Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...

ಬಂಗಾಳ ಎಸ್‌ಐಆರ್‌: 5 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್; 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಪ್ರಕ್ರಿಯೆ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ 5.46 ಲಕ್ಷ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಅನುಮಾನಾಸ್ಪದ ಎಂಬ ಕಾರಣಕ್ಕೆ 60,06,675 ಹೆಸರುಗಳು...

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com...

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...