Homeಅಂಕಣಗಳುನಮ್ಮ ಬೆನ್ನ ಹಿಂದೆ ನಡೆದ ಬೇಸಾಯೋ ಆಟ

ನಮ್ಮ ಬೆನ್ನ ಹಿಂದೆ ನಡೆದ ಬೇಸಾಯೋ ಆಟ

- Advertisement -
- Advertisement -

ಮೊನ್ನೆ ನಾವೆಲ್ಲ ಲಾಕಡೌನಿನ ಛಳಿಯಿಂದ ತಪ್ಪಿಸಿಕೊಳ್ಳಲಿಕ್ಕೆ ಮನಿಯೊಳಗ ಬೆಚ್ಚನೆ ಮಲಗಿದ್ದಾಗ ಹಣಕಾಸು ಸಚಿವೆ ನಿರ್ಮಲಾತಾಯಿ ಅವರು ಮೂರು ಪ್ರಮುಖ ನೀತಿ ಬದಲಾವಣೆಗಳನ್ನ ಘೋಷಣೆ ಮಾಡಿದಾರ.

ಅವು ಯಾವುಪಾ ಅಂದರ ಗುತ್ತಿಗೆ ಬೇಸಾಯ, ಎಪಿಎಂಸಿ ಕಾಯಿದೆ ಬದಲಾವಣೆ ಮತ್ತು ಅವಶ್ಯಕ ವಸ್ತು ಕಾಯಿದೆಗೆ ಅನವಶ್ಯಕ ಬದಲಾವಣೆ. ಇವು ರೈತರ ಬದಕು ಬದಲಾಯಿಸಲಿಕ್ಕೆ ಅವಶ್ಯಕ ಅಂತ ಅವರು ಹೇಳಿದರು.

ಆದರ ಇಷ್ಟ ಗಡಿಬಡಿಯೊಳಗ ರೈತರನ್ನು ಬದಲಾಯಿಸಬೇಕಾಗಿತ್ತೇನು? ಅವರಿಗೆ ಈಗ ಸಧ್ಯಕ್ಕ ಒಂದಿಷ್ಟು ಪರಿಹಾರ ಕೊಟ್ಟರ ಸಾಕಿತ್ತು ಅನ್ನೋ ಪ್ರಶ್ನೆಗೆ. ಹಂಗಲ್ಲಾ, ಈಗಿನ ಕೆಟ್ಟ ಪರಿಸ್ಥಿತಿ ಮುಗಿದ ನಂತರ ಯಾರು ಉಳೀತಾರಲ್ಲಾ, ಅವರನ್ನು ಬದಲಾಯಿಸಿತೇವಿ ಅಂತ ಸರಕಾರದವರ ಉತ್ತರ.

ಎಲ್ಲರಿಗೂ ಕಣ್ಣಿಗೆ ಕಾಣೋ ಕಣ್ಕಟ್ಟು ಅಂದರ ಅವಶ್ಯಕ ವಸ್ತು ಕಾಯಿದೆ ತಿದ್ದುಪಡಿ. ಇದು ಏನಪಾ ಅಂದರ ಕೆಲವು ವಸ್ತುಗಳು ಈ ದೇಶದ ಜನರಿಗೆ ಅವಶ್ಯವಾಗಿ ಬೇಕಾಗಿದ್ದಾವು, ಅವನ್ನು ಯಾರೂ ಕಳ್ಳಸಂತೆಯೊಳಗ ಮಾರಾಟ ಮಾಡಬಾರದು, ವಿನಾಕಾರಣ ಕೊರತೆ ಸೃಷ್ಟಿಸಬಾರದು, ಅಕಾರಣ ಹೆಚ್ಚು ಬೆಲೆಗೆ ಮಾರಾಟ ಮಾಡಬಾರದು, ಮಾಡಿದರ ಅವರನ್ನ ಜೈಲಿಗೆ ಹಾಕತೇವಿ ಅಂತ ಒಂದು ಕಾನೂನು. ಸಂಗ್ರಹ ಮಾಡಿ ಇಟ್ಟದ್ದರಿಂದ ಕೊರತೆ ಉಂಟಾದರ ಜಿಲ್ಲಾಧಿಕಾರಿ ಹೋಗಿ ಆ ಆಹಾರ ಪದಾರ್ಥ ಜಪ್ತು ಮಾಡೋ ಅವಕಾಶ ಇದರಾಗ ಐತಿ.

