Homeಅಂಕಣಗಳುನಮ್ಮ ಬೆನ್ನ ಹಿಂದೆ ನಡೆದ ಬೇಸಾಯೋ ಆಟ

ನಮ್ಮ ಬೆನ್ನ ಹಿಂದೆ ನಡೆದ ಬೇಸಾಯೋ ಆಟ

- Advertisement -
- Advertisement -

ಮೊನ್ನೆ ನಾವೆಲ್ಲ ಲಾಕಡೌನಿನ ಛಳಿಯಿಂದ ತಪ್ಪಿಸಿಕೊಳ್ಳಲಿಕ್ಕೆ ಮನಿಯೊಳಗ ಬೆಚ್ಚನೆ ಮಲಗಿದ್ದಾಗ ಹಣಕಾಸು ಸಚಿವೆ ನಿರ್ಮಲಾತಾಯಿ ಅವರು ಮೂರು ಪ್ರಮುಖ ನೀತಿ ಬದಲಾವಣೆಗಳನ್ನ ಘೋಷಣೆ ಮಾಡಿದಾರ.

ಅವು ಯಾವುಪಾ ಅಂದರ ಗುತ್ತಿಗೆ ಬೇಸಾಯ, ಎಪಿಎಂಸಿ ಕಾಯಿದೆ ಬದಲಾವಣೆ ಮತ್ತು ಅವಶ್ಯಕ ವಸ್ತು ಕಾಯಿದೆಗೆ ಅನವಶ್ಯಕ ಬದಲಾವಣೆ. ಇವು ರೈತರ ಬದಕು ಬದಲಾಯಿಸಲಿಕ್ಕೆ ಅವಶ್ಯಕ ಅಂತ ಅವರು ಹೇಳಿದರು.

ಆದರ ಇಷ್ಟ ಗಡಿಬಡಿಯೊಳಗ ರೈತರನ್ನು ಬದಲಾಯಿಸಬೇಕಾಗಿತ್ತೇನು? ಅವರಿಗೆ ಈಗ ಸಧ್ಯಕ್ಕ ಒಂದಿಷ್ಟು ಪರಿಹಾರ ಕೊಟ್ಟರ ಸಾಕಿತ್ತು ಅನ್ನೋ ಪ್ರಶ್ನೆಗೆ. ಹಂಗಲ್ಲಾ, ಈಗಿನ ಕೆಟ್ಟ ಪರಿಸ್ಥಿತಿ ಮುಗಿದ ನಂತರ ಯಾರು ಉಳೀತಾರಲ್ಲಾ, ಅವರನ್ನು ಬದಲಾಯಿಸಿತೇವಿ ಅಂತ ಸರಕಾರದವರ ಉತ್ತರ.

ಎಲ್ಲರಿಗೂ ಕಣ್ಣಿಗೆ ಕಾಣೋ ಕಣ್ಕಟ್ಟು ಅಂದರ ಅವಶ್ಯಕ ವಸ್ತು ಕಾಯಿದೆ ತಿದ್ದುಪಡಿ. ಇದು ಏನಪಾ ಅಂದರ ಕೆಲವು ವಸ್ತುಗಳು ಈ ದೇಶದ ಜನರಿಗೆ ಅವಶ್ಯವಾಗಿ ಬೇಕಾಗಿದ್ದಾವು, ಅವನ್ನು ಯಾರೂ ಕಳ್ಳಸಂತೆಯೊಳಗ ಮಾರಾಟ ಮಾಡಬಾರದು, ವಿನಾಕಾರಣ ಕೊರತೆ ಸೃಷ್ಟಿಸಬಾರದು, ಅಕಾರಣ ಹೆಚ್ಚು ಬೆಲೆಗೆ ಮಾರಾಟ ಮಾಡಬಾರದು, ಮಾಡಿದರ ಅವರನ್ನ ಜೈಲಿಗೆ ಹಾಕತೇವಿ ಅಂತ ಒಂದು ಕಾನೂನು. ಸಂಗ್ರಹ ಮಾಡಿ ಇಟ್ಟದ್ದರಿಂದ ಕೊರತೆ ಉಂಟಾದರ ಜಿಲ್ಲಾಧಿಕಾರಿ ಹೋಗಿ ಆ ಆಹಾರ ಪದಾರ್ಥ ಜಪ್ತು ಮಾಡೋ ಅವಕಾಶ ಇದರಾಗ ಐತಿ.

