Homeಮುಖಪುಟಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಆಡಿಯೊ ವಿಡಿಯೋ ಹಾಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ: ಸ್ಪಷ್ಟನೆ ನೀಡಿದ ಸೇನೆ

ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ

- Advertisement -
- Advertisement -

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಲಡಾಖ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿದ ಫೋಟೊಗಳ ಕುರಿತು ಎದ್ದಿರುವ ವಿವಾದಕ್ಕೆ ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ಕೇವಲ ಪ್ರಧಾನಿಯವರ ಫೋಟೋಶೂಟ್‌ಗಾಗಿ ಆ ಆಸ್ಪತ್ರೆಯನ್ನು ರಚಿಸಲಾಗಿದೆ. ಅದರಲ್ಲಿ ಪ್ರೊಜೆಕ್ಟರ್, ಮೈಕ್ ಎಲ್ಲಾ ಇದ್ದು ರೋಗಿಗಳಿಗೆ ಅಗತ್ಯವಾಗಿರುವ ಮೆಡಿಸನ್ ಟೇಬಲ್, ಬೆಡ್ ಶೀಟ್ ಇಲ್ಲ. ಇದೇ ಹಾಲ್ ನಲ್ಲಿ ಈ ಹಿಂದೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಭೇಟಿ ಕೊಟ್ಟಾಗ ಔತಣಕೂಟ ಏರ್ಪಡಿಲಾಗಿತ್ತು. ಈ ಮೋದಿ ಹೋದಾಗ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗಿದೆ ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು.

ಈ ಆರೋಪವು ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ ಎಂದು ಭಾರತೀಯ ಸೇನೆಯು ಹೇಳಿದೆ. ವೈದ್ಯಕೀಯ ವಾರ್ಡ್ ಆಡಿಯೊ-ವಿಡಿಯೋ ತರಬೇತಿ ಕೊಠಡಿಯಾಗಿದ್ದು, ಇದನ್ನು ಪ್ರಧಾನಿ ಮೋದಿಯ ಭೇಟಿಗೆ ಬಹಳ ಹಿಂದೆಯೇ ಕೋವಿಡ್-19 ಪ್ರೋಟೋಕಾಲ್‌ನ ಭಾಗವಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಅದು ಹೇಳಿದೆ.

“ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸುತ್ತಿರುವುದು ದುರದೃಷ್ಟಕರ. ಸಶಸ್ತ್ರ ಪಡೆಗಳು ತಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ನೀಡುತ್ತವೆ” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಚೀನಾದ ಸೈನ್ಯದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಎರಡು ವಾರಗಳ ನಂತರ ಪ್ರಧಾನಿ ಮೋದಿ ಅವರು ಶುಕ್ರವಾರ ಲಡಾಖ್‌ಗೆ ಅಘೋಷಿತ ಭೇಟಿ ನೀಡಿದ್ದು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಭೇಟಿಯಾದರು.

ಪ್ರಧಾನಿಯವರು ನಿಮುಗೆ ಭೇಟಿ ನೀಡಿದ್ದಾರೆ. ಆದು ಪ್ರವಾಸಿ ತಾಣವಾಗಿದೆ. ಆದರೆ ಘರ್ಷಣೆ ನಡೆದ ಸ್ಥಳದಿಂದ 200 ಕಿ.ಮೀ ದೂರದಲ್ಲಿದೆ. ಅವರು ಗಡಿಯ ಹತ್ತಿರಕ್ಕೆ ಹೋಗಿ ಸೈನಿಕರನ್ನು ಭೇಟಿ ಮಾಡಬೇಕಿತ್ತು ಎಂಬ ಆರೋಪಗಳು ಸಹ ಕೇಳಿಬಂದಿವೆ.

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದರು.

ಈ ಆರೋಪಗಳನ್ನು ಅಲ್ಲಗೆಳೆದಿರುವ ಸೇನೆಯು ಕೋವಿಡ್ ಬಿಕ್ಕಟ್ಟಿನ ಆಸ್ಪತ್ರೆಯ ವಿಸ್ತರಣೆ ಭಾಗವಾಗಿ ಈ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಮತ್ತು ಇದು ಜನರಲ್ ಆಸ್ಪತ್ರೆ ಸಂಕೀರ್ಣದ ಭಾಗವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. COVID-19 ಪ್ರೋಟೋಕಾಲ್ ಪ್ರಕಾರ ಆಸ್ಪತ್ರೆಯ ಕೆಲವು ವಾರ್ಡ್‌ಗಳನ್ನು ಪ್ರತ್ಯೇಕ ಸೌಲಭ್ಯಗಳಾಗಿ ಪರಿವರ್ತಿಸುವ ಅವಶ್ಯಕತೆಯಿದೆ ಎಂದು ಅದು ಹೇಳಿದೆ.

“ಆದ್ದರಿಂದ, ಸಾಮಾನ್ಯವಾಗಿ ಆಡಿಯೊ ವಿಡಿಯೋ ತರಬೇತಿ ಹಾಲ್ ಆಗಿ ಬಳಸಲಾಗುತ್ತಿದ್ದ ಈ ಸಭಾಂಗಣವನ್ನು ವಾರ್ಡ್ ಆಗಿ ಪರಿವರ್ತಿಸಲಾಯಿತು, ಏಕೆಂದರೆ ಆಸ್ಪತ್ರೆಯನ್ನು COVID-19 ಚಿಕಿತ್ಸಾ ಆಸ್ಪತ್ರೆ ಎಂದು ಗೊತ್ತುಪಡಿಸಲಾಗಿದೆ” ಎಂದು ಸೇನೆ ಹೇಳಿದೆ.

“ಕೋವಿಡ್ ಆಸ್ಪತ್ರೆಯಿಂದ ಸಂಪರ್ಕತಡೆಯನ್ನು ಖಚಿತಪಡಿಸಿಕೊಳ್ಳಲು ಗಾಲ್ವಾನ್‌ನಿಂದ ಆಗಮಿಸಿದಾಗಿನಿಂದ ಗಾಯಗೊಂಡ ಸೈನಿಕರನ್ನು ಇಲ್ಲಿ ಇರಿಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಮತ್ತು ಸೇನಾ ಕಮಾಂಡರ್ ಕೂಡ ಗಾಯಗೊಂಡ ಸೈನಿಕರನ್ನು ಇದೇ ಸ್ಥಳದಲ್ಲಿ ಭೇಟಿ ಮಾಡಿದ್ದಾರೆ” ಎಂದು ಸೇನೆ ಯು ಹೇಳಿದೆ.


ಇದನ್ನೂ ಓದಿ; ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಸೈನಿಕರ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿದ್ದರೆ PPE kit ಇಲ್ಲದೆ ಪ್ರಧಾನ ಮಂತ್ರಿ ಪ್ರವೇಶ ಅಸಾಧ್ಯ. ಇಲ್ಲವೆ ಗಾಯಗೊಂಡ ಸೈನಿಕರಿಗಾಗಿ ಚಿಕಿತ್ಸೆ ನೀಡುತ್ತಿದ್ದರೆ ಒಬ್ಬ ಸೈನಿಕನು ಒಂದು ಸಣ್ಣ ಬ್ಯಾಂಡೇಜ್ ಆದ್ರು ಆಕೊಬೇಕಲ್ವೆ. ಇದೆಂತ ಆಸ್ಪತ್ರೆ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...