Homeಮುಖಪುಟಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ

- Advertisement -
- Advertisement -

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಲಡಾಖ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿದ ಫೋಟೊಗಳ ಕುರಿತು ಎದ್ದಿರುವ ವಿವಾದಕ್ಕೆ ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ಕೇವಲ ಪ್ರಧಾನಿಯವರ ಫೋಟೋಶೂಟ್‌ಗಾಗಿ ಆ ಆಸ್ಪತ್ರೆಯನ್ನು ರಚಿಸಲಾಗಿದೆ. ಅದರಲ್ಲಿ ಪ್ರೊಜೆಕ್ಟರ್, ಮೈಕ್ ಎಲ್ಲಾ ಇದ್ದು ರೋಗಿಗಳಿಗೆ ಅಗತ್ಯವಾಗಿರುವ ಮೆಡಿಸನ್ ಟೇಬಲ್, ಬೆಡ್ ಶೀಟ್ ಇಲ್ಲ. ಇದೇ ಹಾಲ್ ನಲ್ಲಿ ಈ ಹಿಂದೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಭೇಟಿ ಕೊಟ್ಟಾಗ ಔತಣಕೂಟ ಏರ್ಪಡಿಲಾಗಿತ್ತು. ಈ ಮೋದಿ ಹೋದಾಗ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗಿದೆ ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು.

ಈ ಆರೋಪವು ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ ಎಂದು ಭಾರತೀಯ ಸೇನೆಯು ಹೇಳಿದೆ. ವೈದ್ಯಕೀಯ ವಾರ್ಡ್ ಆಡಿಯೊ-ವಿಡಿಯೋ ತರಬೇತಿ ಕೊಠಡಿಯಾಗಿದ್ದು, ಇದನ್ನು ಪ್ರಧಾನಿ ಮೋದಿಯ ಭೇಟಿಗೆ ಬಹಳ ಹಿಂದೆಯೇ ಕೋವಿಡ್-19 ಪ್ರೋಟೋಕಾಲ್‌ನ ಭಾಗವಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಅದು ಹೇಳಿದೆ.

“ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸುತ್ತಿರುವುದು ದುರದೃಷ್ಟಕರ. ಸಶಸ್ತ್ರ ಪಡೆಗಳು ತಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ನೀಡುತ್ತವೆ” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಚೀನಾದ ಸೈನ್ಯದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಎರಡು ವಾರಗಳ ನಂತರ ಪ್ರಧಾನಿ ಮೋದಿ ಅವರು ಶುಕ್ರವಾರ ಲಡಾಖ್‌ಗೆ ಅಘೋಷಿತ ಭೇಟಿ ನೀಡಿದ್ದು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಭೇಟಿಯಾದರು.

ಪ್ರಧಾನಿಯವರು ನಿಮುಗೆ ಭೇಟಿ ನೀಡಿದ್ದಾರೆ. ಆದು ಪ್ರವಾಸಿ ತಾಣವಾಗಿದೆ. ಆದರೆ ಘರ್ಷಣೆ ನಡೆದ ಸ್ಥಳದಿಂದ 200 ಕಿ.ಮೀ ದೂರದಲ್ಲಿದೆ. ಅವರು ಗಡಿಯ ಹತ್ತಿರಕ್ಕೆ ಹೋಗಿ ಸೈನಿಕರನ್ನು ಭೇಟಿ ಮಾಡಬೇಕಿತ್ತು ಎಂಬ ಆರೋಪಗಳು ಸಹ ಕೇಳಿಬಂದಿವೆ.

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದರು.

ಈ ಆರೋಪಗಳನ್ನು ಅಲ್ಲಗೆಳೆದಿರುವ ಸೇನೆಯು ಕೋವಿಡ್ ಬಿಕ್ಕಟ್ಟಿನ ಆಸ್ಪತ್ರೆಯ ವಿಸ್ತರಣೆ ಭಾಗವಾಗಿ ಈ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಮತ್ತು ಇದು ಜನರಲ್ ಆಸ್ಪತ್ರೆ ಸಂಕೀರ್ಣದ ಭಾಗವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. COVID-19 ಪ್ರೋಟೋಕಾಲ್ ಪ್ರಕಾರ ಆಸ್ಪತ್ರೆಯ ಕೆಲವು ವಾರ್ಡ್‌ಗಳನ್ನು ಪ್ರತ್ಯೇಕ ಸೌಲಭ್ಯಗಳಾಗಿ ಪರಿವರ್ತಿಸುವ ಅವಶ್ಯಕತೆಯಿದೆ ಎಂದು ಅದು ಹೇಳಿದೆ.

“ಆದ್ದರಿಂದ, ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ” ಎಂದು ಸೇನೆ ಹೇಳಿದೆ.

“ಕೋವಿಡ್ ಆಸ್ಪತ್ರೆಯಿಂದ ಸಂಪರ್ಕತಡೆಯನ್ನು ಖಚಿತಪಡಿಸಿಕೊಳ್ಳಲು ಗಾಲ್ವಾನ್‌ನಿಂದ ಆಗಮಿಸಿದಾಗಿನಿಂದ ಗಾಯಗೊಂಡ ಸೈನಿಕರನ್ನು ಇಲ್ಲಿ ಇರಿಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಮತ್ತು ಸೇನಾ ಕಮಾಂಡರ್ ಕೂಡ ಗಾಯಗೊಂಡ ಸೈನಿಕರನ್ನು ಇದೇ ಸ್ಥಳದಲ್ಲಿ ಭೇಟಿ ಮಾಡಿದ್ದಾರೆ” ಎಂದು ಸೇನೆ ಯು ಹೇಳಿದೆ.


ಇದನ್ನೂ ಓದಿ; ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಸೈನಿಕರ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿದ್ದರೆ PPE kit ಇಲ್ಲದೆ ಪ್ರಧಾನ ಮಂತ್ರಿ ಪ್ರವೇಶ ಅಸಾಧ್ಯ. ಇಲ್ಲವೆ ಗಾಯಗೊಂಡ ಸೈನಿಕರಿಗಾಗಿ ಚಿಕಿತ್ಸೆ ನೀಡುತ್ತಿದ್ದರೆ ಒಬ್ಬ ಸೈನಿಕನು ಒಂದು ಸಣ್ಣ ಬ್ಯಾಂಡೇಜ್ ಆದ್ರು ಆಕೊಬೇಕಲ್ವೆ. ಇದೆಂತ ಆಸ್ಪತ್ರೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...