Homeಮುಖಪುಟಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

ಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

- Advertisement -
- Advertisement -

ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಪ್ರತ್ಯೇಕಿಸುವ ಸಂವಿಧಾನದ ಮೂಲ ರಚನೆಯ ಸಿದ್ಧಾಂತವು ದಿಕ್ಕು ತೋರಿಸುವ ಧ್ರುವ ನಕ್ಷತ್ರದಂತೆ ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶನಿವಾರ ಹೇಳಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

1973ರ ಕೇಶವಾನಂದ ಭಾರತಿ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಮಹತ್ವದ ತೀರ್ಪನ್ನು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಟೀಕಿಸಿದ ಕೆಲವು ದಿನಗಳ ನಂತರ ಚಂದ್ರಚೂಡ್ ಅವರ ಹೇಳಿಕೆಗಳು ಹೊರಬಿದ್ದಿವೆ.

7-6 ಬಹುಮತದೊಂದಿಗೆ 13 ನ್ಯಾಯಾಧೀಶರ ಪೀಠವು, “ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ ಅದರ ಮೂಲ ರಚನೆಯನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದಿದ್ದು ಐತಿಹಾಸಿಕ ತೀರ್ಪಾಗಿದೆ.

ಜನವರಿ 11ರಂದು ಧಂಕರ್ ಮಾತನಾಡುತ್ತಾ, “ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವು ಬೇರೆ ಯಾವುದೇ ಸಂಸ್ಥೆಯ ಮೇಲೆ ಅವಲಂಬಿತವಾಗಿದೆಯೇ? ಇದಕ್ಕೆ ನಮ್ಮ ಸ್ಟಾಂಪ್ ಬೇಕು ಎಂದು ಯಾವುದೇ ಸಂಘಟನೆ ಅಥವಾ ಸಂಸ್ಥೆ ಹೇಳಬಹುದೇ?” ಎಂದು ಪ್ರಶ್ನಿಸಿದ್ದರು.

ಕೇಶವಾನಂದ ಭಾರತಿಯವರನ್ನು ಪ್ರತಿನಿಧಿಸಿದ ವಕೀಲ ನಾನಿ ಪಾಲ್ಖಿವಾಲಾ ಅವರನ್ನು ಚಂದ್ರಚೂಡ್ ಅವರು ಸ್ಮರಿಸಿದ್ದಾರೆ. ಕೇರಳದ 1969ರ ಭೂ ಸುಧಾರಣೆಗಳನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದಾಗ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

“ನಮ್ಮ ಸಂವಿಧಾನದ ಮೂಲ ರಚನೆಯು ಧ್ರುವ ನಕ್ಷತ್ರದಂತೆ, ಸಂವಿಧಾನದ ವ್ಯಾಖ್ಯಾನಕಾರರು ಮತ್ತು ಅನುಷ್ಠಾನಕಾರರಿಗೆ ಮಾರ್ಗದರ್ಶನ ನೀಡುತ್ತದೆ, ನಿರ್ದಿಷ್ಟ ನಿರ್ದೇಶನವನ್ನು ನೀಡುತ್ತದೆ” ಎಂದು ಚಂದ್ರಚೂಡ್ ಹೇಳಿದ್ದಾರೆ.

“ನಮ್ಮ ಸಂವಿಧಾನದ ಮೂಲ ರಚನೆ ಅಥವಾ ತತ್ವವು ಸಂವಿಧಾನದ ಶ್ರೇಷ್ಠತೆ, ಕಾನೂನಿನ ನಿಯಮ, ಅಧಿಕಾರಗಳ ಪ್ರತ್ಯೇಕತೆ, ನ್ಯಾಯಾಂಗ ವಿಮರ್ಶೆ, ಜಾತ್ಯತೀತತೆ, ಫೆಡರಲಿಸಂ, ಸ್ವಾತಂತ್ರ್ಯ, ವ್ಯಕ್ತಿಯ ಘನತೆ, ರಾಷ್ಟ್ರದ ಏಕತೆ, ಸಮಗ್ರತೆಯ ಮೇಲೆ ಆಧಾರಿತವಾಗಿದೆ” ಎಂದಿದ್ದಾರೆ.

“ಸಂವಿಧಾನದ ಆತ್ಮವನ್ನು ಹಾಗೇ ಇಟ್ಟುಕೊಂಡು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ಪಠ್ಯವನ್ನು ವ್ಯಾಖ್ಯಾನಿಸುವುದರಲ್ಲಿ ನ್ಯಾಯಾಧೀಶರ ಕುಶಲತೆ ಅಡಗಿದೆ” ಎಂದು ಚಂದ್ರಚೂಡ್ ಹೇಳಿರುವುದರಲ್ಲಿ ಲೈವ್ ಲಾ ವರದಿ ಮಾಡಿದೆ.

ಕೇಂದ್ರ ಸರ್ಕಾರ v/s ನ್ಯಾಯಾಂಗ

ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ನ್ಯಾಯಾಂಗದ ನಡುವೆ ವಿವಾದ ಉಂಟಾಗಿರುವ ಬೆನ್ನಲ್ಲೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಹೇಳಿಕೆಗಳು ಹೊರಬಂದಿವೆ.

ಕಾನೂನು ಸಚಿವ ಕಿರಣ್ ರಿಜಿಜು ಅವರು ಹಲವಾರು ಸಂದರ್ಭಗಳಲ್ಲಿ ಹೇಳಿಕೆಗಳನ್ನು ನೀಡುತ್ತಾ, “ಪ್ರಸ್ತುತ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯ ಮೂಲಕ ಬದಲಾಯಿಸಬೇಕು” ಎಂದು ಪುನರುಚ್ಚರುಚ್ಚರಿಸುತ್ತಿದ್ದಾರೆ. ಈ ಕಾಯ್ದೆಯನ್ನು 2015ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ತಿಂಗಳ ನಂತರ ಸಂಸತ್ತಿನಲ್ಲಿ ಕಾನೂನನ್ನು ಅಂಗೀಕರಿಸಲಾಯಿತು. ಆದರೆ, ನ್ಯಾಯಾಲಯವು ಕಾನೂನನ್ನು ಅಸಾಂವಿಧಾನಿಕ ಎಂದು ಪರಿಗಣಿಸಿತು.

ಮುಖ್ಯ ನ್ಯಾಯಮೂರ್ತಿ, ಇಬ್ಬರು ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಗಳು ಮತ್ತು ಕಾನೂನು ಸಚಿವರು, ಸಿಜೆಐ, ಪ್ರಧಾನಿ ಹಾಗೂ ವಿರೋಧ ಪಕ್ಷದ ನಾಯಕರಿಂದ ನಾಮನಿರ್ದೇಶನಗೊಂಡ ಇತರ ಇಬ್ಬರು ಗಣ್ಯ ವ್ಯಕ್ತಿಗಳನ್ನು ಒಳಗೊಂಡ ಸಂಸ್ಥೆಯ ಮೂಲಕ ನ್ಯಾಯಾಂಗ ನೇಮಕಾತಿಗಳನ್ನು ಮಾಡಬೇಕೆಂದು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ಕಾಯ್ದೆಯು ಹೇಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...