Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು - ರಾಜಧಾನಿ ಎಂಬ ಮಾಯಾಮೋಹಿನಿ

ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

- Advertisement -
- Advertisement -

ಮೊನ್ನೆ ಭಾರತಮಾತೆಯ ಅನೇಕ ಸುಪುತ್ರರು, ‘ವಿಕೇಂದ್ರೀಕರಣ ವಿನಾಶಕ್ಕೆ ದಾರಿ’, ‘ಒಕ್ಕೂಟ ಸರಕಾರ ಒಡೆದು ಹಾಕೀತು’, ‘ರಾಜ್ಯ ಸರಕಾರಗಳು ರಜೆಯ ಮೇಲೆ ಹೋಗಲಿ’, ‘ಒಂದು ದೇಶ, ಒಂದು ಸರಕಾರ’ ಅಂತೆಲ್ಲಾ ಸೋಷಿಯಲ್ ಮೀಡಿಯಾದಾಗ ಬರಕೊಂಡರು. ಅದು ಲಸಿಕೆ ಪೂರೈಕೆಗೆ ಸಂಬಂಧಪಟ್ಟ ಗೊಂದಲದ ಸಲುವಾಗಿ.

ಅವರ ಪ್ರಕಾರ ಭಾರತ ಎಂಬೊ ಉಪಖಂಡಕ್ಕ ದೆಹಲಿ ಎಂಬ ದೂರದ ಊರಿನಲ್ಲಿ ಒಂದು ಸರಕಾರ ಅಂತ ಇದ್ದರೆ ಸಾಕು. ದೇಶದ ಇತರ ರಾಜ್ಯಗಳು, ಅವುಗಳ ರಾಜಧಾನಿಗಳು, ಕೇವಲ ಭಾರತದ ಭೂಪಟದ ಮೇಲಿನ ಬಿಂದುಗಳು ಅಷ್ಟೇ ಮತ್ತು ದೆಹಲಿಯ ಸುಲ್ತಾನರು ನೀಡುವ ಭಿಕ್ಷೆಯಲ್ಲಿ ಬದುಕುವ ಭಿಕಾರಿಗಳು ಎಂಬಂತಾಗಿತ್ತು.

ಇದನ್ನ ನಾವು ಭಾವನಾತ್ಮಕವಾಗಿ ನೋಡದೆ, ಲಭ್ಯ ದತ್ತಾಂಶಗಳ ಮೂಲಕ ನೋಡೋಣ. ಉದಾಹರಣೆಗೆ ಒಕ್ಕೂಟ ಸರಕಾರದ ಕೇಂದ್ರ ಸ್ಥಾನ ದೆಹಲಿ ಒಳಗ 55 ಇಲಾಖೆಗಳ ಸುಮಾರು 1335 ಕಚೇರಿಗಳು ಅದಾವು. ‘ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ’ ಅಂದರ ‘ಬರೆ ದೆಹಲಿಗೆ ಬಂತು’ ಅಂದಂಗ ಆಗೇದ. ಸುಮಾರು 130 ಕೋಟಿ ಜನ ಇರುವ, 30 ರಾಜ್ಯಗಳ, 600 ಜಿಲ್ಲೆಗಳ, 200 ಸ್ಮಾರ್ಟ್ ಸಿಟಿಗಳ, 30 ಲಕ್ಷ ಕಿಲೋಮೀಟರ್ ಚದುರ ಕಿಲೋಮೀಟರ್ ವ್ಯಾಪ್ತಿಯ, ಈ ದೇಶದ ಒಳಗ ಕೆಲವು ಕಚೇರಿಗಳನ್ನ ಆದರೂ ದೆಹಲಿಯಿಂದ ದೂರ ತೊಗೊಂಡು ಹೋಗಬೇಕು ಅಂತ ಇಲ್ಲಿಯವರೆಗಿನ 14 ಪ್ರಧಾನ ಮಂತ್ರಿಗಳಿಗೆ, ಅವರು ನಡೆಸಿದ ಸರಕಾರಗಳಿಗೆ ಅವಶ್ಯಕ ಅನ್ನಿಸಲಿಲ್ಲ. ಅದು ಹೋಗಲಿ, 545 ಲೋಕಸಭಾ ಕ್ಷೇತ್ರಗಳಿಂದ ನಮ್ಮ ವೋಟು ತೊಗೊಂಡು, ನಮ್ಮ ಸುಂಕದ ಹಣದಿಂದ ಬಿಂಕ ಮಾಡಿ ಮೆರೆಯುವ ಸಂಸತ್ತು ಸದಸ್ಯರಿಗೂ ಅನ್ನಿಸಲಿಲ್ಲ. ಸ್ವಾತಂತ್ರ ಬಂದು 75 ವರ್ಷ ಆಗಲಿಕ್ಕೆ ಬಂದರೂ ಈ ಹಣೆಬಾರ ಐತಿ ಅಂದರ, ಇನ್ನು ಮುಂದೆ ಅದು ಬದಲು ಆಗತದೋ ಇಲ್ಲೋ ಖಾತ್ರಿ ಇಲ್ಲ.