ಈ ಕಾಯಿದೆ ಚೌಕಟ್ಟಿನಾಗ – ಆಹಾರ, ನೀರು, ನಾಣ್ಯ ಹಾಗೂ ನೋಟು, ಪೆಟ್ರೋಲು, ಪೋಸ್ಟು, ದೇಶದ ರಕ್ಷಣೆ, ರಸ್ತೆ- ಚರಂಡಿ ಸ್ವಚ್ಛತೆ, ಚುನಾವಣೆ , ಗೊಬ್ಬರ, ವಿದ್ಯುತ್ತು, ಕಲ್ಲಿದ್ದಲು, ಮಣ್ಣು -ಮಸಿ, ಎಲ್ಲಾ ಬರತಾವು.

ಇದರಾಗಿಂದ ಆಹಾರ ಧಾನ್ಯ, ಅಡುಗೆ ಎಣ್ಣೆ, ತರಕಾರಿ ಇತ್ಯಾದಿಗಳನ್ನು ಹೊರಗಡೆ ತೆಗೆಯೋ ತಯಾರಿ ನಡತೇತಿ. ಯಾಕಂದರ ಅವು ಅವಶ್ಯ ಅಲ್ಲನೋಡ್ರಿ. ಮನುಷ್ಯ ಆಹಾರ ಇಲ್ಲದೇ ಇರಬಹುದು, ಆದರ ಪೆಟ್ರೋಲು, ಗೊಬ್ಬರ ಇಲ್ಲದೇ ಇರಲಿಕ್ಕೆ ಆಗೋದಿಲ್ಲಲಾ. ಅದಕ್ಕ. ಇನ್ನ ಹಿಂಗೆಲ್ಲಾ ಬ್ರಿಟಿಷರ ಕಾಲದ ಕಾನೂನುಗಳಿಂದ ನಮ್ಮ ದೇಶದಾಗ ಆಹಾರ ಸಂಗ್ರಹಣೆ ಕಮ್ಮಿ ಆಗೇತಿ, ಕೃಷಿ ಉತ್ಪನ್ನ ರಫ್ತು ಆಗಲೊಲ್ಲದು, ಆಹಾರ ಸಂಸ್ಕರಣೆ ಉದ್ದಿಮೆ ಹಿಂದ ಉಳದೇತಿ ಅಂತ ಕೆಲವು ವ್ಯಾಪಾರಿಗಳು ತಮ್ಮ ಹಿತೈಷಿಗಳಾದ ಆಳುವ ಪಕ್ಷದ ನಾಯಕರ ಜೊತೆಗೆ ತಕರಾರು ತಗದರು. ಬಡವರು- ಹಿಂದುಳಿದವರು- ಅಧಿಕಾರ ಹೀನರು ಮಾತು ತಗದು ಹಾಕಬಹುದು, ಆದರ ಚುನಾವಣೆ ಖರ್ಚು ಕೊಡೋ ಧಣಿ- ಸೇಠುಗಳ ಮಾತು ಪಾಲಿಸಲಾರದಂಗ ಇರಲಿಕ್ಕೆ ಆಗತದೇನು? ಅದಕ್ಕ ಬಂತು ಒಂದು ಘೋಷಣೆ. ಇನ್ನ ಮ್ಯಾಲೆ ಆಹಾರ ಸಂಸ್ಕರಣೆ- ಸಂಗ್ರಹಣೆ- ರಫ್ತು ಮುಂತಾದ ದಂಧೆ ಮಾಡೋರು ಎಲ್ಲಾ ಎಷ್ಟು ಬೇಕು ಅಷ್ಟು ಆಹಾರ- ಎಣ್ಣೆ- ತರಕಾರಿ ಸಂಗ್ರಹ ಮಾಡಬಹುದು. ಯಾವಾನೂ ಅವರಿಗೆ ಬೈಯಂಗಿಲ್ಲ. ಬರಗಾಲ- ಕ್ಷಾಮದಾಗ ಅವರನ್ನ ಜೈಲಿಗೆ ಹಾಕೋದಿರಲಿ, ಅವರಿಗೆ ನೋಟೀಸು ಕೊಡಂಗಿಲ್ಲ.