ಈ ಕಾಯಿದೆ ಚೌಕಟ್ಟಿನಾಗ – ಆಹಾರ, ನೀರು, ನಾಣ್ಯ ಹಾಗೂ ನೋಟು, ಪೆಟ್ರೋಲು, ಪೋಸ್ಟು, ದೇಶದ ರಕ್ಷಣೆ, ರಸ್ತೆ- ಚರಂಡಿ ಸ್ವಚ್ಛತೆ, ಚುನಾವಣೆ , ಗೊಬ್ಬರ, ವಿದ್ಯುತ್ತು, ಕಲ್ಲಿದ್ದಲು, ಮಣ್ಣು -ಮಸಿ, ಎಲ್ಲಾ ಬರತಾವು.

ಇದರಾಗಿಂದ ಆಹಾರ ಧಾನ್ಯ, ಅಡುಗೆ ಎಣ್ಣೆ, ತರಕಾರಿ ಇತ್ಯಾದಿಗಳನ್ನು ಹೊರಗಡೆ ತೆಗೆಯೋ ತಯಾರಿ ನಡತೇತಿ. ಯಾಕಂದರ ಅವು ಅವಶ್ಯ ಅಲ್ಲನೋಡ್ರಿ. ಮನುಷ್ಯ ಆಹಾರ ಇಲ್ಲದೇ ಇರಬಹುದು, ಆದರ ಪೆಟ್ರೋಲು, ಗೊಬ್ಬರ ಇಲ್ಲದೇ ಇರಲಿಕ್ಕೆ ಆಗೋದಿಲ್ಲಲಾ. ಅದಕ್ಕ. ಇನ್ನ ಹಿಂಗೆಲ್ಲಾ ಬ್ರಿಟಿಷರ ಕಾಲದ ಕಾನೂನುಗಳಿಂದ ನಮ್ಮ ದೇಶದಾಗ ಆಹಾರ ಸಂಗ್ರಹಣೆ ಕಮ್ಮಿ ಆಗೇತಿ, ಕೃಷಿ ಉತ್ಪನ್ನ ರಫ್ತು ಆಗಲೊಲ್ಲದು, ಆಹಾರ ಸಂಸ್ಕರಣೆ ಉದ್ದಿಮೆ ಹಿಂದ ಉಳದೇತಿ ಅಂತ ಕೆಲವು ವ್ಯಾಪಾರಿಗಳು ತಮ್ಮ ಹಿತೈಷಿಗಳಾದ ಆಳುವ ಪಕ್ಷದ ನಾಯಕರ ಜೊತೆಗೆ ತಕರಾರು ತಗದರು. ಬಡವರು- ಹಿಂದುಳಿದವರು- ಅಧಿಕಾರ ಹೀನರು ಮಾತು ತಗದು ಹಾಕಬಹುದು, ಆದರ ಚುನಾವಣೆ ಖರ್ಚು ಕೊಡೋ ಧಣಿ- ಸೇಠುಗಳ ಮಾತು ಪಾಲಿಸಲಾರದಂಗ ಇರಲಿಕ್ಕೆ ಆಗತದೇನು? ಅದಕ್ಕ ಬಂತು ಒಂದು ಘೋಷಣೆ. ಇನ್ನ ಮ್ಯಾಲೆ ಆಹಾರ ಸಂಸ್ಕರಣೆ- ಸಂಗ್ರಹಣೆ- ರಫ್ತು ಮುಂತಾದ ದಂಧೆ ಮಾಡೋರು ಎಲ್ಲಾ ಎಷ್ಟು ಬೇಕು ಅಷ್ಟು ಆಹಾರ- ಎಣ್ಣೆ- ತರಕಾರಿ ಸಂಗ್ರಹ ಮಾಡಬಹುದು. ಯಾವಾನೂ ಅವರಿಗೆ ಬೈಯಂಗಿಲ್ಲ. ಬರಗಾಲ- ಕ್ಷಾಮದಾಗ ಅವರನ್ನ ಜೈಲಿಗೆ ಹಾಕೋದಿರಲಿ, ಅವರಿಗೆ ನೋಟೀಸು ಕೊಡಂಗಿಲ್ಲ.