ಹಂಗ ಅಂತ ಅದು ಬರಿಯ ದೆಹಲಿಗೆ ಸೀಮಿತವಾದ ಭಾವ ಅಂತ ಅಂದುಕೋ ಬ್ಯಾಡ್ರಿ. ಇದೇ ಭಾವ ಇತರರಲ್ಲೂ ಕಾಣತದ. ಇನ್ನು ಬೆಂಗಳೂರಿಗೆ ಬಂದರ, ಅಲ್ಲಿಯೂ ಇದೆ ಹಣೆಬಾರ.

ರಾಜ್ಯ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷರಿಂದ ವ್ಯವಸ್ಥೆಗಳ ಪರಿಶೀಲನೆ

ವರ್ಷಕ್ಕೆ ಎರಡು ಬಾರಿ ಯಾವುದೋ ಹೆಸರು ಕೇಳದ ಪ್ರವಾಸೋದ್ಯಮ ಪತ್ರಿಕೆಯವರು ಮಾಡಿದ ಸರ್ವೇಪ್ರಕಾರ ಇಡೀ ದೇಶದಾಗ ವಾಸಕ್ಕ ಅತ್ಯಂತ ಸೂಕ್ತವಾದ ನಗರ ‘ನಮ್ಮ ಬೆಂಗಳೂರು’ ಅಂತ ಸೋಶಿಯಲ್ ಮೀಡಿಯಾದಾಗ ಚೀರಿಕೊಳ್ಳುವ ಅನೇಕ ಕನ್ನಡಿಗರ ಕಣ್ಣಿಗೆ ಇತರ ಜಿಲ್ಲೆ, ನಗರ, ಹಳ್ಳಿಗಳು ಕಾಣೋದ ಇಲ್ಲ. ಇದು ಮಕ್ಕಳ ಕೂಟ ಒಂದನೇ ಕ್ರಾಸ್‌ನಲ್ಲಿ ಹುಟ್ಟಿ, ಬಸವನಗುಡಿ ಕಾಲೇಜಿಗೆ ಹೋಗಿ, ಮಲ್ಲೇಶ್ವರದಲ್ಲಿ ಮನೆ ಮಾಡಿ, ಪಕ್ಕದ ಕ್ರಾಸ್ ಅಂಕಲ್ ಅವರ ಮಗಳನ್ನು ಮದುವೆ ಮಾಡಿಕೊಂಡು ರಾಜಾಜಿನಗರದಲ್ಲಿ ಅಂತಿಮ ಯಾತ್ರೆ ಮುಗಿಸಿದ ‘ಸೆವೆಂತ್ ಜನರೇಷನ್ ಬ್ಯಾಂಗಲೋರಿಯನ್ಸ್’ ಕತೆ ಅಷ್ಟೇ ಅಲ್ಲ. ಕೂಗನಹಳ್ಳಿ ಎಂಬೊ ಕುಗ್ರಾಮದಲ್ಲಿ ಹುಟ್ಟಿ ಹೊಟ್ಟೆಪಾಡಿಗೆ ರಾಜಧಾನಿಯ ಸಿಂಗಲ್ ರೂಮಿನಲ್ಲಿ ಬೆಂದಕಾಳೂರು ತಿಂದು ಬದುಕಿದ ಉತ್ತರ ಕರ್ನಾಟಕದ ವೀರ ಕನ್ನಡಿಗರ ಕತೆಯೂ ಹೌದು.

