Homeಮುಖಪುಟಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

ಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

- Advertisement -
- Advertisement -

ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಪ್ರತ್ಯೇಕಿಸುವ ಸಂವಿಧಾನದ ಮೂಲ ರಚನೆಯ ಸಿದ್ಧಾಂತವು ದಿಕ್ಕು ತೋರಿಸುವ ಧ್ರುವ ನಕ್ಷತ್ರದಂತೆ ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶನಿವಾರ ಹೇಳಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

1973ರ ಕೇಶವಾನಂದ ಭಾರತಿ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಮಹತ್ವದ ತೀರ್ಪನ್ನು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಟೀಕಿಸಿದ ಕೆಲವು ದಿನಗಳ ನಂತರ ಚಂದ್ರಚೂಡ್ ಅವರ ಹೇಳಿಕೆಗಳು ಹೊರಬಿದ್ದಿವೆ.

7-6 ಬಹುಮತದೊಂದಿಗೆ 13 ನ್ಯಾಯಾಧೀಶರ ಪೀಠವು, “ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ ಅದರ ಮೂಲ ರಚನೆಯನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದಿದ್ದು ಐತಿಹಾಸಿಕ ತೀರ್ಪಾಗಿದೆ.

ಜನವರಿ 11ರಂದು ಧಂಕರ್ ಮಾತನಾಡುತ್ತಾ, “ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವು ಬೇರೆ ಯಾವುದೇ ಸಂಸ್ಥೆಯ ಮೇಲೆ ಅವಲಂಬಿತವಾಗಿದೆಯೇ? ಇದಕ್ಕೆ ನಮ್ಮ ಸ್ಟಾಂಪ್ ಬೇಕು ಎಂದು ಯಾವುದೇ ಸಂಘಟನೆ ಅಥವಾ ಸಂಸ್ಥೆ ಹೇಳಬಹುದೇ?” ಎಂದು ಪ್ರಶ್ನಿಸಿದ್ದರು.

ಕೇಶವಾನಂದ ಭಾರತಿಯವರನ್ನು ಪ್ರತಿನಿಧಿಸಿದ ವಕೀಲ ನಾನಿ ಪಾಲ್ಖಿವಾಲಾ ಅವರನ್ನು ಚಂದ್ರಚೂಡ್ ಅವರು ಸ್ಮರಿಸಿದ್ದಾರೆ. ಕೇರಳದ 1969ರ ಭೂ ಸುಧಾರಣೆಗಳನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದಾಗ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

“ನಮ್ಮ ಸಂವಿಧಾನದ ಮೂಲ ರಚನೆಯು ಧ್ರುವ ನಕ್ಷತ್ರದಂತೆ, ಸಂವಿಧಾನದ ವ್ಯಾಖ್ಯಾನಕಾರರು ಮತ್ತು ಅನುಷ್ಠಾನಕಾರರಿಗೆ ಮಾರ್ಗದರ್ಶನ ನೀಡುತ್ತದೆ, ನಿರ್ದಿಷ್ಟ ನಿರ್ದೇಶನವನ್ನು ನೀಡುತ್ತದೆ” ಎಂದು ಚಂದ್ರಚೂಡ್ ಹೇಳಿದ್ದಾರೆ.

“ನಮ್ಮ ಸಂವಿಧಾನದ ಮೂಲ ರಚನೆ ಅಥವಾ ತತ್ವವು ಸಂವಿಧಾನದ ಶ್ರೇಷ್ಠತೆ, ಕಾನೂನಿನ ನಿಯಮ, ಅಧಿಕಾರಗಳ ಪ್ರತ್ಯೇಕತೆ, ನ್ಯಾಯಾಂಗ ವಿಮರ್ಶೆ, ಜಾತ್ಯತೀತತೆ, ಫೆಡರಲಿಸಂ, ಸ್ವಾತಂತ್ರ್ಯ, ವ್ಯಕ್ತಿಯ ಘನತೆ, ರಾಷ್ಟ್ರದ ಏಕತೆ, ಸಮಗ್ರತೆಯ ಮೇಲೆ ಆಧಾರಿತವಾಗಿದೆ” ಎಂದಿದ್ದಾರೆ.

“ಸಂವಿಧಾನದ ಆತ್ಮವನ್ನು ಹಾಗೇ ಇಟ್ಟುಕೊಂಡು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ಪಠ್ಯವನ್ನು ವ್ಯಾಖ್ಯಾನಿಸುವುದರಲ್ಲಿ ನ್ಯಾಯಾಧೀಶರ ಕುಶಲತೆ ಅಡಗಿದೆ” ಎಂದು ಚಂದ್ರಚೂಡ್ ಹೇಳಿರುವುದರಲ್ಲಿ ಲೈವ್ ಲಾ ವರದಿ ಮಾಡಿದೆ.

ಕೇಂದ್ರ ಸರ್ಕಾರ v/s ನ್ಯಾಯಾಂಗ

ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ನ್ಯಾಯಾಂಗದ ನಡುವೆ ವಿವಾದ ಉಂಟಾಗಿರುವ ಬೆನ್ನಲ್ಲೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಹೇಳಿಕೆಗಳು ಹೊರಬಂದಿವೆ.

ಕಾನೂನು ಸಚಿವ ಕಿರಣ್ ರಿಜಿಜು ಅವರು ಹಲವಾರು ಸಂದರ್ಭಗಳಲ್ಲಿ ಹೇಳಿಕೆಗಳನ್ನು ನೀಡುತ್ತಾ, “ಪ್ರಸ್ತುತ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯ ಮೂಲಕ ಬದಲಾಯಿಸಬೇಕು” ಎಂದು ಪುನರುಚ್ಚರುಚ್ಚರಿಸುತ್ತಿದ್ದಾರೆ. ಈ ಕಾಯ್ದೆಯನ್ನು 2015ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ತಿಂಗಳ ನಂತರ ಸಂಸತ್ತಿನಲ್ಲಿ ಕಾನೂನನ್ನು ಅಂಗೀಕರಿಸಲಾಯಿತು. ಆದರೆ, ನ್ಯಾಯಾಲಯವು ಕಾನೂನನ್ನು ಅಸಾಂವಿಧಾನಿಕ ಎಂದು ಪರಿಗಣಿಸಿತು.

ಮುಖ್ಯ ನ್ಯಾಯಮೂರ್ತಿ, ಇಬ್ಬರು ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಗಳು ಮತ್ತು ಕಾನೂನು ಸಚಿವರು, ಸಿಜೆಐ, ಪ್ರಧಾನಿ ಹಾಗೂ ವಿರೋಧ ಪಕ್ಷದ ನಾಯಕರಿಂದ ನಾಮನಿರ್ದೇಶನಗೊಂಡ ಇತರ ಇಬ್ಬರು ಗಣ್ಯ ವ್ಯಕ್ತಿಗಳನ್ನು ಒಳಗೊಂಡ ಸಂಸ್ಥೆಯ ಮೂಲಕ ನ್ಯಾಯಾಂಗ ನೇಮಕಾತಿಗಳನ್ನು ಮಾಡಬೇಕೆಂದು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ಕಾಯ್ದೆಯು ಹೇಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...