Homeಕರ್ನಾಟಕಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

- Advertisement -
- Advertisement -

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಸರ್ಕಾರವನ್ನು ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದು ತಳ್ಳಿಕೊಂಡು ಹೋಗುತ್ತಿದ್ದೇವೆ” ಎಂದು ಮಾಧುಸ್ವಾಮಿ ಹೇಳಿರುವುದು ದಾಖಲಾಗಿದ್ದು, ಆಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾದದ ಬಳಿಕ ಮಾಧುಸ್ವಾಮಿಯವರೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜೀನಾಮೆ ಕೇಳಿದರೆ, ಮುಖ್ಯಮಂತ್ರಿಯವರಿಗೆ ಒಳ್ಳೆಯದಾಗುವುದಾದರೆ, ಪಕ್ಷಕ್ಕೆ ಒಳ್ಳೆಯದಾಗುವುದಾದರೆ ಎರಡು ಕ್ಷಣ ಯೋಚನೆ ಮಾಡದೆ ರಾಜೀನಾಮೆ ನೀಡುತ್ತೇನೆ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ವೇಳೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಿ ಎಂದರೆ?” ಎಂದು ಪತ್ರಕರ್ತರು ಕೇಳಿದಾಗ ಮಾಧುಸ್ವಾಮಿಯವರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ‘ಆಡಿಯೊ ನನ್ನದೇ’ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, “ರೇಣುಕಾಚಾರ್ಯರು ನೀಡಿರುವ ಹೇಳಿಕೆ ನನಗೆ ಸಂಬಂಧಪಟ್ಟಿಲ್ಲ. ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ. ರೇಣುಕಾಚಾರ್ಯರಿಗೆ ವಿವರಿಸುವ ಪರಿಸ್ಥಿತಿ ಇಲ್ಲ” ಎಂದಿದ್ದಾರೆ.

ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕೇಳಿದಾಗ, “ನಾನು ಇಷ್ಟು ಹೇಳಿದ್ದಕ್ಕೆ ಇಷ್ಟಾಗಿದೆ. ನನ್ನಿಂದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಹೇಳಿಸಿ ಏನು ಮಾಡಬೇಕು ಅಂತ ಇದ್ದೀರಪ್ಪ” ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ಇರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಜವಾಬ್ದಾರಿ ಕೊಟ್ಟಾಗ ಪೂರ್ಣ ಜವಾಬ್ದಾರಿ ತೆಗೆದುಕೊಂಡು ಮಾಡುತ್ತೇನೆ. ಜವಾಬ್ದಾರಿ ಇಲ್ಲದಿದ್ದಾಗ ಅದರ ತಂಟೆಗೆ ಹೋಗುವುದಿಲ್ಲ. ನನಗೇನು ಆಗಬೇಕಿದೆ. ನನಗೆ ಜವಾಬ್ದಾರಿ ಇಲ್ಲವಾದರೆ ನಾನು ಬರಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯೊಳಗೆಯೇ ಭಿನ್ನಾಭಿಪ್ರಾಯ ಸೃಷ್ಟಿಸಿದ ಮಾಧುಸ್ವಾಮಿ ಆಡಿಯೊ!

ವೈರಲ್ ಆಡಿಯೊ ಕುರಿತು ಮಾತನಾಡಿರುವ ಅವರು, “ಸನ್ಮಾನ್ಯ ಸೋಮಶೇಖರ್‌ ಅವರಿಗೂ ಹೇಳಿದ್ದೇನೆಂದು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದೆ. ಅಷ್ಟು ಬಿಟ್ಟರೆ ನಾನು ಇನ್ಯಾವ ಮಾತು ಆಡಿಲ್ಲ. ಅಷ್ಟಕ್ಕೆ ಸೋಮಶೇಖರ್‌ ಅವರು ಇಷ್ಟು ಮಾತನಾಡಿದ್ದಾರೆ. ಇದು ಬಹಳ ದಿನಗಳ ಹಿಂದಿನ ಆಡಿಯೊ” ಎಂದಿದ್ದಾರೆ.

“ಸರ್ಕಾರ ಖಂಡಿತ ನಡೆಯುತ್ತಿದೆ. ಕರೆ ಮಾಡಿದ ವ್ಯಕ್ತಿ ಪ್ರಚೋದನೆ ಮಾಡಿದ್ದಕ್ಕೆ ಹೇಳಿದ್ದೇನೆ. ಆತ ಯಾವುದನ್ನು ಎಡಿಟ್ ಮಾಡಿದನೋ, ಯಾವುದನ್ನು ಉಳಿಸಿಕೊಂಡನೋ ನನಗೇನು ಗೊತ್ತು? ಮುಖ್ಯಮಂತ್ರಿಯವರಿಗೆ ವಿವರಿಸಿದ್ದೇನೆ. ಅವರು ಕನ್‌ವಿನ್ಸ್ ಆಗಿದ್ದಾರೆ. ರಾಜೀನಾಮೆ ವಿಷಯ ಬಂದರೆ ಧಾರಾಳವಾಗಿ ಕೊಡುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಆಡಿಯೊ ರೆಕಾರ್ಡ್ ಮಾಡಿ, ಇಷ್ಟು ಲಂಬಿಸಿದ ಮೇಲೆ ಒಂದು ಪ್ರಕರಣ ದಾಖಲಿಸುವುದು ಸೂಕ್ತ ಎಂದು ಲಾಯರ್‌‌ ಬಳಿ ಕೇಳಿದ್ದೇನೆ. ಇದನ್ನು ಬಿಟ್ಟುಬಿಡಿ ಎಳೆದುಕೊಂಡು ಹೋಗಬೇಡಿ ಎಂದಿದ್ದಾರೆ. ಯಾರೋ ಭಾಸ್ಕರ ಅನ್ನೋರು ಮಾತನಾಡಿದ್ದಾನೆ. ಆತ ಯಾರೆಂದು ನನಗೂ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...