Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...