Homeಮುಖಪುಟಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

ಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

- Advertisement -
- Advertisement -

ಬಿಬಿಎಂಪಿ ವಿಭಜನೆ ಕಾರ್ಯವು ನೆನೆಗುದಿಗೆ ಬಿದ್ದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಡಳಿತದ ಹಿತ ದೃಷ್ಟಿಯಿಂದ 4-5 ವಿಭಾಗಗಳನ್ನು ಮಾಡಬೇಕೆಂಬ ಬೇಡಿಕೆ ರಾಷ್ಟ್ರಪತಿ ಮುಂದಿದೆ. ರಾಜ್ಯ ಸರ್ಕಾರ  ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗಳಿಗೆ ಕಳಿಸಿಕೊಟ್ಟಿದೆ. ಆದರೂ ಈವರೆಗೆ ಅಂಕಿತ ಬಿದ್ದಿಲ್ಲ.ಇದರ ನಡುವೆಯೇ ಬಿಬಿಎಂಪಿ ಕ್ಷೇತ್ರಗಳ ಪುನರ್ ವಿಂಗಡಣೆ ಕರಡನ್ನು ಪ್ರಕಟಿಸಿದ್ದು ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕ್ಷೇತ್ರಗಳನ್ನು ಮರುವಿಂಗಡಣೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿಲ್ಲ. ಸ್ಥಳೀಯ ನಿವಾಸಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಕೇಳಿಲ್ಲ. ವಾರ್ಡ್ ಸಮಿತಿಗಳು ಇದ್ದರೂ ಅವುಗಳಿಂದ ಮಾಹಿತಿ ಪಡೆದಿಲ್ಲ. ರಾಜಕೀಯ ಪಕ್ಷಗಳಿಂದಲೂ ಅಭಿಪ್ರಾಯ ಕೇಳಿಲ್ಲ. ಪಾರದರ್ಶಕತೆ ಕಾಪಾಡಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವನ್ನು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಿದ್ದು ಅವಾಂತರ ಸೃಷ್ಟಿಗೆ ಕಾರಣವಾಗಿದೆ. ಆ ಖಾಸಗಿ ಸಂಸ್ಥೆ ಕೇವಲ ಜನಸಂಖ್ಯೆಯನ್ನಾಧರಿಸಿ ಕ್ಷೇತ್ರ ಪುನರ್ ವಿಂಗಡನೆ ಮಾಡಿದೆಯೇ ಹೊರತು ಸೂಕ್ತವಾಗಿ, ಸಮರ್ಪಕವಾಗಿ ಮತ್ತು ವೈಜ್ಞಾನಿಕವಾಗಿ ರೂಪಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ.

