Homeಮುಖಪುಟಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ

- Advertisement -
- Advertisement -

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಲಡಾಖ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿದ ಫೋಟೊಗಳ ಕುರಿತು ಎದ್ದಿರುವ ವಿವಾದಕ್ಕೆ ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ಕೇವಲ ಪ್ರಧಾನಿಯವರ ಫೋಟೋಶೂಟ್‌ಗಾಗಿ ಆ ಆಸ್ಪತ್ರೆಯನ್ನು ರಚಿಸಲಾಗಿದೆ. ಅದರಲ್ಲಿ ಪ್ರೊಜೆಕ್ಟರ್, ಮೈಕ್ ಎಲ್ಲಾ ಇದ್ದು ರೋಗಿಗಳಿಗೆ ಅಗತ್ಯವಾಗಿರುವ ಮೆಡಿಸನ್ ಟೇಬಲ್, ಬೆಡ್ ಶೀಟ್ ಇಲ್ಲ. ಇದೇ ಹಾಲ್ ನಲ್ಲಿ ಈ ಹಿಂದೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಭೇಟಿ ಕೊಟ್ಟಾಗ ಔತಣಕೂಟ ಏರ್ಪಡಿಲಾಗಿತ್ತು. ಈ ಮೋದಿ ಹೋದಾಗ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗಿದೆ ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು.

ಈ ಆರೋಪವು ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ ಎಂದು ಭಾರತೀಯ ಸೇನೆಯು ಹೇಳಿದೆ. ವೈದ್ಯಕೀಯ ವಾರ್ಡ್ ಆಡಿಯೊ-ವಿಡಿಯೋ ತರಬೇತಿ ಕೊಠಡಿಯಾಗಿದ್ದು, ಇದನ್ನು ಪ್ರಧಾನಿ ಮೋದಿಯ ಭೇಟಿಗೆ ಬಹಳ ಹಿಂದೆಯೇ ಕೋವಿಡ್-19 ಪ್ರೋಟೋಕಾಲ್‌ನ ಭಾಗವಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಅದು ಹೇಳಿದೆ.

“ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸುತ್ತಿರುವುದು ದುರದೃಷ್ಟಕರ. ಸಶಸ್ತ್ರ ಪಡೆಗಳು ತಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ನೀಡುತ್ತವೆ” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಚೀನಾದ ಸೈನ್ಯದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಎರಡು ವಾರಗಳ ನಂತರ ಪ್ರಧಾನಿ ಮೋದಿ ಅವರು ಶುಕ್ರವಾರ ಲಡಾಖ್‌ಗೆ ಅಘೋಷಿತ ಭೇಟಿ ನೀಡಿದ್ದು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಭೇಟಿಯಾದರು.

ಪ್ರಧಾನಿಯವರು ನಿಮುಗೆ ಭೇಟಿ ನೀಡಿದ್ದಾರೆ. ಆದು ಪ್ರವಾಸಿ ತಾಣವಾಗಿದೆ. ಆದರೆ ಘರ್ಷಣೆ ನಡೆದ ಸ್ಥಳದಿಂದ 200 ಕಿ.ಮೀ ದೂರದಲ್ಲಿದೆ. ಅವರು ಗಡಿಯ ಹತ್ತಿರಕ್ಕೆ ಹೋಗಿ ಸೈನಿಕರನ್ನು ಭೇಟಿ ಮಾಡಬೇಕಿತ್ತು ಎಂಬ ಆರೋಪಗಳು ಸಹ ಕೇಳಿಬಂದಿವೆ.

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದರು.

ಈ ಆರೋಪಗಳನ್ನು ಅಲ್ಲಗೆಳೆದಿರುವ ಸೇನೆಯು ಕೋವಿಡ್ ಬಿಕ್ಕಟ್ಟಿನ ಆಸ್ಪತ್ರೆಯ ವಿಸ್ತರಣೆ ಭಾಗವಾಗಿ ಈ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಮತ್ತು ಇದು ಜನರಲ್ ಆಸ್ಪತ್ರೆ ಸಂಕೀರ್ಣದ ಭಾಗವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. COVID-19 ಪ್ರೋಟೋಕಾಲ್ ಪ್ರಕಾರ ಆಸ್ಪತ್ರೆಯ ಕೆಲವು ವಾರ್ಡ್‌ಗಳನ್ನು ಪ್ರತ್ಯೇಕ ಸೌಲಭ್ಯಗಳಾಗಿ ಪರಿವರ್ತಿಸುವ ಅವಶ್ಯಕತೆಯಿದೆ ಎಂದು ಅದು ಹೇಳಿದೆ.

“ಆದ್ದರಿಂದ, ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ” ಎಂದು ಸೇನೆ ಹೇಳಿದೆ.

“ಕೋವಿಡ್ ಆಸ್ಪತ್ರೆಯಿಂದ ಸಂಪರ್ಕತಡೆಯನ್ನು ಖಚಿತಪಡಿಸಿಕೊಳ್ಳಲು ಗಾಲ್ವಾನ್‌ನಿಂದ ಆಗಮಿಸಿದಾಗಿನಿಂದ ಗಾಯಗೊಂಡ ಸೈನಿಕರನ್ನು ಇಲ್ಲಿ ಇರಿಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಮತ್ತು ಸೇನಾ ಕಮಾಂಡರ್ ಕೂಡ ಗಾಯಗೊಂಡ ಸೈನಿಕರನ್ನು ಇದೇ ಸ್ಥಳದಲ್ಲಿ ಭೇಟಿ ಮಾಡಿದ್ದಾರೆ” ಎಂದು ಸೇನೆ ಯು ಹೇಳಿದೆ.


ಇದನ್ನೂ ಓದಿ; ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಸೈನಿಕರ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿದ್ದರೆ PPE kit ಇಲ್ಲದೆ ಪ್ರಧಾನ ಮಂತ್ರಿ ಪ್ರವೇಶ ಅಸಾಧ್ಯ. ಇಲ್ಲವೆ ಗಾಯಗೊಂಡ ಸೈನಿಕರಿಗಾಗಿ ಚಿಕಿತ್ಸೆ ನೀಡುತ್ತಿದ್ದರೆ ಒಬ್ಬ ಸೈನಿಕನು ಒಂದು ಸಣ್ಣ ಬ್ಯಾಂಡೇಜ್ ಆದ್ರು ಆಕೊಬೇಕಲ್ವೆ. ಇದೆಂತ ಆಸ್ಪತ್ರೆ.

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...