Homeಮುಖಪುಟಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ

- Advertisement -
- Advertisement -

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಲಡಾಖ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿದ ಫೋಟೊಗಳ ಕುರಿತು ಎದ್ದಿರುವ ವಿವಾದಕ್ಕೆ ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ಕೇವಲ ಪ್ರಧಾನಿಯವರ ಫೋಟೋಶೂಟ್‌ಗಾಗಿ ಆ ಆಸ್ಪತ್ರೆಯನ್ನು ರಚಿಸಲಾಗಿದೆ. ಅದರಲ್ಲಿ ಪ್ರೊಜೆಕ್ಟರ್, ಮೈಕ್ ಎಲ್ಲಾ ಇದ್ದು ರೋಗಿಗಳಿಗೆ ಅಗತ್ಯವಾಗಿರುವ ಮೆಡಿಸನ್ ಟೇಬಲ್, ಬೆಡ್ ಶೀಟ್ ಇಲ್ಲ. ಇದೇ ಹಾಲ್ ನಲ್ಲಿ ಈ ಹಿಂದೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಭೇಟಿ ಕೊಟ್ಟಾಗ ಔತಣಕೂಟ ಏರ್ಪಡಿಲಾಗಿತ್ತು. ಈ ಮೋದಿ ಹೋದಾಗ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗಿದೆ ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು.

ಈ ಆರೋಪವು ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ ಎಂದು ಭಾರತೀಯ ಸೇನೆಯು ಹೇಳಿದೆ. ವೈದ್ಯಕೀಯ ವಾರ್ಡ್ ಆಡಿಯೊ-ವಿಡಿಯೋ ತರಬೇತಿ ಕೊಠಡಿಯಾಗಿದ್ದು, ಇದನ್ನು ಪ್ರಧಾನಿ ಮೋದಿಯ ಭೇಟಿಗೆ ಬಹಳ ಹಿಂದೆಯೇ ಕೋವಿಡ್-19 ಪ್ರೋಟೋಕಾಲ್‌ನ ಭಾಗವಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಅದು ಹೇಳಿದೆ.

“ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸುತ್ತಿರುವುದು ದುರದೃಷ್ಟಕರ. ಸಶಸ್ತ್ರ ಪಡೆಗಳು ತಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ನೀಡುತ್ತವೆ” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಚೀನಾದ ಸೈನ್ಯದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಎರಡು ವಾರಗಳ ನಂತರ ಪ್ರಧಾನಿ ಮೋದಿ ಅವರು ಶುಕ್ರವಾರ ಲಡಾಖ್‌ಗೆ ಅಘೋಷಿತ ಭೇಟಿ ನೀಡಿದ್ದು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಭೇಟಿಯಾದರು.

ಪ್ರಧಾನಿಯವರು ನಿಮುಗೆ ಭೇಟಿ ನೀಡಿದ್ದಾರೆ. ಆದು ಪ್ರವಾಸಿ ತಾಣವಾಗಿದೆ. ಆದರೆ ಘರ್ಷಣೆ ನಡೆದ ಸ್ಥಳದಿಂದ 200 ಕಿ.ಮೀ ದೂರದಲ್ಲಿದೆ. ಅವರು ಗಡಿಯ ಹತ್ತಿರಕ್ಕೆ ಹೋಗಿ ಸೈನಿಕರನ್ನು ಭೇಟಿ ಮಾಡಬೇಕಿತ್ತು ಎಂಬ ಆರೋಪಗಳು ಸಹ ಕೇಳಿಬಂದಿವೆ.

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದರು.

ಈ ಆರೋಪಗಳನ್ನು ಅಲ್ಲಗೆಳೆದಿರುವ ಸೇನೆಯು ಕೋವಿಡ್ ಬಿಕ್ಕಟ್ಟಿನ ಆಸ್ಪತ್ರೆಯ ವಿಸ್ತರಣೆ ಭಾಗವಾಗಿ ಈ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಮತ್ತು ಇದು ಜನರಲ್ ಆಸ್ಪತ್ರೆ ಸಂಕೀರ್ಣದ ಭಾಗವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. COVID-19 ಪ್ರೋಟೋಕಾಲ್ ಪ್ರಕಾರ ಆಸ್ಪತ್ರೆಯ ಕೆಲವು ವಾರ್ಡ್‌ಗಳನ್ನು ಪ್ರತ್ಯೇಕ ಸೌಲಭ್ಯಗಳಾಗಿ ಪರಿವರ್ತಿಸುವ ಅವಶ್ಯಕತೆಯಿದೆ ಎಂದು ಅದು ಹೇಳಿದೆ.

“ಆದ್ದರಿಂದ, ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ” ಎಂದು ಸೇನೆ ಹೇಳಿದೆ.

“ಕೋವಿಡ್ ಆಸ್ಪತ್ರೆಯಿಂದ ಸಂಪರ್ಕತಡೆಯನ್ನು ಖಚಿತಪಡಿಸಿಕೊಳ್ಳಲು ಗಾಲ್ವಾನ್‌ನಿಂದ ಆಗಮಿಸಿದಾಗಿನಿಂದ ಗಾಯಗೊಂಡ ಸೈನಿಕರನ್ನು ಇಲ್ಲಿ ಇರಿಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಮತ್ತು ಸೇನಾ ಕಮಾಂಡರ್ ಕೂಡ ಗಾಯಗೊಂಡ ಸೈನಿಕರನ್ನು ಇದೇ ಸ್ಥಳದಲ್ಲಿ ಭೇಟಿ ಮಾಡಿದ್ದಾರೆ” ಎಂದು ಸೇನೆ ಯು ಹೇಳಿದೆ.


ಇದನ್ನೂ ಓದಿ; ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಸೈನಿಕರ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿದ್ದರೆ PPE kit ಇಲ್ಲದೆ ಪ್ರಧಾನ ಮಂತ್ರಿ ಪ್ರವೇಶ ಅಸಾಧ್ಯ. ಇಲ್ಲವೆ ಗಾಯಗೊಂಡ ಸೈನಿಕರಿಗಾಗಿ ಚಿಕಿತ್ಸೆ ನೀಡುತ್ತಿದ್ದರೆ ಒಬ್ಬ ಸೈನಿಕನು ಒಂದು ಸಣ್ಣ ಬ್ಯಾಂಡೇಜ್ ಆದ್ರು ಆಕೊಬೇಕಲ್ವೆ. ಇದೆಂತ ಆಸ್ಪತ್ರೆ.

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...