Homeಮುಖಪುಟಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

ಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

- Advertisement -
- Advertisement -

ಬಿಬಿಎಂಪಿ ವಿಭಜನೆ ಕಾರ್ಯವು ನೆನೆಗುದಿಗೆ ಬಿದ್ದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಡಳಿತದ ಹಿತ ದೃಷ್ಟಿಯಿಂದ 4-5 ವಿಭಾಗಗಳನ್ನು ಮಾಡಬೇಕೆಂಬ ಬೇಡಿಕೆ ರಾಷ್ಟ್ರಪತಿ ಮುಂದಿದೆ. ರಾಜ್ಯ ಸರ್ಕಾರ  ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗಳಿಗೆ ಕಳಿಸಿಕೊಟ್ಟಿದೆ. ಆದರೂ ಈವರೆಗೆ ಅಂಕಿತ ಬಿದ್ದಿಲ್ಲ.ಇದರ ನಡುವೆಯೇ ಬಿಬಿಎಂಪಿ ಕ್ಷೇತ್ರಗಳ ಪುನರ್ ವಿಂಗಡಣೆ ಕರಡನ್ನು ಪ್ರಕಟಿಸಿದ್ದು ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕ್ಷೇತ್ರಗಳನ್ನು ಮರುವಿಂಗಡಣೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿಲ್ಲ. ಸ್ಥಳೀಯ ನಿವಾಸಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಕೇಳಿಲ್ಲ. ವಾರ್ಡ್ ಸಮಿತಿಗಳು ಇದ್ದರೂ ಅವುಗಳಿಂದ ಮಾಹಿತಿ ಪಡೆದಿಲ್ಲ. ರಾಜಕೀಯ ಪಕ್ಷಗಳಿಂದಲೂ ಅಭಿಪ್ರಾಯ ಕೇಳಿಲ್ಲ. ಪಾರದರ್ಶಕತೆ ಕಾಪಾಡಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವನ್ನು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಿದ್ದು ಅವಾಂತರ ಸೃಷ್ಟಿಗೆ ಕಾರಣವಾಗಿದೆ. ಆ ಖಾಸಗಿ ಸಂಸ್ಥೆ ಕೇವಲ ಜನಸಂಖ್ಯೆಯನ್ನಾಧರಿಸಿ ಕ್ಷೇತ್ರ ಪುನರ್ ವಿಂಗಡನೆ ಮಾಡಿದೆಯೇ ಹೊರತು ಸೂಕ್ತವಾಗಿ, ಸಮರ್ಪಕವಾಗಿ ಮತ್ತು ವೈಜ್ಞಾನಿಕವಾಗಿ ರೂಪಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ.

