Homeಮುಖಪುಟಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ಮೀರಿದ ಸಿಬಿಐ ನ್ಯಾಯಾಲಯದ ಬಾಬ್ರಿ ತೀರ್ಪು

ಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ಮೀರಿದ ಸಿಬಿಐ ನ್ಯಾಯಾಲಯದ ಬಾಬ್ರಿ ತೀರ್ಪು

ಸುಪ್ರೀಂ ಕೋರ್ಟಿನ ಶಬ್ದಗಳಲ್ಲೇ ಹೇಳುವುದಾದರೆ ಈ ಸಂಚು, ‘ಸಂವಿಧಾನದ ಜಾತ್ಯತೀತ ಸಂರಚನೆಯನ್ನೇ ಅಲುಗಾಡಿಸುವ ಅಪರಾಧ’.

- Advertisement -
- Advertisement -

ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿಯ ಧ್ವಂಸಕ್ಕೆ ಕಾರಣವಾದ ಕ್ರಿಮಿನಲ್ ಸಂಚು ಹೂಡಿದ ಆರೋಪ ಹೊತ್ತಿದ್ದ ಎಲ್ಲಾ 32 ಮಂದಿಯನ್ನು ಸಿಬಿಐ ವಿಶೇಷ ನ್ಯಾಯಾಲಯವು ಆರೋಪಮುಕ್ತಗೊಳಿಸಿದೆ. ಈ ತೀರ್ಪಿನ ಹಿಂದಿರುವ ತರ್ಕವೆಂದರೆ, ‘ಈ ಧ್ವಂಸವು ಪೂರ್ವನಿರ್ಧಾರಿತವಾದದ್ದಲ್ಲ ಮತ್ತು ಆದರ ಹಿಂದೆ ಯಾವುದೇ ಕ್ರಿಮಿನಲ್ ಸಂಚು ಇರಲಿಲ್ಲ’ ಎಂಬುದಾಗಿರುವಂತೆ ಕಾಣುತ್ತದೆ ಎಂಬುದು. ಸಿಬಿಐ ಸಲ್ಲಿಸಿದ ಅಡಿಯೋ ಮತ್ತು ವಿಡಿಯೋ ತುಣುಕುಗಳ ಅಧಿಕೃತತೆಯ ಬಗ್ಗೆಯೂ ನ್ಯಾಯಾಧೀಶರು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಇದು ಧ್ವಂಸದ ಹಿಂದೆ ಯಾವುದೇ ಕ್ರಿಮಿನಲ್ ಸಂಚು ಇರಲಿಲ್ಲ ಎಂಬ ಅವರ ನಿರ್ಧಾರಕ್ಕೆ ಒತ್ತಾಸೆ ನೀಡಿರುವಂತೆಯೂ ಕಾಣುತ್ತದೆ.

ಧ್ವಂಸದ ಹಿಂದೆ ‘ಸಂಚು ಇರಲಿಲ್ಲ’ ಎಂಬ ಈ ತೀರ್ಮಾನವು ಸಂಘ ಪರಿವಾರದ ಎಂದಿನ ಅಧಿಕೃತ ನಿಲುವಾಗಿದ್ದು, ಧ್ವಂಸವು ಅನಾಮಿಕ ಜನರ ಆ ಕ್ಷಣದ ಸ್ವಯಂಸ್ಫೂರ್ತಿಯ ಕೃತ್ಯವಾಗಿದೆ ಎಂದು ಅದು ಮತ್ತೆಮತ್ತೆ ಉಲ್ಲೇಖಿಸುತ್ತಾ ಬಂದಿದೆ. 2001ರಲ್ಲಿ ಸಂಚಿನ ಆರೋಪ ಹೊರಿಸಲಾದ ಎಲ್ಲಾ ಆರೋಪಿಗಳ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಕೈಬಿಟ್ಟು, ಈ ಕುರಿತು ಮೇಲ್ಮನವಿ ಸಲ್ಲಿಸಲಾದ ಬಳಿಕ 2010ರಲ್ಲಿ ಹೈಕೋರ್ಟ್, ಟ್ರಯಲ್ ನ್ಯಾಯಾಲಯದ ತೀರ್ಪಿನ ಜೊತೆ ಸಹಮತ ವ್ಯಕ್ತಪಡಿಸಿದಾಗ, ಸಂಘ ಪರಿವಾರವು ತನ್ನ ಈ ಸಿದ್ಧಾಂತಕ್ಕೆ ನ್ಯಾಯಾಂಗದ ಅಧಿಕೃತ ಮುದ್ರೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿತ್ತು.