ಅವರ ಹತ್ತರ ಹೋಗಿ ಮನವಿ ಮಾಡಬಹುದು ಅಷ್ಟ. ಇದಕ್ಕ ಸಂಬಂಧ ಪಟ್ಟದ್ದು ಅಂದರ ಎಪಿಎಂಸಿ ಕಾಯಿದೆ ತಿದ್ದುಪಡಿ. ಇದರ ಪ್ರಕಾರ ರೈತರು ತಮ್ಮ ಉತ್ಪನ್ನಗಳನ್ನ ಎಪಿಎಂಸಿ ಯಾರ್ಡಿನಾಗ, ಟೆಂಡರ ಪ್ರಕ್ರಿಯೆ ಮೂಲಕ ಮಾಡಬೇಕು. ಯಾವುದರ ಕಂಪನಿಗೆ, ಸರಕಾರಕ್ಕ ಅಥವಾ ಕುಟುಂಬಗಳಿಗೆ ನೇರವಾಗಿ ಮಾರಂಗಿಲ್ಲ. ಕಳೆದ ಆರು ದಶಕಗಳಿಂದ ಇದು ನಡಕೊಂಡು ಬಂದದ. ಇದರಿಂದ ರೈತರಿಗೆ ಮಾರಲಿಕ್ಕೆ ಒಂದು ಜಾಗ ಸಿಕ್ಕದ, ಒಬ್ಬರ ಕಡೆ ಮಾರಿಕೊಂಡು ಕೈ ಕಟ್ಟಿಸಿಕೊಳ್ಳೋ ಅನಿವಾರ್ಯದಿಂದ ತಪ್ಪಿಸೇತಿ.

ಆದರ ಇದನ್ನ ಬದಲಿಸಿ, ಇನ್ನ ಮ್ಯಾಲೆ ದೊಡ್ಡ ದೊಡ್ಡ ಕಂಪನಿಗಳು ರೈತರ ಹೊಲದ ಬಾಗಿಲಿಗೆ ಹೋಗಿ ಖರೀದಿಸುವ ನೀತಿ( ಫಾರ್ಮ ಗೇಟು ಪಾಲಿಸಿ) ತರಾಕ ಹತ್ಯಾರು. ಎಪಿಎಂಸಿಯೊಳಗ ಅನೇಕ ತೊಂದರೆ- ಲಫಡಾ ಇರಬಹುದು. ಆದರ ಅದರ ಸದಸ್ಯರು ರೈತರಿಂದ ಚುನಾಯಿತರಾದವರು. ಅವರನ್ನ ಐದು ವರ್ಷದ ನಂತರ ಬದಲಿಸಬಹುದು. ಬಹುರಾಷ್ಟ್ರೀಯ ಕಂಪನಿಯ ಮಾಲಕರನ್ನ ಬದಲಾಯಿಸಲಿಕ್ಕೆ ನಮ್ಮ ಘಾಳೆಪ್ಪಾ ಧೂಳಪ್ಪಾ ಬಟಾಬಯಲಪ್ಪನವರ್ ಅನ್ನೋ ಹೆಸರಿನ ರೈತರು ಏನು ಷೇರು ಮಾರ್ಕೆಟದಾಗ ಆ ಕಂಪನಿಯ ಷೇರು ಖರೀದಿ ಮಾಡಿದಾರೇನು? ಹಳ್ಳಿಯೊಳಗ ಕುಂತ ರೈತನಿಗೆ ಬಂಬಾಯಿ- ದಿಲ್ಲಿ ಕಂಪನಿಗಳ ವಿರುದ್ಧ ಹೋರಾಡೋ ಶಕ್ತಿ ಎಲ್ಲೆ ಬರತೇತಿ. ಈಗಾಗಲೇ ಕೃಷಿ ವಿಮೆ ಕಂಪನಿಗಳ ವಿರುದ್ಧ ಹೋರಾಟ ಮಾಡಲಿಕ್ಕೆ ಆಗಲಾರದೇ ರೈತರು ಸುಮ್ಮನೆ ಆಗಿದಾರು. ಇನ್ನ ಖರೀದಿದಾರರ ವಿರುದ್ಧ ಏನು ಮಾಡತಾರು.