ಅವರ ಹತ್ತರ ಹೋಗಿ ಮನವಿ ಮಾಡಬಹುದು ಅಷ್ಟ. ಇದಕ್ಕ ಸಂಬಂಧ ಪಟ್ಟದ್ದು ಅಂದರ ಎಪಿಎಂಸಿ ಕಾಯಿದೆ ತಿದ್ದುಪಡಿ. ಇದರ ಪ್ರಕಾರ ರೈತರು ತಮ್ಮ ಉತ್ಪನ್ನಗಳನ್ನ ಎಪಿಎಂಸಿ ಯಾರ್ಡಿನಾಗ, ಟೆಂಡರ ಪ್ರಕ್ರಿಯೆ ಮೂಲಕ ಮಾಡಬೇಕು. ಯಾವುದರ ಕಂಪನಿಗೆ, ಸರಕಾರಕ್ಕ ಅಥವಾ ಕುಟುಂಬಗಳಿಗೆ ನೇರವಾಗಿ ಮಾರಂಗಿಲ್ಲ. ಕಳೆದ ಆರು ದಶಕಗಳಿಂದ ಇದು ನಡಕೊಂಡು ಬಂದದ. ಇದರಿಂದ ರೈತರಿಗೆ ಮಾರಲಿಕ್ಕೆ ಒಂದು ಜಾಗ ಸಿಕ್ಕದ, ಒಬ್ಬರ ಕಡೆ ಮಾರಿಕೊಂಡು ಕೈ ಕಟ್ಟಿಸಿಕೊಳ್ಳೋ ಅನಿವಾರ್ಯದಿಂದ ತಪ್ಪಿಸೇತಿ.

ಆದರ ಇದನ್ನ ಬದಲಿಸಿ, ಇನ್ನ ಮ್ಯಾಲೆ ದೊಡ್ಡ ದೊಡ್ಡ ಕಂಪನಿಗಳು ರೈತರ ಹೊಲದ ಬಾಗಿಲಿಗೆ ಹೋಗಿ ಖರೀದಿಸುವ ನೀತಿ( ಫಾರ್ಮ ಗೇಟು ಪಾಲಿಸಿ) ತರಾಕ ಹತ್ಯಾರು. ಎಪಿಎಂಸಿಯೊಳಗ ಅನೇಕ ತೊಂದರೆ- ಲಫಡಾ ಇರಬಹುದು. ಆದರ ಅದರ ಸದಸ್ಯರು ರೈತರಿಂದ ಚುನಾಯಿತರಾದವರು. ಅವರನ್ನ ಐದು ವರ್ಷದ ನಂತರ ಬದಲಿಸಬಹುದು. ಬಹುರಾಷ್ಟ್ರೀಯ ಕಂಪನಿಯ ಮಾಲಕರನ್ನ ಬದಲಾಯಿಸಲಿಕ್ಕೆ ನಮ್ಮ ಘಾಳೆಪ್ಪಾ ಧೂಳಪ್ಪಾ ಬಟಾಬಯಲಪ್ಪನವರ್ ಅನ್ನೋ ಹೆಸರಿನ ರೈತರು ಏನು ಷೇರು ಮಾರ್ಕೆಟದಾಗ ಆ ಕಂಪನಿಯ ಷೇರು ಖರೀದಿ ಮಾಡಿದಾರೇನು? ಹಳ್ಳಿಯೊಳಗ ಕುಂತ ರೈತನಿಗೆ ಬಂಬಾಯಿ- ದಿಲ್ಲಿ ಕಂಪನಿಗಳ ವಿರುದ್ಧ ಹೋರಾಡೋ ಶಕ್ತಿ ಎಲ್ಲೆ ಬರತೇತಿ. ಈಗಾಗಲೇ ಕೃಷಿ ವಿಮೆ ಕಂಪನಿಗಳ ವಿರುದ್ಧ ಹೋರಾಟ ಮಾಡಲಿಕ್ಕೆ ಆಗಲಾರದೇ ರೈತರು ಸುಮ್ಮನೆ ಆಗಿದಾರು. ಇನ್ನ ಖರೀದಿದಾರರ ವಿರುದ್ಧ ಏನು ಮಾಡತಾರು.