ಆದರೆ, ನಂತರ ಸ್ವತಃ ಸುಪ್ರೀಂ ಕೋರ್ಟ್ ಈ ‘ಆ ಕ್ಷಣದ ಸ್ವಯಂಸ್ಫೂರ್ತಿ’ಯ ವಾದದಿಂದ ಸೂಚ್ಯವಾಗಿ ದೂರ ಉಳಿದಿತ್ತು ಎಂಬುದು ಗಮನಿಸಬೇಕಾದ ಅಂಶ. ಕಲ್ಯಾಣ್ ಸಿಂಗ್ ವಿರುದ್ಧ ಸಿಬಿಐ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ನಾರಿಮನ್ ಮತ್ತು ಪಿನಾಕಿ ಚಂದ್ರ ಘೋಷ್ ಅವರು 2017ರಲ್ಲಿ ಈ ಪ್ರಕರಣದಲ್ಲಿ ಸಂಚನ್ನು ಒಂದು ಆರೋಪವಾಗಿ ಮರಳಿ ಸೇರಿಸಿದ್ದರು ಮತ್ತು ಎರಡು ವರ್ಷಗಳಲ್ಲಿ ವಿಚಾರಣೆಯನ್ನು ಮುಗಿಸುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದರು.

ಸುಪ್ರೀಂ ಕೋರ್ಟ್ ಗಮನಿಸಿರುವಂತೆ, ‘ಪ್ರಸ್ತುತ ಪ್ರಕರಣದಲ್ಲಿ ಸಂವಿಧಾನದ ಜಾತ್ಯತೀತ ಸಂರಚನೆಯನ್ನು ಅಲುಗಾಡಿಸುವಂತಹ ಅಪರಾಧಗಳು ಸುಮಾರು 25 ವರ್ಷಗಳ ಹಿಂದೆ ನಡೆದಿವೆ ಎಂದು ಆರೋಪಿಸಲಾಗಿದೆ. ಬಹುತೇಕ ಸಿಬಿಐಯ ನಡವಳಿಕೆಯ ಕಾರಣದಿಂದಾಗಿಯೇ ಆರೋಪಿತ ವ್ಯಕ್ತಿಗಳನ್ನು ಕಾನೂನಿನಡಿ ಶಿಕ್ಷೆ ನೀಡಲಾಗಿಲ್ಲ…’ ಎಂದಿತ್ತು.

‘ಐಪಿಸಿ 120-ಬಿ ಅಡಿಯಲ್ಲಿ ಈ ವಿಷಯದಲ್ಲಿ ಸಂಚಿನ ಪ್ರಶ್ನೆಗೆ ಸಂಬಂಧಿಸಿದಂತೆ ಸಾಬೀತುಗೊಂಡ ಸಾಕ್ಷ್ಯಗಳು ಇರಬೇಕಾದ ಅಗತ್ಯವಿಲ್ಲ; ಏಕೆಂದರೆ ಒಂದು ಸಂಚನ್ನು ಗುಪ್ತವಾಗಿ ರೂಪಿಸಲಾಗುತ್ತದೆ ಮತ್ತು ಆ ಸಂಚಿನ ಬಗ್ಗೆ ಉಳಿದ ಆರೋಪಿಗಳಿಗೆ ಕ್ರಮೇಣವಾಗಿ, ನಿಧಾನವಾಗಿ ತಿಳಿಯುತ್ತದೆ. ಅವರು ಮಾಡುವ ಭಾಷಣಗಳು ಮತ್ತು ಮಾಡಿದ ಕೃತ್ಯಗಳಿಂದ ಏನು ಸ್ಪಷ್ಟವಾಗುತ್ತದೆಯೋ ಅವುಗಳಿಂದ ಅವರ ಸಂಚಿನ ಬಗೆಗಿನ ತಿಳಿವನ್ನು ಗ್ರಹಿಸಬಹುದು’ ಎಂದು 2001ರ ಲಕ್ನೋದ ವಿಶೇಷ ನ್ಯಾಯಾಧೀಶರ ತೀರ್ಪಿನ ಕುರಿತು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ದಾಖಲಿಸಿದೆ. ಕಲ್ಯಾಣ್ ಸಿಂಗ್, ಲಾಲ್ ಕೃಷ್ಣ ಆಡ್ವಾಣಿ ಮತ್ತಿತರರ ಮೇಲೆ ಬಾಬ್ರಿ ಮಸೀದಿ ಧ್ವಂಸಗೊಳಿಸುವ ಸಂಚಿನ ಆರೋಪವನ್ನು ಏಕೆ ಹೊರಿಸಬೇಕು ಎಂಬುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ದಾಖಲಿಸಿದೆ.

