನೆಯನ್ನು ಬರೀ ಗಂಡುಹೆಣ್ಣುಗಳ ನಡುವಿನ ಆಕರ್ಷಣೆಯಿಂದ ಬಿಡುಗಡೆಗೊಳಿಸಿ ಉದಾತ್ತಗೊಳಿಸಿದ ಕೀರ್ತಿ ಯೇಸುಕ್ರಿಸ್ತನಿಗೇ ಸಲ್ಲುತ್ತದೆ. ಅವನಿಗೂ ಮುನ್ನ ಭಾರತೀಯ ಮತ್ತು ಇತರ ತತ್ವಶಾಸ್ತ್ರ ಮತ್ತು ಪುರಾಣಗಳಲ್ಲಿ ಕಾಮ ಮತ್ತು ನಿಷ್ಕಾಮವನ್ನು, ಪ್ರೇಮಿಗಳ ಪ್ರೇಮ, ಇತರ ಸಂಬಂಧಗಳೊಡನೆ ವಾತ್ಸಲ್ಯ ಅಥವಾ ವ್ಯಾಮೋಹ ನೋಡಬಹುದಿತ್ತು. ವಾತ್ಸಾಯನನ ಕಾಮಶಾಸ್ತ್ರದಲ್ಲಿ ಕಾಮದಾನಂದ ಪಡೆಯಬೇಕಾದರೆ ಸಂಗಾತಿಗಳು ಪರಸ್ಪರ ಇರಬೇಕಾಗಿರುವ ಧೋರಣೆಯನ್ನು ವಿವರಿಸುತ್ತಾನೆ. ಆದರೆ ಅನಿರ್ಬಂಧಿತ ಅಥವಾ ಕಟ್ಟಳೆಗಳಿಲ್ಲದ ಪ್ರೇಮದ ಪಾಠ ಆಗಿದ್ದು ಕ್ರಿಸ್ತನಿಂದ. ಅದನ್ನೇ ಮುಂದುವರಿಸಿ ಮನಶಾಸ್ತ್ರಜ್ಞನೂ ಮತ್ತು ಸಮಾಜ ತತ್ವಜ್ಞಾನಿಯೂ ಆದ ಎರಿಕ್ ಫ್ರಾಂ ಮನೋವೈಜ್ಞಾನಿಕವಾಗಿ ಸಾಮಾಜಿಕ ವರ್ತನಾ ಶಾಸ್ತ್ರದಲ್ಲಿ ಹೇಳುತ್ತಾರೆ.

ಎರಿಕ್ ಪ್ರೀತಿಸುವ ಕಲೆಯನ್ನು ಹೇಳಿಕೊಡುವ ಮುನ್ನ ಪ್ರೀತಿಸುವುದರಲ್ಲಿರುವ ಸಮಸ್ಯೆಗಳನ್ನು ಮೊದಲು ಗುರುತಿಸುವ ಪ್ರಯತ್ನ ಮಾಡುತ್ತಾರೆ. ಹೌದು, ಪ್ರೀತಿಸಲ್ಪಡುವ ಆನಂದಕ್ಕೆ ಆಸೆಪಟ್ಟು ಪ್ರೀತಿಸುವ ಕಲೆಯನ್ನು ಉಪೇಕ್ಷಿಸಿಬಿಡುತ್ತಾರೆ. ಬೇರೆ ಜೀವನಕ್ಕೆ ಅಗತ್ಯವಿರುವ ಎಷ್ಟೋ ವಿದ್ಯೆಗಳನ್ನು ಕಲಿಯುತ್ತಾ ಪ್ರೀತಿಸುವ ಕಲೆಯನ್ನು ಕಲಿಯಲು ಸಮಯ ಕೊಡುವುದಿಲ್ಲ. ಪ್ರೀತಿಸುವುದು (ಸಿನಿಮಾಗಳಲ್ಲಿ ತೋರಿಸುವಂತೆ) ಬಹಳ ಕಷ್ಟ, ತುಂಬಾ ಒದ್ದಾಡಿ ಹೋರಾಡಿದ ಮೇಲೆ ಕೊನೆಗೆ ಪ್ರೇಮಿಗಳು ಒಂದಾಗುತ್ತಾರೆ ಎಂಬ ಮನಸ್ಥಿತಿ.

ನಿಜವಾದ ಪ್ರೇಮದಲ್ಲಿ ಬೀಳುವುದಲ್ಲ, (ಫಾಲಿಂಗ್ ಇನ್ ಲವ್ಹ್) ಬದಲಾಗಿ ಹೇಗೆ ಪ್ರೇಮದಲ್ಲಿ ತೊಡಗಿಸಿಕೊಳ್ಳುವುದು ಎಂಬುದನ್ನು ನೋಡಬೇಕೆನ್ನುತ್ತಾರೆ. ಇದು ಸುಲಭವಲ್ಲ ನಿಜ. ಆದರೆ, ಇದು ಅಸ್ತಿತ್ವದ ಅರ್ಥವನ್ನು ಅನಾವರಣ ಮಾಡುತ್ತಾ ಮಾನವ ಬದುಕಿನ ಸಮಸ್ಯೆಗಳನ್ನು ಬಗೆಹರಿಸುತ್ತಾ ತೃಪ್ತ ಮತ್ತು ಸ್ವಾಸ್ಥ ಮನಸ್ಸನ್ನು ದೃಢಗೊಳಿಸುತ್ತದೆ. ಇನ್ನೇನು ಬೇಕು?

