Homeಮುಖಪುಟಬಾಂಗ್ಲಾ ಪ್ರಜೆಯನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ: ಟಿಎಂಸಿ, ಕಾಂಗ್ರೆಸ್ ಆರೋಪ

ಬಾಂಗ್ಲಾ ಪ್ರಜೆಯನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ: ಟಿಎಂಸಿ, ಕಾಂಗ್ರೆಸ್ ಆರೋಪ

- Advertisement -
- Advertisement -

ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ನಿಶಿತ್ ಪ್ರಾಮಾಣಿಕ್‌ರವರ ಪೌರತ್ವದ ಪ್ರಶ್ನೆ ಭುಗಿಲೆದ್ದಿದೆ. ಪಶ್ಚಿಮ ಬಂಗಾಳದ ಬಿಜೆಪಿ ಸಂಸದರಾಗಿರುವ ಅವರು ಭಾರತದ ಪ್ರಜೆಯಲ್ಲ ಬದಲಿಗೆ ಬಾಂಗ್ಲಾದೇಶದವರಿರಬೇಕು ಎಂದು ಟಿಎಂಸಿ, ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಸಂಸತ್ ಸದಸ್ಯ ರಿಪುನ್ ಬೋರಾ ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ನಿಶಿತ್ ಪ್ರಾಮಾಣಿಕ್‌ರವರ ಜನ್ಮಸ್ಥಳ ಮತ್ತು ಪೌರತ್ವದ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಕೆಲ ಮಾಧ್ಯಮ ವರದಿಗಳನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಬೋರಾ,”ವಿದೇಶಿ ಪ್ರಜೆಯನ್ನು ಕೇಂದ್ರ ಕ್ಯಾಬಿನೆಟ್‌ಗೆ ಸೇರಿಸಿಕೊಂಡಿರುವುದು ಅತ್ಯಂತ ಕಳವಳಕಾರಿ ವಿಷಯ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬಂಗಾಳದ ಸಚಿವ ಇಂದ್ರಾನಿಲ್ ಸೇನ್ ಕೇಂದ್ರ ಸಚಿವ ನಿಶಿತ್ ಪ್ರಾಮಾಣಿಕ್ ಬಾಂಗ್ಲಾದೇಶದವರಾಗಿರಬಹುದು ಎಂಬ ವಿಷಯ ಕೇಳಿ ಆಘಾತವಾಗಿದೆ ಎಂದಿದ್ದಾರೆ.

ಆದರೆ ಈ ಆರೋಪಗಳನ್ನು ಬಂಗಾಳ ಬಿಜೆಪಿ ನಿರಾಕರಿಸಿದೆ. “ಇದುವರೆಗೂ ಯಾರೂ ಅವರು ಭಾರತದವರಲ್ಲ ಎಂಬ ಆಧಾರಗಳನ್ನು ಒದಗಿಸಿಲ್ಲ. ಸುಮ್ಮೆನೆ ಆರೋಪ ಮಾಡಬೇಡಿ, ದಾಖಲೆ ತೋರಿಸಿ” ಎಂದು ಪಶ್ಚಿಮ ಬಂಗಾಳದ ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ ಸವಾಲು ಹಾಕಿದ್ದಾರೆ.

ಬಾಂಗ್ಲಾದೇಶದ ಧಾರ್ಮಿಕ ಸಂಘಟನೆಯೆಂದು ಕರೆದುಕೊಳ್ಳುವ ಪೂಜಾರ್ ಮೇಳ ಎಂಬ ಖಾತೆಯು ಹಾಕಿದ ಪೋಸ್ಟ್‌ನಿಂದ ಈ ವಿವಾದ ಭುಗಿಲೆದ್ದಿದೆ. ಪ್ರಾಮಾಣಿಕ್‌ರವರು ಕೇಂದ್ರ ಇಲಾಖೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದಾಗ “ಗೈಬಂಧ ಜಿಲ್ಲೆಯ ಪಾಲಶ್‌ಬರಿ ಪೊಲೀಸ್ ಠಾಣೆ ವ್ಯಾಪ್ತಿಯ ಹರಿನಾಥಪುರದ ಪುತ್ರರವರ ಸಾಧನೆಯಿದು. ಅವರು ಪಶ್ಚಿಮ ಬಂಗಾಳದಲ್ಲಿ ಕಂಪ್ಯೂಟರ್ ಸೈನ್ಸ್ ಅಧ್ಯಯನ ನಡೆಸಿದ್ದರು” ಎಂದು ಪೋಸ್ಟ್ ಹಾಕಲಾಗಿತ್ತು ಎನ್ನಲಾಗಿದೆ.

ಪ್ರಾಮಾಣಿಕ್‌ರವರ ಲೋಕಸಭಾ ಬಯೋಡೇಟಾದಲ್ಲಿ ಅವರ ಜನ್ಮ ಸ್ಥಳವನ್ನು ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಜಿಲ್ಲೆಯ ದಿನ್ಹಟ ಎಂದು ಬರೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ವಿದೇಶಿ ಪ್ರಧಾನಿ ಆಗಬೇಕು, ಬಂಗಾಳ ಮೂಲದ ಹಿಂದೂಗಳು ಅಸ್ಪೃಶ್ಯರು?

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...