ಹೈಕೋರ್ಟಿನ ತೀರ್ಪನ್ನು ಸ್ಪಷ್ಟವಾಗಿ ತಳ್ಳಿಹಾಕಿ ಸಂಚಿನ ಆರೋಪವನ್ನು ಮತ್ತೆ ಸೇರಿಸಿದ ಸುಪ್ರೀಂ ಕೋರ್ಟ್, ಧ್ವಂಸದ ಹಿಂದೆ ಪೂರ್ವಾಲೋಚನೆ ಮತ್ತು ಪೂರ್ವಯೋಜನೆ ಇತ್ತು ಎಂಬ ವಾದದಲ್ಲಿ ಹುರುಳಿದೆ ಮತ್ತೆ ಅದು ಆ ಕ್ಷಣಕ್ಕೆ ಸ್ವಯಂಸ್ಫೂರ್ತಿಯಿಂದ ನಡೆದ ಕೃತ್ಯವಲ್ಲ ಎಂಬುದು ಮೇಲ್ನೋಟಕ್ಕೇ ಗೋಚರಿಸುತ್ತದೆ ಎಂದಿದೆ.

ಲಿಬರ್ಹಾನ್ ಆಯೋಗವು, ಧ್ವಂಸವು ‘ಆ ಕ್ಷಣದ ಸ್ವಯಂಸ್ಫೂರ್ತಿಯ ಕೃತ್ಯ’ದ ಪರಿಣಾಮವಲ್ಲ ಮತ್ತು ಅದರ ಹಿಂದೆ ಹಿಂದೂ ಬಲಪಂಥೀಯ ಸಂಘಟನೆಗಳ ಪಾತ್ರವಿದೆ ಎಂಬ ವಾದಕ್ಕೆ ಮತ್ತಷ್ಟು ನ್ಯಾಯಿಕ ಪುಷ್ಟಿ ಒದಗಿಸುತ್ತದೆ. ‘ಈ ಸಂಘಟನೆಗಳು ಸಾಮೂಹಿಕವಾಗಿ ಅಗಾಧವಾದ ಮತ್ತು ಅಚ್ಚರಿ ಹುಟ್ಟಿಸುವ ಘಟಕವಾಗಿದ್ದು, ಚತುರ ಕೃತ್ರಿಮ ಬುದ್ಧಿಮತ್ತೆ, ವ್ಯಾಪಕತೆ ಮತ್ತು ದಮನಕಾರಿ ಗುಂಪು ಬಲವನ್ನು ಹೊಂದಿವೆ. ಆರ್‌ಎಸ್‍ಎಸ್, ಬಿಜೆಪಿ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಹಾಗೂ ನಿರಂತರವಾಗಿ ರೂಪಬದಲಿಸುವ ಹಿಂದೂ ಮಹಾಸಭಾ ಮತ್ತು ಜನಸಂಘದಂತಹ ಸಂಘಟನೆಗಳ ಸ್ಥಾಪಕರ ಸಂಶಯಾಸ್ಪದ ಸಿದ್ಧಾಂತಗಳ ಮುಂದುವರಿಕೆಯಲ್ಲಿ ನಿರಂತರವಾದ ಮತ್ತು ಸ್ಥಿರವಾದ ನಾಯಕತ್ವ ಒದಗಿಸಿದ್ದರು ಎಂದು ಲಿಬರ್ಹಾನ್ ಆಯೋಗ ಗಮನಿಸಿದೆ. ಆ ಚಿಂತಕರ ಕೇಂದ್ರ ಗುಂಪಿಗೆ ಅಂತಿಮ ಪರಿಣಾಮ ಮಾತ್ರ ಮುಖ್ಯ ಮತ್ತು ವಿವಾದಿತ ಕಟ್ಟಡದ ಧ್ವಂಸ, ಧರ್ಮದ ಮುಸುಕು ಹೊದ್ದುಕೊಂಡು ಜಾತ್ಯತೀತತೆ ಮತ್ತು ಬಹುಸಂಸ್ಕೃತಿಯ ಸಮಾಜದ ವಿರುದ್ಧ ಅವರ ಮುಂದುವರಿದ ಅಭಿಯಾನದಲ್ಲಿ ವಿಜಯಶಾಲಿ ಕದನ ಮಾತ್ರವಾಗಿತ್ತು” ಎಂದು ನ್ಯಾಯಮೂರ್ತಿ ಲಿಬರ್ಹಾನ್ ಹೇಳಿದ್ದಾರೆ.

