Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...