ಮೂಲ ಇಲಾಖೆಗಳು ಹೋಗಲಿ, ರಾಜ್ಯದ ವಿವಿಧ ಭೂಭಾಗಗಳಿಗೆ ಸಂಬಂಧಿಸಿದ ಅನೇಕ ಕಚೇರಿಗಳು ಬೆಂಗಳೂರಿನಾಗ ಮುರಕೊಂಡು ಬಿದ್ದಾವು. ಉದಾಹರಣೆಗೆ ಬಯಲುಸೀಮೆ ಅಭಿವೃದ್ಧಿ ಮಂಡಳಿ, ಪಶ್ಚಿಮಘಟ್ಟ ಕಾವಲು ಸಮಿತಿ, ಮೀನುಗಾರಿಕೆ ನಿಗಮ, ಕಾಫಿ ಬೋರ್ಡು, ತೊಗರಿ ಬೋರ್ಡು, ಹರಳೆಣ್ಣೆ ಬೋರ್ಡು ಮುಂತಾದ ಕಚೇರಿಯ ಅದಕ್ಷ ಅಧ್ಯಕ್ಷರು, ಅದರ ಮೇಲೂ – ಕೆಳಗೂ ಜವಾಬುದಾರಿ ಇಲ್ಲದ ಮೇಲುಸ್ತುವಾರಿ ಅಧಿಕಾರಿಗಳು, ಅವರ ರಕ್ಷಕರು, ಭಕ್ಷಕರು, ಚಪರಾಸಿಗಳು, ಚಾಲಕರು, ಏಜೆಂಟ್ರು ಎಲ್ಲರೂ ಬೆಂಗಳೂರಿನಾಗ, ಅಲ್ಲಿನ ಹೆಚ್ಚುವರಿ ಭತ್ತೆ ಮತ್ತು ಇತರ ಆನುಷಿಂಗಿಕ ಫಲಗಳನ್ನು ಅನುಭೋಗಿಸುತ್ತಾ ಇದ್ದಾರ.

ಹಿಂದೊಮ್ಮೆ ವಿಧಾನಪರಿಷತ್ತಿನ ಸದಸ್ಯರೊಬ್ಬರು “ರಾಜ್ಯದ 350 ಜನ ಐಎಎಸ್ಸು ಅಧಿಕಾರಿಗಳ ಪೈಕಿ 300 ಜನ ಬರೆ ಬೆಂಗಳೂರಿನಲ್ಲಿ ಅದಾರ. ಇದು ಅನವಶ್ಯಕ, ಅವರನ್ನ ಜಿಲ್ಲೆಗಳಿಗೆ ಕಳಿಸಿರಿ”, ಅಂತ ಕೇಳಿದಾಗ, ಹಳೆ ಮೈಸೂರಿನ ಕೆಲ ಹಳೆ ತಲೆಗಳು ಆಕ್ಷೇಪಿಸಿದರು. “ಯಾಕೆ ನಂ ಬ್ಯಾಂಗಲೋರ್‌ಗೆ ಒಳ್ಳೆ ಆಫೀಸರ್ಸ್ ಬೇಡವಾ?” ಅಂತ ತರಲೆ ಮಾಡಿದರು.

ಘನ ರಾಜ್ಯ ಸರಕಾರ ಪ್ರತಿ ಜಿಲ್ಲೆಗೆ ಒಂದು ಉಸ್ತುವಾರಿ ಕಾರ್ಯದರ್ಶಿ ಅಂತ ಇಟಗೊಂಡದ. ಇವರಲ್ಲಿ ಕೆಲ ಪುಣ್ಯಾತರು ಮತ್ತು ಪುಣ್ಯಾತಗಿತ್ತಿಯರು ವಿಕ್ಟೋರಿಯಾ ರಾಣಿಯ ದತ್ತು ಪುತ್ರರು. ವಿಕ್ಟೋರಿಯಾ ರಾಣಿಯ ಕೆಲಸದ ಅವಧಿ ಬೆಳಿಗ್ಗೆ 11ರಿಂದ ಸಂಜೆ 5 ಆಗಿತ್ತಲ್ಲಾ, ಹಿಂಗಾಗಿ ಇವರೆಲ್ಲ, ಅದನ್ನು ಚಾಚೂತಪ್ಪದೆ ಪಾಲಿಸುವರು. ಆ ಜಿಲ್ಲೆಗೆ ಫ್ಲಯಿಟ್ ಇದೆಯಾ ಅಂತ ಕೇಳಿ, ತಿಳಕೊಂಡ ಮ್ಯಾಲೆನೆ ಆ ಜವಾಬುದಾರಿ ಒಪ್ಪಿಕೊಂಡವರು. ಬೆಳಿಗ್ಗೆ 11 ಗಂಟೆ ಫ್ಲಯಿಟ್‌ಗೆ ಬಂದು ಒಂದು ಮೀಟಿಂಗ್ ಮಾಡಿ, ಎಲ್ಲರ ಕಡೆಯಿಂದ ‘ಯಸ್ ಸರ್’, ‘ಓಕೆ ಸಾರ್’ ಅನ್ನಿಸಿಕೊಂಡು, ಯಾವಾಗ ಸಂಜೆ 5 ಗಂಟೆ ಆದೀತೋ, ಯಾವಾಗ ಫ್ಲಯಿಟ್ ಹಿಡಕೊಂಡು ವಾಪಸ್ ಬೆಂಗಳೂರಿಗೆ ಹೋದೆನೋ ಅಂತ ಓಡಿ ಹೋಗತಾರ. ಅಲ್ಲಿ ಏನು ಗಂಟು ಇಟ್ಟಿರತಾರೋ, ರಾತ್ರಿ ಮನಿಗೆ ಹೋಗಲಿಲ್ಲ ಅಂದ್ರ ಯಾವ ದರೊಡೆಕೋರರು ದೋಚಿಕೊಂಡು ಹೋಗತಾರೋ ಗೊತ್ತಿಲ್ಲ.