ಸಿಬಿಐ ವಿಶೇಷ ನ್ಯಾಯಾಲಯವು ಬಾಬ್ರಿ ಮಸೀದಿ ಧ್ವಂಸಕ್ಕೆ ಯಾವುದೇ ಸಂಚು ಇರಲಿಲ್ಲ ಎಂದು ಹೇಳುವುದರ ಮೂಲಕ ತನ್ನ ಮುಂದೆ ಇದ್ದ ಅಗಾಧವಾದ ಸಾಕ್ಷ್ಯಗಳಿಂದ ಆಯ್ದ ಭಾಗಗಳನ್ನಷ್ಟೇ ಓದಿ- ತರ್ಕ, ಇತಿಹಾಸ ಮತ್ತು ಬಾಬ್ರಿ ಮಸೀದಿ ಧ್ವಂಸದಲ್ಲಿ ಸಂಚನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಸುಪ್ರೀಂ ಕೋರ್ಟಿನ ಸೂಚ್ಯ ನಿರ್ದೇಶನಕ್ಕೆ ತದ್ವಿರುದ್ಧವಾದ ತೀರ್ಮಾನಕ್ಕೆ ಬಂದಿದೆ. ಸುಪ್ರೀಂ ಕೋರ್ಟಿನ ಶಬ್ದಗಳಲ್ಲೇ ಹೇಳುವುದಾದರೆ ಈ ಸಂಚು, ‘ಸಂವಿಧಾನದ ಜಾತ್ಯತೀತ ಸಂರಚನೆಯನ್ನೇ ಅಲುಗಾಡಿಸುವ ಅಪರಾಧ’. ಸಂಚು ಇರಲಿಲ್ಲ ಎಂಬ ತೀರ್ಪು ನೀಡುವುದರ ಮೂಲಕ ವಿಶೇಷ ಸಿಬಿಐ ನ್ಯಾಯಾಲಯವು ವಾಸ್ತವಾಂಶಗಳು ಮತ್ತು ಸತ್ಯ ಮಾತ್ರವಲ್ಲ; ನ್ಯಾಯಕ್ಕೇ ಘೋರ ಅನ್ಯಾಯ ಎಸಗಿದೆ.

ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾಕಷ್ಟು ನೆಲೆಗಳಿವೆ ಎಂಬುದು ಸ್ಪಷ್ಟವಾಗಿದ್ದು, ಸಿಬಿಐ ವಿಳಂಬವಿಲ್ಲದೇ ಮೇಲ್ಮನವಿ ಸಲ್ಲಿಸಬೇಕು. ಎಸಗಿದ ಅಪರಾಧಗಳಿಗೆ ಶಿಕ್ಷೆಯಿಲ್ಲದೇ ಹೋಗಬಾರದು; ಕಾನೂನು ಪ್ರಕಾರ ಸಮಾಜ ನಡೆಯಬೇಕು ಎಂಬ ಮೂಲಭೂತ ತತ್ವದ ಕುರಿತು ಕಾಳಜಿ ಇರುವ ಪ್ರತಿಯೊಬ್ಬರೂ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಿಸಬೇಕು.

