Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...