ಅಲ್ಲದೇ ಆಹಾರ ಕೊರತೆ ಆದಾಗ ಸರಕಾರ ರೈತರಿಂದ ಖರೀದಿಸಿ ಜನರಿಗೆ ಕೊಡಬಹುದು, ಎಪಿಎಂಸಿ ಮ್ಯಾಲೆ ಅವಲಂಬನ ಆಗಬಹುದು. ಅದೆಲ್ಲಾ ಬಿಟ್ಟು ಯಾವಾನೋ ಡೊನಾಲ್ಡ ಟ್ರಂಪನ ಅಳಿಯಾನ ಕಂಪನಿ ಮ್ಯಾಲೆ ಒಬ್ಬ ಜಿಲ್ಲಾಧಿಕಾರಿ ಏನು ಒತ್ತಡ ಹಾಕಲಿಕ್ಕೆ ಬರತೇತಿ?

ಇಷ್ಟರಾಗ ಅತಿ ಎಡವಟ್ಟು ಆಗಿದ್ದು, ಆದರ ಜನರಿಗೆ ಯಾರಿಗೂ ಗೊತ್ತಾಗದೇ ಇರೋದು ಅಂದರ ಗುತ್ತಿಗೆ ಬೇಸಾಯ ಪದ್ಧತಿ. ಇದೇನಪಾ ಅಂದರ ದಶಕಗಳವರೆಗೆ ಬಡಜನರು ಹೋರಾಟ ಮಾಡಿ ಗಿಟ್ಟಿಸಿಕೊಂಡ ಭೂಮಿಯ ಹಕ್ಕಿಗೆ ಬೆನ್ನಿಗೆ ಹಾಕಿದ ಚೂರಿ.

ಮ್ಯಾಲಿನಿಂದ ನೋಡಿದರ ಇದು ಬೆಳೆಯುವವರು ಹಾಗೂ ಖರೀದಿಸುವವರ ನಡುವೆ ಬೀಜಾ ಹಾಕೋ ಟೈಮ್‍ದಾಗ ಒಪ್ಪಂದ ಮಾಡಿಕೊಡಲಿಕ್ಕೆ ಅನುವು ಮಾಡಿಕೊಡೋ ಕಾಯಿದೆ. ಆದರ ಅದರಾಗ ರೈತನ ಬೆಳಿಗೆ ಬೆಲೆ ನಿರ್ಧಾರ ಮಾಡೋದು ಅಂದಿನ ಮಾರುಕಟ್ಟೆ ಅಲ್ಲಾ, ಅವನು ಒಂದು ವರ್ಷದ ಹಿಂದೆ ಯಾವುದೋ ಕಂಪನಿ ಜೊತೆ ಮಾಡಿಕೊಂಡ ಒಪ್ಪಂದ ಅಂತ ಆಗತೇತಿ. ಅದು ರೈತನ ಹಿತದ ವಿರುದ್ಧ ಆದರ ಹೆಂಗ?