ಸಂಶಯರಹಿತವಾಗಿ ಈ ತೀರ್ಪು ಕಾನೂನು ನಡಾವಳಿಯ ಸಮಾಜವಾಗಿರುವ ಭಾರತದ ವಿಶ್ವಾಸಾರ್ಹತೆಗೆ ಗಂಭೀರವಾದ ಹೊಡೆತ ನೀಡಿದೆ ಮತ್ತು ಸಂಚಿನ ಆರೋಪವನ್ನು ಮರಳಿ ಸೇರಿಸಲು ಸಾಧ್ಯವಾಗಿದ್ದಕ್ಕೆ ಏಕೈಕ ಕಾರಣ, 2017ರಲ್ಲಿ ಸುಪ್ರೀಂ ಕೋರ್ಟಿನ ಮಧ್ಯಪ್ರವೇಶ ಎಂಬುದನ್ನು ನಾವು ಮರೆಯಬಾರದು. ಇಪ್ಪತ್ತೈದು ವರ್ಷಗಳ ವಿಳಂಬ ಮಾಡಿದ ಬಳಿಕ, ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಮೂರು ವರ್ಷಗಳಿಗೂ ಕಡಿಮೆ ಅವಧಿಯಲ್ಲಿ ಕೊನೆಗೂ ತೀರ್ಪು ಬಂತು ಎಂಬ ವಾಸ್ತವವು ತಪ್ಪನ್ನು ಇನ್ನೂ ಸರಿಪಡಿಸಲು ಸಾಧ್ಯ ಎಂಬುದನ್ನು ಸೂಚಿಸುತ್ತದೆ.

ಈಗ ಅಗತ್ಯವಿರುವುದು ಏನೆಂದರೆ, ಪ್ರಸ್ತುತ ಬೀಸುತ್ತಿರುವ ರಾಜಕೀಯ ಗಾಳಿಯ ವಿರುದ್ಧ ಹೋಗಬೇಕಾಗಿ ಬಂದರೂ, ಸಾಕ್ಷ್ಯವನ್ನು ನ್ಯಾಯಯುತವಾಗಿ ತೂಗಿನೋಡಿ, ಅರ್ಹತೆಯ ಮೇಲೆ ತೀರ್ಪು ನೀಡಲು ಭಯಪಡದ, ಮೇಲ್ಮನವಿ ಸಲ್ಲಿಸಲಾದ ನ್ಯಾಯಾಲಯದ ಒಬ್ಬರು ನ್ಯಾಯಾಧೀಶರು. ಇಂತಹ ಜನರು ಈಗ ಅಪರೂಪವಾಗಿದ್ದರೂ, ಭಾರತದ ಕಾನೂನು ವ್ಯವಸ್ಥೆಯಲ್ಲಿ ಇಲ್ಲವೇ ಇಲ್ಲ ಎಂದೇನಲ್ಲ.

photo courtesy : Analytics Insight

ನೆನಪಿಗೆ ಬರುವ ಒಂದು ಉದಾಹರಣೆ ಎಂದರೆ, ಗುಜರಾತ್ ಹತ್ಯಾಕಾಂಡದ ವೇಳೆ ಫೆಬ್ರವರಿ 28, 2002ರಲ್ಲಿ ನರೋಡ ಪಟಿಯಾದಲ್ಲಿ ನಡೆದ ಹಿಂಸಾಚಾರದ ಪ್ರಕರಣದಲ್ಲಿ ಗಮನಾರ್ಹ ತೀರ್ಪು ನೀಡಿದ ನ್ಯಾ. ಜ್ಯೋತ್ಸ್ನಾ ಯಾಜ್ಞಿಕ್ ಅವರು. ನರೋಡ ಪಟಿಯಾದಲ್ಲಿ ನಡೆದ ಯೋಜಿತ ಹಿಂಸಾಚಾರದಲ್ಲಿ 96 ಮುಸ್ಲಿಮರ ಹತ್ಯೆಯಾಗಿತ್ತು; 124ಕ್ಕೂ ಹೆಚ್ಚು ಮುಸ್ಲಿಮರು ಗಾಯಗೊಂಡಿದ್ದರು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿತ್ತು. ಅಂದು ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನ್ಯಾ. ಯಾಜ್ಞಿಕ್ ಅವರು, ಮಾಜಿ ಮಂತ್ರಿ ಮಾಯಾಬೆನ್ ಕೊಡ್ನಾನಿ ಸಹಿತ 32 ಮಂದಿಯನ್ನು ಈ ಸಂಚಿನ ಭಾಗವಾಗಿದ್ದರೆಂದು ತೀರ್ಮಾನಿಸಿ, ಅವರೆಲ್ಲರಿಗೂ ಜೈಲು ಶಿಕ್ಷೆಯನ್ನು ವಿಧಿಸುವ ಧೈರ್ಯಯುತವಾದ ತೀರ್ಪು ನೀಡಿದ್ದರು.

