Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು - ರಾಜಧಾನಿ ಎಂಬ ಮಾಯಾಮೋಹಿನಿ

ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

- Advertisement -
- Advertisement -

ಮೊನ್ನೆ ಭಾರತಮಾತೆಯ ಅನೇಕ ಸುಪುತ್ರರು, ‘ವಿಕೇಂದ್ರೀಕರಣ ವಿನಾಶಕ್ಕೆ ದಾರಿ’, ‘ಒಕ್ಕೂಟ ಸರಕಾರ ಒಡೆದು ಹಾಕೀತು’, ‘ರಾಜ್ಯ ಸರಕಾರಗಳು ರಜೆಯ ಮೇಲೆ ಹೋಗಲಿ’, ‘ಒಂದು ದೇಶ, ಒಂದು ಸರಕಾರ’ ಅಂತೆಲ್ಲಾ ಸೋಷಿಯಲ್ ಮೀಡಿಯಾದಾಗ ಬರಕೊಂಡರು. ಅದು ಲಸಿಕೆ ಪೂರೈಕೆಗೆ ಸಂಬಂಧಪಟ್ಟ ಗೊಂದಲದ ಸಲುವಾಗಿ.

ಅವರ ಪ್ರಕಾರ ಭಾರತ ಎಂಬೊ ಉಪಖಂಡಕ್ಕ ದೆಹಲಿ ಎಂಬ ದೂರದ ಊರಿನಲ್ಲಿ ಒಂದು ಸರಕಾರ ಅಂತ ಇದ್ದರೆ ಸಾಕು. ದೇಶದ ಇತರ ರಾಜ್ಯಗಳು, ಅವುಗಳ ರಾಜಧಾನಿಗಳು, ಕೇವಲ ಭಾರತದ ಭೂಪಟದ ಮೇಲಿನ ಬಿಂದುಗಳು ಅಷ್ಟೇ ಮತ್ತು ದೆಹಲಿಯ ಸುಲ್ತಾನರು ನೀಡುವ ಭಿಕ್ಷೆಯಲ್ಲಿ ಬದುಕುವ ಭಿಕಾರಿಗಳು ಎಂಬಂತಾಗಿತ್ತು.

ಇದನ್ನ ನಾವು ಭಾವನಾತ್ಮಕವಾಗಿ ನೋಡದೆ, ಲಭ್ಯ ದತ್ತಾಂಶಗಳ ಮೂಲಕ ನೋಡೋಣ. ಉದಾಹರಣೆಗೆ ಒಕ್ಕೂಟ ಸರಕಾರದ ಕೇಂದ್ರ ಸ್ಥಾನ ದೆಹಲಿ ಒಳಗ 55 ಇಲಾಖೆಗಳ ಸುಮಾರು 1335 ಕಚೇರಿಗಳು ಅದಾವು. ‘ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ’ ಅಂದರ ‘ಬರೆ ದೆಹಲಿಗೆ ಬಂತು’ ಅಂದಂಗ ಆಗೇದ. ಸುಮಾರು 130 ಕೋಟಿ ಜನ ಇರುವ, 30 ರಾಜ್ಯಗಳ, 600 ಜಿಲ್ಲೆಗಳ, 200 ಸ್ಮಾರ್ಟ್ ಸಿಟಿಗಳ, 30 ಲಕ್ಷ ಕಿಲೋಮೀಟರ್ ಚದುರ ಕಿಲೋಮೀಟರ್ ವ್ಯಾಪ್ತಿಯ, ಈ ದೇಶದ ಒಳಗ ಕೆಲವು ಕಚೇರಿಗಳನ್ನ ಆದರೂ ದೆಹಲಿಯಿಂದ ದೂರ ತೊಗೊಂಡು ಹೋಗಬೇಕು ಅಂತ ಇಲ್ಲಿಯವರೆಗಿನ 14 ಪ್ರಧಾನ ಮಂತ್ರಿಗಳಿಗೆ, ಅವರು ನಡೆಸಿದ ಸರಕಾರಗಳಿಗೆ ಅವಶ್ಯಕ ಅನ್ನಿಸಲಿಲ್ಲ. ಅದು ಹೋಗಲಿ, 545 ಲೋಕಸಭಾ ಕ್ಷೇತ್ರಗಳಿಂದ ನಮ್ಮ ವೋಟು ತೊಗೊಂಡು, ನಮ್ಮ ಸುಂಕದ ಹಣದಿಂದ ಬಿಂಕ ಮಾಡಿ ಮೆರೆಯುವ ಸಂಸತ್ತು ಸದಸ್ಯರಿಗೂ ಅನ್ನಿಸಲಿಲ್ಲ. ಸ್ವಾತಂತ್ರ ಬಂದು 75 ವರ್ಷ ಆಗಲಿಕ್ಕೆ ಬಂದರೂ ಈ ಹಣೆಬಾರ ಐತಿ ಅಂದರ, ಇನ್ನು ಮುಂದೆ ಅದು ಬದಲು ಆಗತದೋ ಇಲ್ಲೋ ಖಾತ್ರಿ ಇಲ್ಲ.

