Homeಮುಖಪುಟಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ

- Advertisement -
- Advertisement -

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಲಡಾಖ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿದ ಫೋಟೊಗಳ ಕುರಿತು ಎದ್ದಿರುವ ವಿವಾದಕ್ಕೆ ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ಕೇವಲ ಪ್ರಧಾನಿಯವರ ಫೋಟೋಶೂಟ್‌ಗಾಗಿ ಆ ಆಸ್ಪತ್ರೆಯನ್ನು ರಚಿಸಲಾಗಿದೆ. ಅದರಲ್ಲಿ ಪ್ರೊಜೆಕ್ಟರ್, ಮೈಕ್ ಎಲ್ಲಾ ಇದ್ದು ರೋಗಿಗಳಿಗೆ ಅಗತ್ಯವಾಗಿರುವ ಮೆಡಿಸನ್ ಟೇಬಲ್, ಬೆಡ್ ಶೀಟ್ ಇಲ್ಲ. ಇದೇ ಹಾಲ್ ನಲ್ಲಿ ಈ ಹಿಂದೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಭೇಟಿ ಕೊಟ್ಟಾಗ ಔತಣಕೂಟ ಏರ್ಪಡಿಲಾಗಿತ್ತು. ಈ ಮೋದಿ ಹೋದಾಗ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗಿದೆ ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು.

ಈ ಆರೋಪವು ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ ಎಂದು ಭಾರತೀಯ ಸೇನೆಯು ಹೇಳಿದೆ. ವೈದ್ಯಕೀಯ ವಾರ್ಡ್ ಆಡಿಯೊ-ವಿಡಿಯೋ ತರಬೇತಿ ಕೊಠಡಿಯಾಗಿದ್ದು, ಇದನ್ನು ಪ್ರಧಾನಿ ಮೋದಿಯ ಭೇಟಿಗೆ ಬಹಳ ಹಿಂದೆಯೇ ಕೋವಿಡ್-19 ಪ್ರೋಟೋಕಾಲ್‌ನ ಭಾಗವಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಅದು ಹೇಳಿದೆ.

“ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸುತ್ತಿರುವುದು ದುರದೃಷ್ಟಕರ. ಸಶಸ್ತ್ರ ಪಡೆಗಳು ತಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ನೀಡುತ್ತವೆ” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಚೀನಾದ ಸೈನ್ಯದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಎರಡು ವಾರಗಳ ನಂತರ ಪ್ರಧಾನಿ ಮೋದಿ ಅವರು ಶುಕ್ರವಾರ ಲಡಾಖ್‌ಗೆ ಅಘೋಷಿತ ಭೇಟಿ ನೀಡಿದ್ದು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಭೇಟಿಯಾದರು.

ಪ್ರಧಾನಿಯವರು ನಿಮುಗೆ ಭೇಟಿ ನೀಡಿದ್ದಾರೆ. ಆದು ಪ್ರವಾಸಿ ತಾಣವಾಗಿದೆ. ಆದರೆ ಘರ್ಷಣೆ ನಡೆದ ಸ್ಥಳದಿಂದ 200 ಕಿ.ಮೀ ದೂರದಲ್ಲಿದೆ. ಅವರು ಗಡಿಯ ಹತ್ತಿರಕ್ಕೆ ಹೋಗಿ ಸೈನಿಕರನ್ನು ಭೇಟಿ ಮಾಡಬೇಕಿತ್ತು ಎಂಬ ಆರೋಪಗಳು ಸಹ ಕೇಳಿಬಂದಿವೆ.

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದರು.

ಈ ಆರೋಪಗಳನ್ನು ಅಲ್ಲಗೆಳೆದಿರುವ ಸೇನೆಯು ಕೋವಿಡ್ ಬಿಕ್ಕಟ್ಟಿನ ಆಸ್ಪತ್ರೆಯ ವಿಸ್ತರಣೆ ಭಾಗವಾಗಿ ಈ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಮತ್ತು ಇದು ಜನರಲ್ ಆಸ್ಪತ್ರೆ ಸಂಕೀರ್ಣದ ಭಾಗವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. COVID-19 ಪ್ರೋಟೋಕಾಲ್ ಪ್ರಕಾರ ಆಸ್ಪತ್ರೆಯ ಕೆಲವು ವಾರ್ಡ್‌ಗಳನ್ನು ಪ್ರತ್ಯೇಕ ಸೌಲಭ್ಯಗಳಾಗಿ ಪರಿವರ್ತಿಸುವ ಅವಶ್ಯಕತೆಯಿದೆ ಎಂದು ಅದು ಹೇಳಿದೆ.

“ಆದ್ದರಿಂದ, ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ” ಎಂದು ಸೇನೆ ಹೇಳಿದೆ.

“ಕೋವಿಡ್ ಆಸ್ಪತ್ರೆಯಿಂದ ಸಂಪರ್ಕತಡೆಯನ್ನು ಖಚಿತಪಡಿಸಿಕೊಳ್ಳಲು ಗಾಲ್ವಾನ್‌ನಿಂದ ಆಗಮಿಸಿದಾಗಿನಿಂದ ಗಾಯಗೊಂಡ ಸೈನಿಕರನ್ನು ಇಲ್ಲಿ ಇರಿಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಮತ್ತು ಸೇನಾ ಕಮಾಂಡರ್ ಕೂಡ ಗಾಯಗೊಂಡ ಸೈನಿಕರನ್ನು ಇದೇ ಸ್ಥಳದಲ್ಲಿ ಭೇಟಿ ಮಾಡಿದ್ದಾರೆ” ಎಂದು ಸೇನೆ ಯು ಹೇಳಿದೆ.


ಇದನ್ನೂ ಓದಿ; ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಸೈನಿಕರ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿದ್ದರೆ PPE kit ಇಲ್ಲದೆ ಪ್ರಧಾನ ಮಂತ್ರಿ ಪ್ರವೇಶ ಅಸಾಧ್ಯ. ಇಲ್ಲವೆ ಗಾಯಗೊಂಡ ಸೈನಿಕರಿಗಾಗಿ ಚಿಕಿತ್ಸೆ ನೀಡುತ್ತಿದ್ದರೆ ಒಬ್ಬ ಸೈನಿಕನು ಒಂದು ಸಣ್ಣ ಬ್ಯಾಂಡೇಜ್ ಆದ್ರು ಆಕೊಬೇಕಲ್ವೆ. ಇದೆಂತ ಆಸ್ಪತ್ರೆ.

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...