ಜರ್ಮನಿಯಲ್ಲಿ ನಾಜಿಗಳು ನಡೆಸಿದ ಹೋಲೋಕೋಸ್ಟ್‌ನಿಂದ ತಪ್ಪಿಸಿಕೊಂಡಿದ್ದ ತತ್ವಶಾಸ್ತ್ರಜ್ಞೆ ಹನ್ನಾ ಅರೆಂಟ್ ಅವರಿಂದ ಕಲಿಯಬಹುದಾರೆ, ಮಾನವೀಯತೆಯಲ್ಲಿ ಮತ್ತು ಎಲ್ಲಾ ಜನರನ್ನು ಭಯಭೀತಿಗೊಳಿಸಿ ಸಮ್ಮತಿ ಸೂಚಿಸುವಂತೆ ಮಾಡುವ ಅಥವಾ ತಮ್ಮ ಸಿದ್ಧಾಂತಗಳಿಗೆ ಬದ್ಧರಾಗಿರುವ ವ್ಯಕ್ತಿಗಳನ್ನಾಗಿಸಿ ಬದಲಾಯಿಸುವ ಅಂತಿಮ ಅಸಾಧ್ಯತೆಯ ಬಗ್ಗೆ ನಮ್ಮ ನಂಬಿಕೆಯನ್ನು ಇರಿಸಿಕೊಳ್ಳಬೇಕಿದೆ. ಅರೆಂಟ್ ಅವರ ವಾದದ ಪ್ರಕಾರ ‘ಭಯಭೀತಿಯ ವಾತಾವರಣದಲ್ಲಿ ಬಹುತೇಕ ಜನ ಹೇಳಿದ್ದಕ್ಕೆಲ್ಲಾ ಸಮ್ಮತಿಯನ್ನು ಸೂಚಿಸುತ್ತಾರಾದರೂ, ಕೆಲವರಾದರೂ ಅದನ್ನು ಧಿಕ್ಕರಿಸುತ್ತಾರೆ. ಅಂತಿಮ ಪರಿಹಾರವನ್ನು ಸೂಚಿಸಲಾಗಿದ್ದ ದೇಶಗಳಲ್ಲಿ ಬಹುತೇಕ ಎಲ್ಲೆಡೆ “ಅದು ಸಿದ್ದಿಸಬಹುದು” ಎಂದುಕೊಂಡರೂ ಎಲ್ಲಾ ಕಡೆ ಅದು ಸಾಧ್ಯವಾಗಲಿಲ್ಲ ಎಂಬುದರಿಂದ ಸಿಕ್ಕುವ ಪಾಠ ಅದು’.

ಸಂವಿಧಾನವನ್ನು ರಕ್ಷಿಸಿಕೊಳ್ಳುವ ನಮ್ಮ ಹೋರಾಟ, ಬೇರೆಲ್ಲಾ ಅಡೆತಡೆಗಳ ಹೊರತು ಭಾರತೀಯ ನ್ಯಾಯಾಂಗ ವ್ಯವಸ್ಥೆಯು ತನ್ನೊಳಗೇ- ‘ಭಾರತೀಯ ಸಂವಿಧಾನದಲ್ಲಿ ನಿಜವಾದ ನಂಬಿಕೆ ಮತ್ತು ನಿಷ್ಟೆ’ಯ ತಮ್ಮ ಪ್ರತಿಜ್ಞೆಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಲು ಸಿದ್ಧರಿರುವ ನ್ಯಾ. ಯಾಜ್ಞಿಕ್ ಅವರಂತಹ ನ್ಯಾಯಾಧೀಶರನ್ನು- ಇನ್ನೂ ಕೂಡಾ ಹುಟ್ಟುಹಾಕುತ್ತದೆ ಎಂಬ ನಂಬಿಕೆಯನ್ನು ನಾವು ಮುಂದುವರೆಸಿಕೊಂಡು ಹೋಗಬೇಕಿದೆ.

ಅರವಿಂದ್ ನಾರಾಯಣ್

(ಸಂವಿಧಾನ ತಜ್ಞರು, ಪರ್ಯಾಯ ಕಾನೂನು ವೇದಿಕೆ (ಎಎಲ್‍ಎಫ್) ಸ್ಥಾಪಕ ಸದಸ್ಯರು. ಎಲ್‌ಜಿಬಿಟಿ ಹಕ್ಕುಗಳ ಹೋರಾಟಗಳಲ್ಲೂ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಐಪಿಸಿ 377 ರದ್ದುಗೊಳಿಸುವ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು.)

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...