ಹಂಗ ಅಂತ ಅದು ಬರಿಯ ದೆಹಲಿಗೆ ಸೀಮಿತವಾದ ಭಾವ ಅಂತ ಅಂದುಕೋ ಬ್ಯಾಡ್ರಿ. ಇದೇ ಭಾವ ಇತರರಲ್ಲೂ ಕಾಣತದ. ಇನ್ನು ಬೆಂಗಳೂರಿಗೆ ಬಂದರ, ಅಲ್ಲಿಯೂ ಇದೆ ಹಣೆಬಾರ.

ರಾಜ್ಯ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷರಿಂದ ವ್ಯವಸ್ಥೆಗಳ ಪರಿಶೀಲನೆ

ವರ್ಷಕ್ಕೆ ಎರಡು ಬಾರಿ ಯಾವುದೋ ಹೆಸರು ಕೇಳದ ಪ್ರವಾಸೋದ್ಯಮ ಪತ್ರಿಕೆಯವರು ಮಾಡಿದ ಸರ್ವೇಪ್ರಕಾರ ಇಡೀ ದೇಶದಾಗ ವಾಸಕ್ಕ ಅತ್ಯಂತ ಸೂಕ್ತವಾದ ನಗರ ‘ನಮ್ಮ ಬೆಂಗಳೂರು’ ಅಂತ ಸೋಶಿಯಲ್ ಮೀಡಿಯಾದಾಗ ಚೀರಿಕೊಳ್ಳುವ ಅನೇಕ ಕನ್ನಡಿಗರ ಕಣ್ಣಿಗೆ ಇತರ ಜಿಲ್ಲೆ, ನಗರ, ಹಳ್ಳಿಗಳು ಕಾಣೋದ ಇಲ್ಲ. ಇದು ಮಕ್ಕಳ ಕೂಟ ಒಂದನೇ ಕ್ರಾಸ್‌ನಲ್ಲಿ ಹುಟ್ಟಿ, ಬಸವನಗುಡಿ ಕಾಲೇಜಿಗೆ ಹೋಗಿ, ಮಲ್ಲೇಶ್ವರದಲ್ಲಿ ಮನೆ ಮಾಡಿ, ಪಕ್ಕದ ಕ್ರಾಸ್ ಅಂಕಲ್ ಅವರ ಮಗಳನ್ನು ಮದುವೆ ಮಾಡಿಕೊಂಡು ರಾಜಾಜಿನಗರದಲ್ಲಿ ಅಂತಿಮ ಯಾತ್ರೆ ಮುಗಿಸಿದ ‘ಸೆವೆಂತ್ ಜನರೇಷನ್ ಬ್ಯಾಂಗಲೋರಿಯನ್ಸ್’ ಕತೆ ಅಷ್ಟೇ ಅಲ್ಲ. ಕೂಗನಹಳ್ಳಿ ಎಂಬೊ ಕುಗ್ರಾಮದಲ್ಲಿ ಹುಟ್ಟಿ ಹೊಟ್ಟೆಪಾಡಿಗೆ ರಾಜಧಾನಿಯ ಸಿಂಗಲ್ ರೂಮಿನಲ್ಲಿ ಬೆಂದಕಾಳೂರು ತಿಂದು ಬದುಕಿದ ಉತ್ತರ ಕರ್ನಾಟಕದ ವೀರ ಕನ್ನಡಿಗರ ಕತೆಯೂ ಹೌದು.

