ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ದಲಿತರನ್ನು ಕಡೆಗಣಿಸಲಾಗಿದೆ ಎಂದು ಅಪ್ನಾ ದಳ (ಎಸ್) ಶಾಸಕ ಚೌಧರಿ ಅಮರ್ ಸಿಂಗ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾಲಯ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತೋರಿಸಿದ ಆತುರವನ್ನು ಬಡವರಿಗೆ ಮನೆ ಮತ್ತು ಪಿಂಚಣಿ ನೀಡುವ ಬಗ್ಗೆಯೂ ತೋರಿಸಬೇಕು ಎಂದಿದ್ದಾರೆ.
ಅಯೋಧ್ಯ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಹಾಜರಾಗುವುದರಿಂದ ದಲಿತರು ಮತ್ತು ಹಿಂದುಳಿದವರು ವಂಚಿತರಾಗಿದ್ದಾರೆ. ದೇವಾಲಯಕ್ಕಾಗಿ ಪರಿಶ್ರಮಿಸಿದವರ ಮುಖ ಕಾಣುತ್ತಿಲ್ಲ. ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಸಕರು ದೂರಿದ್ದಾರೆ.
ದೇವಾಲಯ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್ನಲ್ಲಿ ಹಿಂದುಳಿದ, ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಜನರಿಲ್ಲ. ಇದರಿಂದ ರಾಮ ಕೇವಲ ಬಿಜೆಪಿಯವರಿಗೆ ಮಾತ್ರವೇ ಎಂದು ಟೀಕಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಆಹ್ವಾನಿಸಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ರಾಮ ಎಲ್ಲರಿಗೂ ಸೇರಿದವನು, ಅಯೋಧ್ಯೆ ಕಾರ್ಯಕ್ರಮ ರಾಷ್ಟ್ರೀಯ ಏಕತೆಗೆ ದಾರಿಯಾಗಲಿ: ಪ್ರಿಯಾಂಕ ಗಾಂಧಿ