ಇದು ಬರೆ ಬೀದರ್- ಗುಲ್ಬರ್ಗದ ಕತಿ ಅಲ್ಲ. ಚಾಮರಾಜನಗರ, ಚಿತ್ರದುರ್ಗದ ಕತಿನೂ ಹೌದು. ಕೇವಲ ಹಿಂದಿ ಮಾತಾಡುವ ಕಾಶ್ಮೀರಿ ಲಾಲಾಗಳ ಸ್ವಭಾವ ಅಲ್ಲ. ಇಲ್ಲೇ ಬಳ್ಳಾರಿಯ ಹಳ್ಳಿಯಲ್ಲಿ ಹುಟ್ಟಿ ಐಎಎಸ್ಸು ಪಾಸಾಗಿ ಬೆಂಗಳೂರಿಗೆ ಹೋದಮ್ಯಾಲೆ ತನ್ನೂರು ಮರೆತವನ ಕತಿನೂ ಹೌದು.

ಬೆಳಗಾವಿಯ ಹೊರಗ ಒಂದು ಕಲ್ಲು ಹೃದಯದ ಕಟ್ಟಡ ಅದ. ಸುಮಾರು 400 ಕೋಟಿ ರೂಪಾಯಿಯಲ್ಲಿ ಲೋಕೋ ಗೈರು ಉಪಯೋಗಿ ಇಲಾಖೆಯವರು ಕಟ್ಟಿದ ಈ ಅನಗತ್ಯ ಆಲಯಕ್ಕೆ ಸುವರ್ಣಸೌಧ ಅಂತ ಹೆಸರು. ಈ ಬಿಳಿಯಾನೆಯನ್ನು ಸ್ವಚ್ಛ ಮಾಡಿ, ಮೈ ತೊಳದು, ಹುಲ್ಲು ತಿನಿಸಲಿಕ್ಕೆ ವರ್ಷಕ್ಕೆ 2-3 ಕೋಟಿ ಖರ್ಚು ಆಗತದ. ಬೆಂಗಳೂರು ಎಂಬೊ ದಂತಗೋಪುರದ ಮುತ್ತುಗದ ಕುರ್ಚಿಗಳ ಮ್ಯಾಲೆ ಫೆವಿಕಾಲ್ ಮೆತ್ತಿ ಕೂತಿರುವ ಪುಢಾರಿ ಹಾಗೂ ಅಧಿಕಾರಿಗಳಿಗೆ ಇಲ್ಲಿಯೂ ಸದನ ನಡೆಸಬಹುದು ಅಂತ ಅನ್ನಿಸಿ ನಾಲ್ಕು ವರ್ಷ ಆತು.

“ವಿಕೇಂದ್ರೀಕರಣ ಇರಲೇಬೇಕು, ಆದರ ಬರೆ ನನ್ನ ಲೆವೆಲ್ ತನಕ ಆಷ್ಟ ಇರಬೇಕು. ನನ್ನ ಕೆಳಗಿನ ಎಲ್ಲ ಅಧಿಕಾರವೂ ನನ್ನಲ್ಲೇ ಕೇಂದ್ರೀಕೃತ ಆಗಿರಬೇಕು” ಅನ್ನೋದು ಪುಢಾರಿ-ಅಧಿಕಾರಿಗಳ ಬಯಕೆ, ಅಂತ ಒಂದು ಹಳೆ ಜೋಕು ಐತಿ. ಇದೆ ಲಾಜಿಕ್ ಜಿಲ್ಲೆ, ತಾಲೂಕ, ಗ್ರಾಮ ಪಂಚಾಯತಿವರೆಗೂ ಅನ್ವಯ ಆಗತದ. ರಾಜಧಾನಿ ರಾಜಕೀಯ ಅನ್ನೋದು ಸದ್ಯದ ಮಟ್ಟಿಗೆ ಐದು ಅಂಕದ ನಾಟಕ.