ಪ್ರೇಮ ಜೀವನಪೂರ್ತಿ ತೊಡಗಿಸಿಕೊಳ್ಳಬೇಕಾಗಿರುವ ಸೃಜನಶೀಲ ಯೋಜನೆ ಎನ್ನುವ ಎರಿಕ್ ಫ್ರಾಂ ‘ಪ್ರೀತಿಸುವುದ ತಿಳಿಯದೇ ಪ್ರೀತಿಗೊಳಗಾಗುವ ಆತುರ ನಮ್ಮ ಪ್ರೀತಿಪಾತ್ರರನ್ನು ಹೇಗೆ ನೋಯಿಸುತ್ತದೆ’ ಎಂದು ವಿವರಿಸುತ್ತಾರೆ. ಸೋದರ ಪ್ರೇಮ, ಕುಟುಂಬ ಪ್ರೇಮ, ಸತಿ ಪತಿ ಪ್ರೇಮ ಇತ್ಯಾದಿಗಳೆಲ್ಲವೂ ಒಂದೇ ಪ್ರೇಮದ ಒಂದೇ ಮೂಲವನ್ನು ಹೊಂದಿದ್ದು ವಿವಿಧ ಹೊಣೆಗಾರಿಕೆ ಮತ್ತು ಅಭಿವ್ಯಕ್ತತೆಗಳಿಂದ ಬೇರೆಯಾಗಿ ತೋರುತ್ತದೆ ಎಂದು ವಿವರಿಸುತ್ತಾರೆ.

ಅಪ್ರಬುದ್ಧ ಪ್ರೇಮ ಹೇಳುವುದೇನೆಂದರೆ, ಗಿವ್ ರೆಸ್ಪೆಕ್ಟ್ ಟೇಕ್ ರೆಸ್ಪೆಕ್ಟ್ ತರ, ನನ್ನ ಪ್ರೀತಿಸಿದರೆ ನಾನು ಪ್ರೀತಿಸುತ್ತೇನೆ ಎಂದು. ಆದರೆ ಪಕ್ವವಾದ ಪ್ರೇಮವು ತನಗೆ ಪ್ರೀತಿಸಲು ಸಾಧ್ಯ, ಪ್ರೀತಿಸುತ್ತೇನೆ’ ಎಂಬುದು.

ಪ್ರೇಮವೆಂಬುದು ಇದ್ದಕ್ಕಿದ್ದಂತೆ ಆಗಿಬಿಡುವುದಲ್ಲ. ಅದೊಂದು ಗ್ರಹಿಕೆ, ತಿಳಿವಳಿಕೆ ಮತ್ತು ತರಬೇತಿಗಳ ಪ್ರಕ್ರಿಯೆಯ ಮನೋಭಾವದ ರೂಪ. ಆದ್ದರಿಂದಲೇ ಸಂಗೀತ, ನೃತ್ಯ, ವಿಜ್ಞಾನಗಳನ್ನೆಲ್ಲಾ ಕಲಿಯುವಂತೆ ಪ್ರೀತಿಸುವುದನ್ನೂ ಪ್ರಜ್ಞಾಪೂರ್ವಕವಾಗಿ ಕಲಿಯಬೇಕು ಎನ್ನುತ್ತಾರೆ.

ಪ್ರೇಮವೆಂಬುದು ನಿರ್ದಿಷ್ಟ ವ್ಯಕ್ತಿಯೊಂದಿಗೆ ನಾವು ಹೊಂದುವ ಸಂಬಂಧದ ತೀವ್ರ ಪ್ರಭಾವವೋ, ಭಾವ ತೀವ್ರತೆಯೋ ಖಂಡಿತ ಅಲ್ಲ. ಬದಲಾಗಿ ಅದೊಂದು ಧೋರಣೆ ಅಥವಾ ದೃಷ್ಟಿ.

ಒಟ್ಟಾರೆ ಪ್ರೀತಿಯೆಂಬುದು ವ್ಯವಹಾರವಲ್ಲ, ವ್ಯಸನವಲ್ಲ. ಜೀವನಶಕ್ತಿ.
ಒಟ್ಟಾರೆ ಒಲವೇಜೀವನ ಸಾಕ್ಷಾತ್ಕಾರ. ಹೇಗೆ? ಓದಿ, ಪ್ರೀತಿಸುವ ಕಲೆ. ಕನ್ನಡದಲ್ಲಿಯೂ ಅನುವಾದವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...