Homeಮುಖಪುಟಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

ಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

- Advertisement -
- Advertisement -

ಬಿಬಿಎಂಪಿ ವಿಭಜನೆ ಕಾರ್ಯವು ನೆನೆಗುದಿಗೆ ಬಿದ್ದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಡಳಿತದ ಹಿತ ದೃಷ್ಟಿಯಿಂದ 4-5 ವಿಭಾಗಗಳನ್ನು ಮಾಡಬೇಕೆಂಬ ಬೇಡಿಕೆ ರಾಷ್ಟ್ರಪತಿ ಮುಂದಿದೆ. ರಾಜ್ಯ ಸರ್ಕಾರ  ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗಳಿಗೆ ಕಳಿಸಿಕೊಟ್ಟಿದೆ. ಆದರೂ ಈವರೆಗೆ ಅಂಕಿತ ಬಿದ್ದಿಲ್ಲ.ಇದರ ನಡುವೆಯೇ ಬಿಬಿಎಂಪಿ ಕ್ಷೇತ್ರಗಳ ಪುನರ್ ವಿಂಗಡಣೆ ಕರಡನ್ನು ಪ್ರಕಟಿಸಿದ್ದು ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕ್ಷೇತ್ರಗಳನ್ನು ಮರುವಿಂಗಡಣೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿಲ್ಲ. ಸ್ಥಳೀಯ ನಿವಾಸಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಕೇಳಿಲ್ಲ. ವಾರ್ಡ್ ಸಮಿತಿಗಳು ಇದ್ದರೂ ಅವುಗಳಿಂದ ಮಾಹಿತಿ ಪಡೆದಿಲ್ಲ. ರಾಜಕೀಯ ಪಕ್ಷಗಳಿಂದಲೂ ಅಭಿಪ್ರಾಯ ಕೇಳಿಲ್ಲ. ಪಾರದರ್ಶಕತೆ ಕಾಪಾಡಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವನ್ನು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಿದ್ದು ಅವಾಂತರ ಸೃಷ್ಟಿಗೆ ಕಾರಣವಾಗಿದೆ. ಆ ಖಾಸಗಿ ಸಂಸ್ಥೆ ಕೇವಲ ಜನಸಂಖ್ಯೆಯನ್ನಾಧರಿಸಿ ಕ್ಷೇತ್ರ ಪುನರ್ ವಿಂಗಡನೆ ಮಾಡಿದೆಯೇ ಹೊರತು ಸೂಕ್ತವಾಗಿ, ಸಮರ್ಪಕವಾಗಿ ಮತ್ತು ವೈಜ್ಞಾನಿಕವಾಗಿ ರೂಪಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ.