ಕ್ಷೇತ್ರ ಪುನರ್ ವಿಂಗಡಣೆಗೆ ಬೇಕಾದ ಮಾರ್ಗಸೂಚಿಯನ್ನು ಅನುಸರಿಸಿಲ್ಲ. ವಾರ್ಡ್ ಗಡಿ ನಿರ್ಧರಿಸುವಾಗ ರಾಜಕಾಲುವೆ, ಮಳೆನೀರು ಕಾಲುವೆ ಮತ್ತು ಮುಖ್ಯರಸ್ತೆಗಳನ್ನು ಪರಿಗಣಿಸಿಲ್ಲ. ಈಗಿರುವ ಕ್ಷೇತ್ರ ಪುನರ್ ವಿಂಗಡಣೆ ಕರಡಿನಲ್ಲೂ ಒಂದು ಬಿಬಿಎಂಪಿ ವಾರ್ಡ್ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೇರ್ಪಡೆಯಾಗಿದೆ. 45 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಎಂಬುದು ಸದುದ್ದೇಶದಿಂದ ಕೂಡಿದ್ದರೂ ಈಗಿರುವ ಕಾಯ್ದೆಯಲ್ಲಿ ಸರಿಪಡಿಸಲು ಅಸಾಧ್ಯ. ಕ್ಷೇತ್ರಗಳು ಅವೈಜ್ಞಾನಿಕತೆಯಿಂದ ಕೂಡಿವೆ. ಇದನ್ನು ಕೂಡಲೇ ಸರಿಪಡಿಸಬೇಕು  ಅದುವರೆಗೂ ವಾರ್ಡ್ ಪುನರ್ ರಚನೆ ತಡೆಹಿಡಿಯಬೇಕು ಎಂದು  ಸಿಪಿಎಂ ಮುಖಂಡ ಕೆ.ಎನ್.ಉಮೇಶ್ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಬಿ.ಎಸ್.ಪಾಟೀಲ್ ನೇತೃತ್ವದ ಸಮಿತಿ ಅಧ್ಯಯನ ಮಾಡಿ ನೀಡಿರುವ ವರದಿಯನ್ನೂ ಪರಿಗಣಿಸಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಟ್ಟದಷ್ಟು ಸಮಸ್ಯೆಗಳು ಇವೆ. ಅವುಗಳ ಪರಿಹಾರಕ್ಕಾಗಿ ಕ್ಷೇತ್ರಗಳನ್ನು ವೈಜ್ಞಾನಿಕವಾಗಿ ಪುನರ್ ವಿಂಗಡಿಸುವ ಕೆಲಸ ಮಾಡಬಹುದಿತ್ತು. ಕೆಎಂಸಿಎಆರ್ ಮಸೂದೆಗೆ ಇದುವರೆಗೂ ಅಂಕಿತ ದೊರಕಿಲ್ಲ. ಬಿಬಿಎಂಪಿ ವಿಭಜನೆಗೆ ಜೆಡಿಎಸ್ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೇ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗೆ ಕಳಿಸಿ ವರ್ಷಗಳೇ ಕಳೆದರೂ ಅಂಕಿತ ಬಿದ್ದಿಲ್ಲ. ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಕಾಯ್ದೆಯಾಗಿದ್ದರೆ 10 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ನಂತೆ ಪುನರ್ ವಿಂಗಡೆ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆಯ ಪ್ರಸ್ತಾಪದಲ್ಲಿ ಅನೇಕ ಗಂಭೀರ ಲೋಪದೋಷಗಳು ಕಂಡುಬಂದಿವೆ. ಪಾಲಿಕೆಯು ಸದುದ್ದೇಶದಿಂದ ಮಾಡಲಾಗಿರುವ ಕ್ರಮ ಗುಣಾತ್ಮಕ ಫಲಿತಾಂಶಗಳನ್ನು ನೀಡುವ ಬದಲು ಅಭಿವೃದ್ಧಿಗೆ ತೊಡಕಾಗಬಹುದಾದ ಸಾಧ್ಯತೆಯೇ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಎಂಸಿಎಆರ್ ಗೆ ಅಂಕಿತ ಪಡೆದು ಅದರ ಆಧಾರದಲ್ಲಿ  ಬಿಬಿಎಂಪಿಯನ್ನು ಪುನರ್ ರಚಿಸಿ ಚಿಕ್ಕವಾರ್ಡ್‌ಗಳ ರಚನೆಗೆ ಅನುವುಗೊಳಿಸಬೇಕೆಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೆಂಗಳೂರು ನಿವಾಸಿ ಡಾ.ಭಾನು ಪ್ರಕಾಶ್, ಸ್ಲಂಗಳನ್ನು ಮೂರ್ನಾಲ್ಕು ಭಾಗ ಮಾಡಿದ್ದಾರೆ. ಮುಸ್ಲಿಮರು, ದಲಿತರು ಮತ್ತು ತಮಿಳರು ಹೆಚ್ಚು ಇರುವ ಪ್ರದೇಶಗಳಲ್ಲಿ ಅವರನ್ನು ಮೂರು ವಾರ್ಡ್‌ಗೆ ಹಂಚಿಕೆ ಮಾಡಿದ್ದಾರೆ. ಇದರಿಂದ ಈ ಸಮುದಾಯ ತನಗೆ ಬೇಕಾದ ಕಾರ್ಪೋರೇಟರ್ ಅನ್ನು ಆಯ್ಕೆ ಮಾಡಿಕೊಳ್ಳಲಾಗದಂತೆ ಕ್ರಮ ವಹಿಸಲಾಗಿದೆ. ಒಂದು ಗಲ್ಲಿ ಒಂದು ವಾರ್ಡ್ ಸೇರಿದರೆ ಎದುರು ಮನೆ ಮತ್ತೊಂದು ವಾರ್ಡ್‌ಗೆ ಸೇರಿದೆ. ಕುಡಿಯುವ ನೀರಿನ ಪೈಪ್ ಲೈನ್ ಒಂದೇ ಆಗಿರುತ್ತದೆ. ನೀರು ಬರದಿದ್ದರೆ ಯಾರಿಗೆ ಪೋನ್ ಮಾಡಬೇಕು ಎಂಬ ಸಮಸ್ಯೆ ಕಾಡುತ್ತದೆ. ದಲಿತರು, ಮುಸ್ಲಿಮರು, ತಮಿಳರು ಹೆಚ್ಚಾಗಿರುವ ನಾಲ್ಕು ಓಣಿಗಳನ್ನು ಕಟ್ ಮಾಡಿ ಬೇರೆ ವಾರ್ಡ್‌ಗೆ ಸೇರಿಸಿದ್ದಾರೆ. ಇದರ ಹಿಂದೆ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುವಂತೆ ತಂತ್ರ ಹೆಣೆಯಲಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...