ಅಲ್ಲದೇ ಆಹಾರ ಕೊರತೆ ಆದಾಗ ಸರಕಾರ ರೈತರಿಂದ ಖರೀದಿಸಿ ಜನರಿಗೆ ಕೊಡಬಹುದು, ಎಪಿಎಂಸಿ ಮ್ಯಾಲೆ ಅವಲಂಬನ ಆಗಬಹುದು. ಅದೆಲ್ಲಾ ಬಿಟ್ಟು ಯಾವಾನೋ ಡೊನಾಲ್ಡ ಟ್ರಂಪನ ಅಳಿಯಾನ ಕಂಪನಿ ಮ್ಯಾಲೆ ಒಬ್ಬ ಜಿಲ್ಲಾಧಿಕಾರಿ ಏನು ಒತ್ತಡ ಹಾಕಲಿಕ್ಕೆ ಬರತೇತಿ?

ಇಷ್ಟರಾಗ ಅತಿ ಎಡವಟ್ಟು ಆಗಿದ್ದು, ಆದರ ಜನರಿಗೆ ಯಾರಿಗೂ ಗೊತ್ತಾಗದೇ ಇರೋದು ಅಂದರ ಗುತ್ತಿಗೆ ಬೇಸಾಯ ಪದ್ಧತಿ. ಇದೇನಪಾ ಅಂದರ ದಶಕಗಳವರೆಗೆ ಬಡಜನರು ಹೋರಾಟ ಮಾಡಿ ಗಿಟ್ಟಿಸಿಕೊಂಡ ಭೂಮಿಯ ಹಕ್ಕಿಗೆ ಬೆನ್ನಿಗೆ ಹಾಕಿದ ಚೂರಿ.

ಮ್ಯಾಲಿನಿಂದ ನೋಡಿದರ ಇದು ಬೆಳೆಯುವವರು ಹಾಗೂ ಖರೀದಿಸುವವರ ನಡುವೆ ಬೀಜಾ ಹಾಕೋ ಟೈಮ್‍ದಾಗ ಒಪ್ಪಂದ ಮಾಡಿಕೊಡಲಿಕ್ಕೆ ಅನುವು ಮಾಡಿಕೊಡೋ ಕಾಯಿದೆ. ಆದರ ಅದರಾಗ ರೈತನ ಬೆಳಿಗೆ ಬೆಲೆ ನಿರ್ಧಾರ ಮಾಡೋದು ಅಂದಿನ ಮಾರುಕಟ್ಟೆ ಅಲ್ಲಾ, ಅವನು ಒಂದು ವರ್ಷದ ಹಿಂದೆ ಯಾವುದೋ ಕಂಪನಿ ಜೊತೆ ಮಾಡಿಕೊಂಡ ಒಪ್ಪಂದ ಅಂತ ಆಗತೇತಿ. ಅದು ರೈತನ ಹಿತದ ವಿರುದ್ಧ ಆದರ ಹೆಂಗ?