ಇನ್ನೊಂದು ಮಾತಂದರ ಕೃಷಿ ಭೂಮಿಯನ್ನ ಲೀಸು ಕೊಡಲಿಕ್ಕೆ ಇಲ್ಲಿವರೆಗೂ ಅವಕಾಶ ಇಲ್ಲ. ಹಳ್ಳಿಯೊಳಗ ಉತ್ಪನ್ನ ಹಂಚಿಕೆ ಆಧಾರದ ಮೇಲೆ ಮಾಲಿಕರು – ರೈತರ ನಡುವೆ ಬಾಯಿ ಮಾತಿನ ಒಪ್ಪಂದ ನಡದಾವು. ಅದು ಬ್ಯಾರೆ. ಆದರ ಗುತ್ತಿಗೆ ಬೇಸಾಯ ಕಾನೂನು ಅಂದರ ಬಡ ರೈತರ ಭೂಮಿಯನ್ನ ನೂರು ವರ್ಷ ಯಾವುದೋ ದೊಡ್ಡ ಕಂಪನಿಗೆ ಲೀಸು ಕೊಡಿಸೋ ಕಾಯಿದೆ. ಅಂದರ ಸುಮಾರು ನಾಲ್ಕು ತಲೆಮಾರು ಆ ಜಮೀನಿನ ಕಡೆ ಆ ರೈತರ ಕುಟುಂಬದವರು ನೋಡಂಗಿಲ್ಲ. ನೂರು ವರ್ಷ ರಂಟಿ – ಕುಂಟಿ ಹೊಡಿಯೋ ಅಭ್ಯಾಸ ಬಿಟ್ಟು ಹೋತು ಅಂದರ ಆಮ್ಯಾಲೆ ಏನು ಮಾಡತಾರ? ಆವಾಗ ರೈತರ ಮರಿ ಮಕ್ಕಳಿಗೆ ಬೀಜಾ ಹಾಕೋದು, ನೀರಾವರಿ ಮಾಡೋದು ಯಾರು ಹೇಳಿ ಕೊಡಬೇಕು?

ಬೇಸಾಯ ಅಂದರೆ ನೀ ಸಾಯ, ನಾ ಸಾಯ, ಮನೆ ಮಂದಿಎಲ್ಲ ಸಾಯಾ ಅನ್ನೋದು ಹಳೇ ಮೈಸೂರು ಕಡೆಯ ಹಳೇ ಜೋಕು. ಈ ಗುತ್ತಿಗೆ ಬೇಸಾಯದ ಸ್ಪೆಲಿಂಗ್ ಬದಲಾಗಿ ಗುದ್ದಿಗೆ ಬಿದ್ದು ಸಾಯ ಅಂತ ಆಗಬಾರದು ಅಷ್ಟ.

ಕೃಷಿಗೆ ಅಗ್ರಿಕಲ್ಚರ್ ಅಂತ ಅನ್ನೋದು ಯಾಕಂದರ ಅದು ಬರೇ ವ್ಯಾಪಾರ – ವ್ಯವಹಾರ ಅಲ್ಲ. ಅದು ನಮ್ಮ ಜೀವನ ಶೈಲಿ ಅಂತ ತಿಳಕೊಂಡು ಭಾಳ ಮಂದಿ ರೈತರು ಮಾಡತಾರು. ಬರೇ ಲಾಭ- ನಷ್ಟದ ಲೆಕ್ಕಾಚಾರ ಇದ್ದಿದರ ಅವರು ಜಮೀನು ಬಿಟಗೊಟ್ಟು ಹೋಗಿ ನಾವೆಲ್ಲಾ ಅಕ್ಕಿ ಬದಲಿ ಮ್ಯಾಗಿ ತಿನಬೇಕಾಗಿತ್ತು.

ಅದನ್ನ ಬಿಟ್ಟು ಇದು ಆಹಾರ ತಯಾರಿಕೆ ಉದ್ದಿಮೆ ಅಂತ ಹೇಳಿ ಷೇರು ಮಾರ್ಕೆಟ್ಟಿನ ದಲ್ಲಾಳಿಗಳೆಲ್ಲಾ ಇದರಾಗ ರೊಕ್ಕಾ ಹಾಕಿ ಇದನ್ನ ತೇಜಿ- ಮಂದಿ ವ್ಯಾಪಾರ ಮಾಡಿದರ ಕಷ್ಟ.

ಈ ಎಲ್ಲಾ ತಿದ್ದುಪಡಿಗಳನ್ನ ಎಲ್ಲಾ ರಾಜ್ಯಗಳು ಇದನ್ನು ಪಾಲಿಸಬೇಕು ಅಂತ ಬ್ಯಾರೆ ದೆಹಲಿ ದೊರೆಗಳು ಫರಮಾನು ಹೊರಡಿಸಿದಾರ.