ಸಂಸತ್ತು ಅಧಿವೇಶನದ ಪ್ರಶ್ನೆಯ ಅವಧಿ ರದ್ದುಗೊಳಿಸಿದ ಕೇಂದ್ರ: ಖಂಡಿಸಿ ಪತ್ರಬರೆದ 800 ತಜ್ಞರು
PC: Jagran Josh

ಅಂದಹಂಗ ದೆಹಲಿ ಅಂದರೆ ಪರ್ಷಿಯನ್, ಉರ್ದು ಭಾಷೆಯಲ್ಲಿ ಮೆಟ್ಟಿಲು. ದೇಹಲವಿ ಅನ್ನೋದು ಉರ್ದು ಭಾಷೆಯ ಇನ್ನೊಂದು ಹೆಸರು. ಆದರ ನಮಗ ಎಲ್ಲರಿಗೂ ಗೊತ್ತಿರೋ ಹಂಗ, ಮನಿ ಅನ್ನೋದು ಮೆಟ್ಟಿಲಿನಿಂದ ಶುರು ಆಗಬೇಕೇ ಹೊರತು ಅಲ್ಲಿಗೆ ಮುಗದು ಹೋಗಬಾರದು. ಇನ್ನು ದೆಹಲಿಯ ದೊರೆಗಳು ಗೆದ್ದ ದಕ್ಷಿಣದ ಮೊದಲ ನಗರ ಔರಂಗಾಬಾದ್. ಇದರ ಮೂಲ ಹೆಸರು ‘TIQ’, ಅಂದ್ರ ದಕ್ಷಿಣದ ಕಿಡಕಿ. ಕಿಡಕಿಯಿಂದ ಹೊರ ಜಗತ್ತು ತೆರೀಬೇಕು ಆಷ್ಟ, ಮುಚ್ಚಬಾರದು.

ಶರ್ಲಾಕ್ ಹೋಮ್ಸ್, ಡಾ. ವಾಟ್ಸನ್ ಎನ್ನುವ ಅಜರಾಮರ ಪಾತ್ರಗಳನ್ನು ಸೃಷ್ಟಿಸಿ ಜಗತ್ತನ್ನೇ ದಂಗುಬಡಿಸಿದ. ಮನುಕುಲ ಮರೆಯಲಾರದ ಪತ್ತೇದಾರಿ ಬರಹಗಾರ ಆರ್ಥರ್ ಕೋನಾನ್ ಡಾಯ್ಲನ ಒಂದು ಮಾತು ಇಲ್ಲೇ ನೆನಪು ಆಗತದ: “ಈ ಲಂಡನ್ ಅನ್ನುವುದು ಒಂದು ಮಹಾನ್ ಕಸದ ಗುಂಡಿ. ಈ ಸಾಮ್ರಾಜ್ಯದ ಎಲ್ಲ
ಸೋಮಾರಿಗಳು ಹಾಗೂ ಕೂತು ತಿನ್ನುವವರು ಇದರ ಆಕರ್ಷಣೆ ತಪ್ಪಿಸಿಕೊಳ್ಳಲಾರದೆ ಇಲ್ಲಿ ಬಂದು ಬೀಳುತ್ತಾರೆ. ಅಂತೆಯೇ ನಾನೂ ಇಲ್ಲಿಗೆ ಬಂದು ಬಿದ್ದೆ.”

ಹುಟ್ಟಿನಿಂದ ಲಂಡನ್‌ನವನಾಗಿರದ, ವೃತ್ತಿಯಿಂದ ವೈದ್ಯನಾಗಿ, ಬರಹದಿಂದ ಜನಪ್ರಿಯತೆ ಪಡೆದ ಡಾ. ಡಾಯ್ಲ, ತನ್ನದೇ ಪ್ರತಿಬಿಂಬವಾದ ಡಾ. ವಾಟ್ಸನ್‌ನ ಬಾಯಿಯಿಂದ ಈ ಮಾತು ಹೇಳಿಸಿದ. ಇದು ವಿಶ್ವದ ಪ್ರತಿ ನಾಗರಿಕತೆಗೆ, ಅನಾದಿಕಾಲದವರೆಗೂ ಅನ್ವಯ ಆಗತದ ಅಂತ ಅನ್ನಸತದ.

ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಡೇಟಾಖೋಲಿ: ಮಾಧ್ಯಮ ನಲ್ಲರು – ಯಾರ ಕೆಲಸ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...