Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...