ಒಕ್ಕೂಟ ವ್ಯವಸ್ಥೆಗೆ ಕ್ಯಾರೆ ಅನ್ನದ ಈ ಸರಕಾರ ರಾಜ್ಯಗಳು ಅಂದರ ತಮ್ಮ ಗೊಂಬೆ ಆಟದ ಪಾತ್ರಧಾರಿಗಳು ಅಂತ ತಿಳಕೊಂಡೇತಿ. ಹಿಂಗಾಗಿ ಬ್ಯಾರೆ ದಾರಿ ಇಲ್ಲ.

ಅದೂ ಆಳುವ ಪಕ್ಷದ- ವಿರೋಧ ಪಕ್ಷದ ಸರಕಾರಗಳ ನಡುವೆ ವಿರೋಧ ತಂದು ಇಡಬಹುದು.

ವಿದ್ಯುತ್ ದರ ನಿರ್ಧಾರದ ಬಗ್ಗೆ ಅಧ್ಯಯನ ನಡೆಸಿದ ಅನುಭಾವಿ ಆರ್ಥಿಕ ತಜ್ಞ ಡಾ. ನಂಜುಂಡಪ್ಪ ಅವರು ಒಂದು ಉದಾಹರಣೆ ಕೊಡತಿದ್ದರು.

ಬಿಹಾರದ ಕೆಲವು ಪ್ರದೇಶಗಳಲ್ಲಿ ಎಷ್ಟೋ ವರ್ಷಗಳ ತನಕಾ ವಿದ್ಯುತ ಸಾಗಣೆಯೊಳಗ ಹಾನಿ ಆಗಿರಲಿಲ್ಲ. ಅದನ್ನ ನೋಡಲಿಕ್ಕೆ ಹೋದ ವಿಶ್ವ ಬ್ಯಾಂಕಿನ ತಂಡಕ್ಕ ಇಂಜಿನಿಯರ ಒಬ್ಬರು ಹೇಳಿದರಂತ “ನೋಡ್ರಿ ಸರ್, ಈ ಯೋಜನೆ ಆರಂಭ ಆದಾಗಿನಿಂದ ಇದರಾಗ ವಿದ್ಯುತ್ ಹರದೇ ಇಲ್ಲ. ಇನ್ನ ಹಾನಿ ಆಗಲಿಕ್ಕೆ ಹೆಂಗ ಸಾಧ್ಯ ಐತಿ?”

ಹಂಗನ ಇನ್ನೂವರೆಗೆ ದೇಶದ ಕೆಲವು ಹಿಂದುಳಿದ ರಾಜ್ಯಗಳು- ಬಿಹಾರ- ಒಡಿಷಾ- ಛತ್ತೀಸಗಡ- ಜಾರಖಂಡ ಇತ್ಯಾದಿಗಳೊಳಗ ಎಪಿಎಂಸಿ ವ್ಯವಸ್ಥೆನೇ ಇಲ್ಲ. ಇದ್ದರೂ ಪರಿಣಾಮಕಾರಿಯಾಗಿಲ್ಲ. ಇನ್ನ ಅಲ್ಲಿನ ರೈತರಿಗೆ ಈ ತಿದ್ದುಪಡಿಯಿಂದ ಏನು ಕೇಡು ಆಗಲಿಕ್ಕೆ ಸಾಧ್ಯ ಐತಿ?

ಈ ರೀತಿಯ ನೀತಿಗಳಿಗೆ ಯುರೋಪಿನ್ಯಾಗ `ಲೆಸೇ ಫೇರು’ (`ತಿಳದದ್ದು ಮಾಡಿಕೋಳಿ ಬಿಡ್ರಿ’) ಅಂತ ಅಂತಾರ. ಇದನ್ನೆಲ್ಲಾ ಮಾಡಿದ ಸರಕಾರಕ್ಕ- ಪಕ್ಷಕ್ಕ ನಮ್ಮ ಜನಾ ಮುಂದಿನ ಚುನಾವಣೆಯೊಳಗ ತಿಳದದ್ದು ಮಾಡಿದರ, ಏನು ಗತಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...