Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...