Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...