ಕ್ಷೇತ್ರ ಪುನರ್ ವಿಂಗಡಣೆಗೆ ಬೇಕಾದ ಮಾರ್ಗಸೂಚಿಯನ್ನು ಅನುಸರಿಸಿಲ್ಲ. ವಾರ್ಡ್ ಗಡಿ ನಿರ್ಧರಿಸುವಾಗ ರಾಜಕಾಲುವೆ, ಮಳೆನೀರು ಕಾಲುವೆ ಮತ್ತು ಮುಖ್ಯರಸ್ತೆಗಳನ್ನು ಪರಿಗಣಿಸಿಲ್ಲ. ಈಗಿರುವ ಕ್ಷೇತ್ರ ಪುನರ್ ವಿಂಗಡಣೆ ಕರಡಿನಲ್ಲೂ ಒಂದು ಬಿಬಿಎಂಪಿ ವಾರ್ಡ್ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೇರ್ಪಡೆಯಾಗಿದೆ. 45 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಎಂಬುದು ಸದುದ್ದೇಶದಿಂದ ಕೂಡಿದ್ದರೂ ಈಗಿರುವ ಕಾಯ್ದೆಯಲ್ಲಿ ಸರಿಪಡಿಸಲು ಅಸಾಧ್ಯ. ಕ್ಷೇತ್ರಗಳು ಅವೈಜ್ಞಾನಿಕತೆಯಿಂದ ಕೂಡಿವೆ. ಇದನ್ನು ಕೂಡಲೇ ಸರಿಪಡಿಸಬೇಕು  ಅದುವರೆಗೂ ವಾರ್ಡ್ ಪುನರ್ ರಚನೆ ತಡೆಹಿಡಿಯಬೇಕು ಎಂದು  ಸಿಪಿಎಂ ಮುಖಂಡ ಕೆ.ಎನ್.ಉಮೇಶ್ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಬಿ.ಎಸ್.ಪಾಟೀಲ್ ನೇತೃತ್ವದ ಸಮಿತಿ ಅಧ್ಯಯನ ಮಾಡಿ ನೀಡಿರುವ ವರದಿಯನ್ನೂ ಪರಿಗಣಿಸಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಟ್ಟದಷ್ಟು ಸಮಸ್ಯೆಗಳು ಇವೆ. ಅವುಗಳ ಪರಿಹಾರಕ್ಕಾಗಿ ಕ್ಷೇತ್ರಗಳನ್ನು ವೈಜ್ಞಾನಿಕವಾಗಿ ಪುನರ್ ವಿಂಗಡಿಸುವ ಕೆಲಸ ಮಾಡಬಹುದಿತ್ತು. ಕೆಎಂಸಿಎಆರ್ ಮಸೂದೆಗೆ ಇದುವರೆಗೂ ಅಂಕಿತ ದೊರಕಿಲ್ಲ. ಬಿಬಿಎಂಪಿ ವಿಭಜನೆಗೆ ಜೆಡಿಎಸ್ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೇ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗೆ ಕಳಿಸಿ ವರ್ಷಗಳೇ ಕಳೆದರೂ ಅಂಕಿತ ಬಿದ್ದಿಲ್ಲ. ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಕಾಯ್ದೆಯಾಗಿದ್ದರೆ 10 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ನಂತೆ ಪುನರ್ ವಿಂಗಡೆ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆಯ ಪ್ರಸ್ತಾಪದಲ್ಲಿ ಅನೇಕ ಗಂಭೀರ ಲೋಪದೋಷಗಳು ಕಂಡುಬಂದಿವೆ. ಪಾಲಿಕೆಯು ಸದುದ್ದೇಶದಿಂದ ಮಾಡಲಾಗಿರುವ ಕ್ರಮ ಗುಣಾತ್ಮಕ ಫಲಿತಾಂಶಗಳನ್ನು ನೀಡುವ ಬದಲು ಅಭಿವೃದ್ಧಿಗೆ ತೊಡಕಾಗಬಹುದಾದ ಸಾಧ್ಯತೆಯೇ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಎಂಸಿಎಆರ್ ಗೆ ಅಂಕಿತ ಪಡೆದು ಅದರ ಆಧಾರದಲ್ಲಿ  ಬಿಬಿಎಂಪಿಯನ್ನು ಪುನರ್ ರಚಿಸಿ ಚಿಕ್ಕವಾರ್ಡ್‌ಗಳ ರಚನೆಗೆ ಅನುವುಗೊಳಿಸಬೇಕೆಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೆಂಗಳೂರು ನಿವಾಸಿ ಡಾ.ಭಾನು ಪ್ರಕಾಶ್, ಸ್ಲಂಗಳನ್ನು ಮೂರ್ನಾಲ್ಕು ಭಾಗ ಮಾಡಿದ್ದಾರೆ. ಮುಸ್ಲಿಮರು, ದಲಿತರು ಮತ್ತು ತಮಿಳರು ಹೆಚ್ಚು ಇರುವ ಪ್ರದೇಶಗಳಲ್ಲಿ ಅವರನ್ನು ಮೂರು ವಾರ್ಡ್‌ಗೆ ಹಂಚಿಕೆ ಮಾಡಿದ್ದಾರೆ. ಇದರಿಂದ ಈ ಸಮುದಾಯ ತನಗೆ ಬೇಕಾದ ಕಾರ್ಪೋರೇಟರ್ ಅನ್ನು ಆಯ್ಕೆ ಮಾಡಿಕೊಳ್ಳಲಾಗದಂತೆ ಕ್ರಮ ವಹಿಸಲಾಗಿದೆ. ಒಂದು ಗಲ್ಲಿ ಒಂದು ವಾರ್ಡ್ ಸೇರಿದರೆ ಎದುರು ಮನೆ ಮತ್ತೊಂದು ವಾರ್ಡ್‌ಗೆ ಸೇರಿದೆ. ಕುಡಿಯುವ ನೀರಿನ ಪೈಪ್ ಲೈನ್ ಒಂದೇ ಆಗಿರುತ್ತದೆ. ನೀರು ಬರದಿದ್ದರೆ ಯಾರಿಗೆ ಪೋನ್ ಮಾಡಬೇಕು ಎಂಬ ಸಮಸ್ಯೆ ಕಾಡುತ್ತದೆ. ದಲಿತರು, ಮುಸ್ಲಿಮರು, ತಮಿಳರು ಹೆಚ್ಚಾಗಿರುವ ನಾಲ್ಕು ಓಣಿಗಳನ್ನು ಕಟ್ ಮಾಡಿ ಬೇರೆ ವಾರ್ಡ್‌ಗೆ ಸೇರಿಸಿದ್ದಾರೆ. ಇದರ ಹಿಂದೆ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುವಂತೆ ತಂತ್ರ ಹೆಣೆಯಲಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...