ಇನ್ನೊಂದು ಮಾತಂದರ ಕೃಷಿ ಭೂಮಿಯನ್ನ ಲೀಸು ಕೊಡಲಿಕ್ಕೆ ಇಲ್ಲಿವರೆಗೂ ಅವಕಾಶ ಇಲ್ಲ. ಹಳ್ಳಿಯೊಳಗ ಉತ್ಪನ್ನ ಹಂಚಿಕೆ ಆಧಾರದ ಮೇಲೆ ಮಾಲಿಕರು – ರೈತರ ನಡುವೆ ಬಾಯಿ ಮಾತಿನ ಒಪ್ಪಂದ ನಡದಾವು. ಅದು ಬ್ಯಾರೆ. ಆದರ ಗುತ್ತಿಗೆ ಬೇಸಾಯ ಕಾನೂನು ಅಂದರ ಬಡ ರೈತರ ಭೂಮಿಯನ್ನ ನೂರು ವರ್ಷ ಯಾವುದೋ ದೊಡ್ಡ ಕಂಪನಿಗೆ ಲೀಸು ಕೊಡಿಸೋ ಕಾಯಿದೆ. ಅಂದರ ಸುಮಾರು ನಾಲ್ಕು ತಲೆಮಾರು ಆ ಜಮೀನಿನ ಕಡೆ ಆ ರೈತರ ಕುಟುಂಬದವರು ನೋಡಂಗಿಲ್ಲ. ನೂರು ವರ್ಷ ರಂಟಿ – ಕುಂಟಿ ಹೊಡಿಯೋ ಅಭ್ಯಾಸ ಬಿಟ್ಟು ಹೋತು ಅಂದರ ಆಮ್ಯಾಲೆ ಏನು ಮಾಡತಾರ? ಆವಾಗ ರೈತರ ಮರಿ ಮಕ್ಕಳಿಗೆ ಬೀಜಾ ಹಾಕೋದು, ನೀರಾವರಿ ಮಾಡೋದು ಯಾರು ಹೇಳಿ ಕೊಡಬೇಕು?

ಬೇಸಾಯ ಅಂದರೆ ನೀ ಸಾಯ, ನಾ ಸಾಯ, ಮನೆ ಮಂದಿಎಲ್ಲ ಸಾಯಾ ಅನ್ನೋದು ಹಳೇ ಮೈಸೂರು ಕಡೆಯ ಹಳೇ ಜೋಕು. ಈ ಗುತ್ತಿಗೆ ಬೇಸಾಯದ ಸ್ಪೆಲಿಂಗ್ ಬದಲಾಗಿ ಗುದ್ದಿಗೆ ಬಿದ್ದು ಸಾಯ ಅಂತ ಆಗಬಾರದು ಅಷ್ಟ.

ಕೃಷಿಗೆ ಅಗ್ರಿಕಲ್ಚರ್ ಅಂತ ಅನ್ನೋದು ಯಾಕಂದರ ಅದು ಬರೇ ವ್ಯಾಪಾರ – ವ್ಯವಹಾರ ಅಲ್ಲ. ಅದು ನಮ್ಮ ಜೀವನ ಶೈಲಿ ಅಂತ ತಿಳಕೊಂಡು ಭಾಳ ಮಂದಿ ರೈತರು ಮಾಡತಾರು. ಬರೇ ಲಾಭ- ನಷ್ಟದ ಲೆಕ್ಕಾಚಾರ ಇದ್ದಿದರ ಅವರು ಜಮೀನು ಬಿಟಗೊಟ್ಟು ಹೋಗಿ ನಾವೆಲ್ಲಾ ಅಕ್ಕಿ ಬದಲಿ ಮ್ಯಾಗಿ ತಿನಬೇಕಾಗಿತ್ತು.

ಅದನ್ನ ಬಿಟ್ಟು ಇದು ಆಹಾರ ತಯಾರಿಕೆ ಉದ್ದಿಮೆ ಅಂತ ಹೇಳಿ ಷೇರು ಮಾರ್ಕೆಟ್ಟಿನ ದಲ್ಲಾಳಿಗಳೆಲ್ಲಾ ಇದರಾಗ ರೊಕ್ಕಾ ಹಾಕಿ ಇದನ್ನ ತೇಜಿ- ಮಂದಿ ವ್ಯಾಪಾರ ಮಾಡಿದರ ಕಷ್ಟ.

ಈ ಎಲ್ಲಾ ತಿದ್ದುಪಡಿಗಳನ್ನ ಎಲ್ಲಾ ರಾಜ್ಯಗಳು ಇದನ್ನು ಪಾಲಿಸಬೇಕು ಅಂತ ಬ್ಯಾರೆ ದೆಹಲಿ ದೊರೆಗಳು ಫರಮಾನು ಹೊರಡಿಸಿದಾರ.

