Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...