ಮೂಲ ಇಲಾಖೆಗಳು ಹೋಗಲಿ, ರಾಜ್ಯದ ವಿವಿಧ ಭೂಭಾಗಗಳಿಗೆ ಸಂಬಂಧಿಸಿದ ಅನೇಕ ಕಚೇರಿಗಳು ಬೆಂಗಳೂರಿನಾಗ ಮುರಕೊಂಡು ಬಿದ್ದಾವು. ಉದಾಹರಣೆಗೆ ಬಯಲುಸೀಮೆ ಅಭಿವೃದ್ಧಿ ಮಂಡಳಿ, ಪಶ್ಚಿಮಘಟ್ಟ ಕಾವಲು ಸಮಿತಿ, ಮೀನುಗಾರಿಕೆ ನಿಗಮ, ಕಾಫಿ ಬೋರ್ಡು, ತೊಗರಿ ಬೋರ್ಡು, ಹರಳೆಣ್ಣೆ ಬೋರ್ಡು ಮುಂತಾದ ಕಚೇರಿಯ ಅದಕ್ಷ ಅಧ್ಯಕ್ಷರು, ಅದರ ಮೇಲೂ – ಕೆಳಗೂ ಜವಾಬುದಾರಿ ಇಲ್ಲದ ಮೇಲುಸ್ತುವಾರಿ ಅಧಿಕಾರಿಗಳು, ಅವರ ರಕ್ಷಕರು, ಭಕ್ಷಕರು, ಚಪರಾಸಿಗಳು, ಚಾಲಕರು, ಏಜೆಂಟ್ರು ಎಲ್ಲರೂ ಬೆಂಗಳೂರಿನಾಗ, ಅಲ್ಲಿನ ಹೆಚ್ಚುವರಿ ಭತ್ತೆ ಮತ್ತು ಇತರ ಆನುಷಿಂಗಿಕ ಫಲಗಳನ್ನು ಅನುಭೋಗಿಸುತ್ತಾ ಇದ್ದಾರ.

ಹಿಂದೊಮ್ಮೆ ವಿಧಾನಪರಿಷತ್ತಿನ ಸದಸ್ಯರೊಬ್ಬರು “ರಾಜ್ಯದ 350 ಜನ ಐಎಎಸ್ಸು ಅಧಿಕಾರಿಗಳ ಪೈಕಿ 300 ಜನ ಬರೆ ಬೆಂಗಳೂರಿನಲ್ಲಿ ಅದಾರ. ಇದು ಅನವಶ್ಯಕ, ಅವರನ್ನ ಜಿಲ್ಲೆಗಳಿಗೆ ಕಳಿಸಿರಿ”, ಅಂತ ಕೇಳಿದಾಗ, ಹಳೆ ಮೈಸೂರಿನ ಕೆಲ ಹಳೆ ತಲೆಗಳು ಆಕ್ಷೇಪಿಸಿದರು. “ಯಾಕೆ ನಂ ಬ್ಯಾಂಗಲೋರ್‌ಗೆ ಒಳ್ಳೆ ಆಫೀಸರ್ಸ್ ಬೇಡವಾ?” ಅಂತ ತರಲೆ ಮಾಡಿದರು.

ಘನ ರಾಜ್ಯ ಸರಕಾರ ಪ್ರತಿ ಜಿಲ್ಲೆಗೆ ಒಂದು ಉಸ್ತುವಾರಿ ಕಾರ್ಯದರ್ಶಿ ಅಂತ ಇಟಗೊಂಡದ. ಇವರಲ್ಲಿ ಕೆಲ ಪುಣ್ಯಾತರು ಮತ್ತು ಪುಣ್ಯಾತಗಿತ್ತಿಯರು ವಿಕ್ಟೋರಿಯಾ ರಾಣಿಯ ದತ್ತು ಪುತ್ರರು. ವಿಕ್ಟೋರಿಯಾ ರಾಣಿಯ ಕೆಲಸದ ಅವಧಿ ಬೆಳಿಗ್ಗೆ 11ರಿಂದ ಸಂಜೆ 5 ಆಗಿತ್ತಲ್ಲಾ, ಹಿಂಗಾಗಿ ಇವರೆಲ್ಲ, ಅದನ್ನು ಚಾಚೂತಪ್ಪದೆ ಪಾಲಿಸುವರು. ಆ ಜಿಲ್ಲೆಗೆ ಫ್ಲಯಿಟ್ ಇದೆಯಾ ಅಂತ ಕೇಳಿ, ತಿಳಕೊಂಡ ಮ್ಯಾಲೆನೆ ಆ ಜವಾಬುದಾರಿ ಒಪ್ಪಿಕೊಂಡವರು. ಬೆಳಿಗ್ಗೆ 11 ಗಂಟೆ ಫ್ಲಯಿಟ್‌ಗೆ ಬಂದು ಒಂದು ಮೀಟಿಂಗ್ ಮಾಡಿ, ಎಲ್ಲರ ಕಡೆಯಿಂದ ‘ಯಸ್ ಸರ್’, ‘ಓಕೆ ಸಾರ್’ ಅನ್ನಿಸಿಕೊಂಡು, ಯಾವಾಗ ಸಂಜೆ 5 ಗಂಟೆ ಆದೀತೋ, ಯಾವಾಗ ಫ್ಲಯಿಟ್ ಹಿಡಕೊಂಡು ವಾಪಸ್ ಬೆಂಗಳೂರಿಗೆ ಹೋದೆನೋ ಅಂತ ಓಡಿ ಹೋಗತಾರ. ಅಲ್ಲಿ ಏನು ಗಂಟು ಇಟ್ಟಿರತಾರೋ, ರಾತ್ರಿ ಮನಿಗೆ ಹೋಗಲಿಲ್ಲ ಅಂದ್ರ ಯಾವ ದರೊಡೆಕೋರರು ದೋಚಿಕೊಂಡು ಹೋಗತಾರೋ ಗೊತ್ತಿಲ್ಲ.