ಕ್ಷೇತ್ರ ಪುನರ್ ವಿಂಗಡಣೆಗೆ ಬೇಕಾದ ಮಾರ್ಗಸೂಚಿಯನ್ನು ಅನುಸರಿಸಿಲ್ಲ. ವಾರ್ಡ್ ಗಡಿ ನಿರ್ಧರಿಸುವಾಗ ರಾಜಕಾಲುವೆ, ಮಳೆನೀರು ಕಾಲುವೆ ಮತ್ತು ಮುಖ್ಯರಸ್ತೆಗಳನ್ನು ಪರಿಗಣಿಸಿಲ್ಲ. ಈಗಿರುವ ಕ್ಷೇತ್ರ ಪುನರ್ ವಿಂಗಡಣೆ ಕರಡಿನಲ್ಲೂ ಒಂದು ಬಿಬಿಎಂಪಿ ವಾರ್ಡ್ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೇರ್ಪಡೆಯಾಗಿದೆ. 45 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಎಂಬುದು ಸದುದ್ದೇಶದಿಂದ ಕೂಡಿದ್ದರೂ ಈಗಿರುವ ಕಾಯ್ದೆಯಲ್ಲಿ ಸರಿಪಡಿಸಲು ಅಸಾಧ್ಯ. ಕ್ಷೇತ್ರಗಳು ಅವೈಜ್ಞಾನಿಕತೆಯಿಂದ ಕೂಡಿವೆ. ಇದನ್ನು ಕೂಡಲೇ ಸರಿಪಡಿಸಬೇಕು  ಅದುವರೆಗೂ ವಾರ್ಡ್ ಪುನರ್ ರಚನೆ ತಡೆಹಿಡಿಯಬೇಕು ಎಂದು  ಸಿಪಿಎಂ ಮುಖಂಡ ಕೆ.ಎನ್.ಉಮೇಶ್ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಬಿ.ಎಸ್.ಪಾಟೀಲ್ ನೇತೃತ್ವದ ಸಮಿತಿ ಅಧ್ಯಯನ ಮಾಡಿ ನೀಡಿರುವ ವರದಿಯನ್ನೂ ಪರಿಗಣಿಸಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಟ್ಟದಷ್ಟು ಸಮಸ್ಯೆಗಳು ಇವೆ. ಅವುಗಳ ಪರಿಹಾರಕ್ಕಾಗಿ ಕ್ಷೇತ್ರಗಳನ್ನು ವೈಜ್ಞಾನಿಕವಾಗಿ ಪುನರ್ ವಿಂಗಡಿಸುವ ಕೆಲಸ ಮಾಡಬಹುದಿತ್ತು. ಕೆಎಂಸಿಎಆರ್ ಮಸೂದೆಗೆ ಇದುವರೆಗೂ ಅಂಕಿತ ದೊರಕಿಲ್ಲ. ಬಿಬಿಎಂಪಿ ವಿಭಜನೆಗೆ ಜೆಡಿಎಸ್ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೇ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗೆ ಕಳಿಸಿ ವರ್ಷಗಳೇ ಕಳೆದರೂ ಅಂಕಿತ ಬಿದ್ದಿಲ್ಲ. ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಕಾಯ್ದೆಯಾಗಿದ್ದರೆ 10 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ನಂತೆ ಪುನರ್ ವಿಂಗಡೆ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆಯ ಪ್ರಸ್ತಾಪದಲ್ಲಿ ಅನೇಕ ಗಂಭೀರ ಲೋಪದೋಷಗಳು ಕಂಡುಬಂದಿವೆ. ಪಾಲಿಕೆಯು ಸದುದ್ದೇಶದಿಂದ ಮಾಡಲಾಗಿರುವ ಕ್ರಮ ಗುಣಾತ್ಮಕ ಫಲಿತಾಂಶಗಳನ್ನು ನೀಡುವ ಬದಲು ಅಭಿವೃದ್ಧಿಗೆ ತೊಡಕಾಗಬಹುದಾದ ಸಾಧ್ಯತೆಯೇ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಎಂಸಿಎಆರ್ ಗೆ ಅಂಕಿತ ಪಡೆದು ಅದರ ಆಧಾರದಲ್ಲಿ  ಬಿಬಿಎಂಪಿಯನ್ನು ಪುನರ್ ರಚಿಸಿ ಚಿಕ್ಕವಾರ್ಡ್‌ಗಳ ರಚನೆಗೆ ಅನುವುಗೊಳಿಸಬೇಕೆಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೆಂಗಳೂರು ನಿವಾಸಿ ಡಾ.ಭಾನು ಪ್ರಕಾಶ್, ಸ್ಲಂಗಳನ್ನು ಮೂರ್ನಾಲ್ಕು ಭಾಗ ಮಾಡಿದ್ದಾರೆ. ಮುಸ್ಲಿಮರು, ದಲಿತರು ಮತ್ತು ತಮಿಳರು ಹೆಚ್ಚು ಇರುವ ಪ್ರದೇಶಗಳಲ್ಲಿ ಅವರನ್ನು ಮೂರು ವಾರ್ಡ್‌ಗೆ ಹಂಚಿಕೆ ಮಾಡಿದ್ದಾರೆ. ಇದರಿಂದ ಈ ಸಮುದಾಯ ತನಗೆ ಬೇಕಾದ ಕಾರ್ಪೋರೇಟರ್ ಅನ್ನು ಆಯ್ಕೆ ಮಾಡಿಕೊಳ್ಳಲಾಗದಂತೆ ಕ್ರಮ ವಹಿಸಲಾಗಿದೆ. ಒಂದು ಗಲ್ಲಿ ಒಂದು ವಾರ್ಡ್ ಸೇರಿದರೆ ಎದುರು ಮನೆ ಮತ್ತೊಂದು ವಾರ್ಡ್‌ಗೆ ಸೇರಿದೆ. ಕುಡಿಯುವ ನೀರಿನ ಪೈಪ್ ಲೈನ್ ಒಂದೇ ಆಗಿರುತ್ತದೆ. ನೀರು ಬರದಿದ್ದರೆ ಯಾರಿಗೆ ಪೋನ್ ಮಾಡಬೇಕು ಎಂಬ ಸಮಸ್ಯೆ ಕಾಡುತ್ತದೆ. ದಲಿತರು, ಮುಸ್ಲಿಮರು, ತಮಿಳರು ಹೆಚ್ಚಾಗಿರುವ ನಾಲ್ಕು ಓಣಿಗಳನ್ನು ಕಟ್ ಮಾಡಿ ಬೇರೆ ವಾರ್ಡ್‌ಗೆ ಸೇರಿಸಿದ್ದಾರೆ. ಇದರ ಹಿಂದೆ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುವಂತೆ ತಂತ್ರ ಹೆಣೆಯಲಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...