ಒಕ್ಕೂಟ ವ್ಯವಸ್ಥೆಗೆ ಕ್ಯಾರೆ ಅನ್ನದ ಈ ಸರಕಾರ ರಾಜ್ಯಗಳು ಅಂದರ ತಮ್ಮ ಗೊಂಬೆ ಆಟದ ಪಾತ್ರಧಾರಿಗಳು ಅಂತ ತಿಳಕೊಂಡೇತಿ. ಹಿಂಗಾಗಿ ಬ್ಯಾರೆ ದಾರಿ ಇಲ್ಲ.

ಅದೂ ಆಳುವ ಪಕ್ಷದ- ವಿರೋಧ ಪಕ್ಷದ ಸರಕಾರಗಳ ನಡುವೆ ವಿರೋಧ ತಂದು ಇಡಬಹುದು.

ವಿದ್ಯುತ್ ದರ ನಿರ್ಧಾರದ ಬಗ್ಗೆ ಅಧ್ಯಯನ ನಡೆಸಿದ ಅನುಭಾವಿ ಆರ್ಥಿಕ ತಜ್ಞ ಡಾ. ನಂಜುಂಡಪ್ಪ ಅವರು ಒಂದು ಉದಾಹರಣೆ ಕೊಡತಿದ್ದರು.

ಬಿಹಾರದ ಕೆಲವು ಪ್ರದೇಶಗಳಲ್ಲಿ ಎಷ್ಟೋ ವರ್ಷಗಳ ತನಕಾ ವಿದ್ಯುತ ಸಾಗಣೆಯೊಳಗ ಹಾನಿ ಆಗಿರಲಿಲ್ಲ. ಅದನ್ನ ನೋಡಲಿಕ್ಕೆ ಹೋದ ವಿಶ್ವ ಬ್ಯಾಂಕಿನ ತಂಡಕ್ಕ ಇಂಜಿನಿಯರ ಒಬ್ಬರು ಹೇಳಿದರಂತ “ನೋಡ್ರಿ ಸರ್, ಈ ಯೋಜನೆ ಆರಂಭ ಆದಾಗಿನಿಂದ ಇದರಾಗ ವಿದ್ಯುತ್ ಹರದೇ ಇಲ್ಲ. ಇನ್ನ ಹಾನಿ ಆಗಲಿಕ್ಕೆ ಹೆಂಗ ಸಾಧ್ಯ ಐತಿ?”

ಹಂಗನ ಇನ್ನೂವರೆಗೆ ದೇಶದ ಕೆಲವು ಹಿಂದುಳಿದ ರಾಜ್ಯಗಳು- ಬಿಹಾರ- ಒಡಿಷಾ- ಛತ್ತೀಸಗಡ- ಜಾರಖಂಡ ಇತ್ಯಾದಿಗಳೊಳಗ ಎಪಿಎಂಸಿ ವ್ಯವಸ್ಥೆನೇ ಇಲ್ಲ. ಇದ್ದರೂ ಪರಿಣಾಮಕಾರಿಯಾಗಿಲ್ಲ. ಇನ್ನ ಅಲ್ಲಿನ ರೈತರಿಗೆ ಈ ತಿದ್ದುಪಡಿಯಿಂದ ಏನು ಕೇಡು ಆಗಲಿಕ್ಕೆ ಸಾಧ್ಯ ಐತಿ?

ಈ ರೀತಿಯ ನೀತಿಗಳಿಗೆ ಯುರೋಪಿನ್ಯಾಗ `ಲೆಸೇ ಫೇರು’ (`ತಿಳದದ್ದು ಮಾಡಿಕೋಳಿ ಬಿಡ್ರಿ’) ಅಂತ ಅಂತಾರ. ಇದನ್ನೆಲ್ಲಾ ಮಾಡಿದ ಸರಕಾರಕ್ಕ- ಪಕ್ಷಕ್ಕ ನಮ್ಮ ಜನಾ ಮುಂದಿನ ಚುನಾವಣೆಯೊಳಗ ತಿಳದದ್ದು ಮಾಡಿದರ, ಏನು ಗತಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...