ಇದು ಬರೆ ಬೀದರ್- ಗುಲ್ಬರ್ಗದ ಕತಿ ಅಲ್ಲ. ಚಾಮರಾಜನಗರ, ಚಿತ್ರದುರ್ಗದ ಕತಿನೂ ಹೌದು. ಕೇವಲ ಹಿಂದಿ ಮಾತಾಡುವ ಕಾಶ್ಮೀರಿ ಲಾಲಾಗಳ ಸ್ವಭಾವ ಅಲ್ಲ. ಇಲ್ಲೇ ಬಳ್ಳಾರಿಯ ಹಳ್ಳಿಯಲ್ಲಿ ಹುಟ್ಟಿ ಐಎಎಸ್ಸು ಪಾಸಾಗಿ ಬೆಂಗಳೂರಿಗೆ ಹೋದಮ್ಯಾಲೆ ತನ್ನೂರು ಮರೆತವನ ಕತಿನೂ ಹೌದು.

ಬೆಳಗಾವಿಯ ಹೊರಗ ಒಂದು ಕಲ್ಲು ಹೃದಯದ ಕಟ್ಟಡ ಅದ. ಸುಮಾರು 400 ಕೋಟಿ ರೂಪಾಯಿಯಲ್ಲಿ ಲೋಕೋ ಗೈರು ಉಪಯೋಗಿ ಇಲಾಖೆಯವರು ಕಟ್ಟಿದ ಈ ಅನಗತ್ಯ ಆಲಯಕ್ಕೆ ಸುವರ್ಣಸೌಧ ಅಂತ ಹೆಸರು. ಈ ಬಿಳಿಯಾನೆಯನ್ನು ಸ್ವಚ್ಛ ಮಾಡಿ, ಮೈ ತೊಳದು, ಹುಲ್ಲು ತಿನಿಸಲಿಕ್ಕೆ ವರ್ಷಕ್ಕೆ 2-3 ಕೋಟಿ ಖರ್ಚು ಆಗತದ. ಬೆಂಗಳೂರು ಎಂಬೊ ದಂತಗೋಪುರದ ಮುತ್ತುಗದ ಕುರ್ಚಿಗಳ ಮ್ಯಾಲೆ ಫೆವಿಕಾಲ್ ಮೆತ್ತಿ ಕೂತಿರುವ ಪುಢಾರಿ ಹಾಗೂ ಅಧಿಕಾರಿಗಳಿಗೆ ಇಲ್ಲಿಯೂ ಸದನ ನಡೆಸಬಹುದು ಅಂತ ಅನ್ನಿಸಿ ನಾಲ್ಕು ವರ್ಷ ಆತು.

“ವಿಕೇಂದ್ರೀಕರಣ ಇರಲೇಬೇಕು, ಆದರ ಬರೆ ನನ್ನ ಲೆವೆಲ್ ತನಕ ಆಷ್ಟ ಇರಬೇಕು. ನನ್ನ ಕೆಳಗಿನ ಎಲ್ಲ ಅಧಿಕಾರವೂ ನನ್ನಲ್ಲೇ ಕೇಂದ್ರೀಕೃತ ಆಗಿರಬೇಕು” ಅನ್ನೋದು ಪುಢಾರಿ-ಅಧಿಕಾರಿಗಳ ಬಯಕೆ, ಅಂತ ಒಂದು ಹಳೆ ಜೋಕು ಐತಿ. ಇದೆ ಲಾಜಿಕ್ ಜಿಲ್ಲೆ, ತಾಲೂಕ, ಗ್ರಾಮ ಪಂಚಾಯತಿವರೆಗೂ ಅನ್ವಯ ಆಗತದ. ರಾಜಧಾನಿ ರಾಜಕೀಯ ಅನ್ನೋದು ಸದ್ಯದ ಮಟ್ಟಿಗೆ ಐದು ಅಂಕದ ನಾಟಕ.

ಸಂಸತ್ತು ಅಧಿವೇಶನದ ಪ್ರಶ್ನೆಯ ಅವಧಿ ರದ್ದುಗೊಳಿಸಿದ ಕೇಂದ್ರ: ಖಂಡಿಸಿ ಪತ್ರಬರೆದ 800 ತಜ್ಞರು
PC: Jagran Josh

ಅಂದಹಂಗ ದೆಹಲಿ ಅಂದರೆ ಪರ್ಷಿಯನ್, ಉರ್ದು ಭಾಷೆಯಲ್ಲಿ ಮೆಟ್ಟಿಲು. ದೇಹಲವಿ ಅನ್ನೋದು ಉರ್ದು ಭಾಷೆಯ ಇನ್ನೊಂದು ಹೆಸರು. ಆದರ ನಮಗ ಎಲ್ಲರಿಗೂ ಗೊತ್ತಿರೋ ಹಂಗ, ಮನಿ ಅನ್ನೋದು ಮೆಟ್ಟಿಲಿನಿಂದ ಶುರು ಆಗಬೇಕೇ ಹೊರತು ಅಲ್ಲಿಗೆ ಮುಗದು ಹೋಗಬಾರದು. ಇನ್ನು ದೆಹಲಿಯ ದೊರೆಗಳು ಗೆದ್ದ ದಕ್ಷಿಣದ ಮೊದಲ ನಗರ ಔರಂಗಾಬಾದ್. ಇದರ ಮೂಲ ಹೆಸರು ‘TIQ’, ಅಂದ್ರ ದಕ್ಷಿಣದ ಕಿಡಕಿ. ಕಿಡಕಿಯಿಂದ ಹೊರ ಜಗತ್ತು ತೆರೀಬೇಕು ಆಷ್ಟ, ಮುಚ್ಚಬಾರದು.

ಶರ್ಲಾಕ್ ಹೋಮ್ಸ್, ಡಾ. ವಾಟ್ಸನ್ ಎನ್ನುವ ಅಜರಾಮರ ಪಾತ್ರಗಳನ್ನು ಸೃಷ್ಟಿಸಿ ಜಗತ್ತನ್ನೇ ದಂಗುಬಡಿಸಿದ. ಮನುಕುಲ ಮರೆಯಲಾರದ ಪತ್ತೇದಾರಿ ಬರಹಗಾರ ಆರ್ಥರ್ ಕೋನಾನ್ ಡಾಯ್ಲನ ಒಂದು ಮಾತು ಇಲ್ಲೇ ನೆನಪು ಆಗತದ: “ಈ ಲಂಡನ್ ಅನ್ನುವುದು ಒಂದು ಮಹಾನ್ ಕಸದ ಗುಂಡಿ. ಈ ಸಾಮ್ರಾಜ್ಯದ ಎಲ್ಲ
ಸೋಮಾರಿಗಳು ಹಾಗೂ ಕೂತು ತಿನ್ನುವವರು ಇದರ ಆಕರ್ಷಣೆ ತಪ್ಪಿಸಿಕೊಳ್ಳಲಾರದೆ ಇಲ್ಲಿ ಬಂದು ಬೀಳುತ್ತಾರೆ. ಅಂತೆಯೇ ನಾನೂ ಇಲ್ಲಿಗೆ ಬಂದು ಬಿದ್ದೆ.”

ಹುಟ್ಟಿನಿಂದ ಲಂಡನ್‌ನವನಾಗಿರದ, ವೃತ್ತಿಯಿಂದ ವೈದ್ಯನಾಗಿ, ಬರಹದಿಂದ ಜನಪ್ರಿಯತೆ ಪಡೆದ ಡಾ. ಡಾಯ್ಲ, ತನ್ನದೇ ಪ್ರತಿಬಿಂಬವಾದ ಡಾ. ವಾಟ್ಸನ್‌ನ ಬಾಯಿಯಿಂದ ಈ ಮಾತು ಹೇಳಿಸಿದ. ಇದು ವಿಶ್ವದ ಪ್ರತಿ ನಾಗರಿಕತೆಗೆ, ಅನಾದಿಕಾಲದವರೆಗೂ ಅನ್ವಯ ಆಗತದ ಅಂತ ಅನ್ನಸತದ.

ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಡೇಟಾಖೋಲಿ: ಮಾಧ್ಯಮ ನಲ್ಲರು – ಯಾರ ಕೆಲಸ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...