Homeಮುಖಪುಟಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

ಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

- Advertisement -
- Advertisement -

ಬಿಬಿಎಂಪಿ ವಿಭಜನೆ ಕಾರ್ಯವು ನೆನೆಗುದಿಗೆ ಬಿದ್ದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಡಳಿತದ ಹಿತ ದೃಷ್ಟಿಯಿಂದ 4-5 ವಿಭಾಗಗಳನ್ನು ಮಾಡಬೇಕೆಂಬ ಬೇಡಿಕೆ ರಾಷ್ಟ್ರಪತಿ ಮುಂದಿದೆ. ರಾಜ್ಯ ಸರ್ಕಾರ  ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗಳಿಗೆ ಕಳಿಸಿಕೊಟ್ಟಿದೆ. ಆದರೂ ಈವರೆಗೆ ಅಂಕಿತ ಬಿದ್ದಿಲ್ಲ.ಇದರ ನಡುವೆಯೇ ಬಿಬಿಎಂಪಿ ಕ್ಷೇತ್ರಗಳ ಪುನರ್ ವಿಂಗಡಣೆ ಕರಡನ್ನು ಪ್ರಕಟಿಸಿದ್ದು ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕ್ಷೇತ್ರಗಳನ್ನು ಮರುವಿಂಗಡಣೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿಲ್ಲ. ಸ್ಥಳೀಯ ನಿವಾಸಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಕೇಳಿಲ್ಲ. ವಾರ್ಡ್ ಸಮಿತಿಗಳು ಇದ್ದರೂ ಅವುಗಳಿಂದ ಮಾಹಿತಿ ಪಡೆದಿಲ್ಲ. ರಾಜಕೀಯ ಪಕ್ಷಗಳಿಂದಲೂ ಅಭಿಪ್ರಾಯ ಕೇಳಿಲ್ಲ. ಪಾರದರ್ಶಕತೆ ಕಾಪಾಡಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವನ್ನು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಿದ್ದು ಅವಾಂತರ ಸೃಷ್ಟಿಗೆ ಕಾರಣವಾಗಿದೆ. ಆ ಖಾಸಗಿ ಸಂಸ್ಥೆ ಕೇವಲ ಜನಸಂಖ್ಯೆಯನ್ನಾಧರಿಸಿ ಕ್ಷೇತ್ರ ಪುನರ್ ವಿಂಗಡನೆ ಮಾಡಿದೆಯೇ ಹೊರತು ಸೂಕ್ತವಾಗಿ, ಸಮರ್ಪಕವಾಗಿ ಮತ್ತು ವೈಜ್ಞಾನಿಕವಾಗಿ ರೂಪಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ.

ಕ್ಷೇತ್ರ ಪುನರ್ ವಿಂಗಡಣೆಗೆ ಬೇಕಾದ ಮಾರ್ಗಸೂಚಿಯನ್ನು ಅನುಸರಿಸಿಲ್ಲ. ವಾರ್ಡ್ ಗಡಿ ನಿರ್ಧರಿಸುವಾಗ ರಾಜಕಾಲುವೆ, ಮಳೆನೀರು ಕಾಲುವೆ ಮತ್ತು ಮುಖ್ಯರಸ್ತೆಗಳನ್ನು ಪರಿಗಣಿಸಿಲ್ಲ. ಈಗಿರುವ ಕ್ಷೇತ್ರ ಪುನರ್ ವಿಂಗಡಣೆ ಕರಡಿನಲ್ಲೂ ಒಂದು ಬಿಬಿಎಂಪಿ ವಾರ್ಡ್ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೇರ್ಪಡೆಯಾಗಿದೆ. 45 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಎಂಬುದು ಸದುದ್ದೇಶದಿಂದ ಕೂಡಿದ್ದರೂ ಈಗಿರುವ ಕಾಯ್ದೆಯಲ್ಲಿ ಸರಿಪಡಿಸಲು ಅಸಾಧ್ಯ. ಕ್ಷೇತ್ರಗಳು ಅವೈಜ್ಞಾನಿಕತೆಯಿಂದ ಕೂಡಿವೆ. ಇದನ್ನು ಕೂಡಲೇ ಸರಿಪಡಿಸಬೇಕು  ಅದುವರೆಗೂ ವಾರ್ಡ್ ಪುನರ್ ರಚನೆ ತಡೆಹಿಡಿಯಬೇಕು ಎಂದು  ಸಿಪಿಎಂ ಮುಖಂಡ ಕೆ.ಎನ್.ಉಮೇಶ್ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಬಿ.ಎಸ್.ಪಾಟೀಲ್ ನೇತೃತ್ವದ ಸಮಿತಿ ಅಧ್ಯಯನ ಮಾಡಿ ನೀಡಿರುವ ವರದಿಯನ್ನೂ ಪರಿಗಣಿಸಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಟ್ಟದಷ್ಟು ಸಮಸ್ಯೆಗಳು ಇವೆ. ಅವುಗಳ ಪರಿಹಾರಕ್ಕಾಗಿ ಕ್ಷೇತ್ರಗಳನ್ನು ವೈಜ್ಞಾನಿಕವಾಗಿ ಪುನರ್ ವಿಂಗಡಿಸುವ ಕೆಲಸ ಮಾಡಬಹುದಿತ್ತು. ಕೆಎಂಸಿಎಆರ್ ಮಸೂದೆಗೆ ಇದುವರೆಗೂ ಅಂಕಿತ ದೊರಕಿಲ್ಲ. ಬಿಬಿಎಂಪಿ ವಿಭಜನೆಗೆ ಜೆಡಿಎಸ್ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೇ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗೆ ಕಳಿಸಿ ವರ್ಷಗಳೇ ಕಳೆದರೂ ಅಂಕಿತ ಬಿದ್ದಿಲ್ಲ. ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಕಾಯ್ದೆಯಾಗಿದ್ದರೆ 10 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ನಂತೆ ಪುನರ್ ವಿಂಗಡೆ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆಯ ಪ್ರಸ್ತಾಪದಲ್ಲಿ ಅನೇಕ ಗಂಭೀರ ಲೋಪದೋಷಗಳು ಕಂಡುಬಂದಿವೆ. ಪಾಲಿಕೆಯು ಸದುದ್ದೇಶದಿಂದ ಮಾಡಲಾಗಿರುವ ಕ್ರಮ ಗುಣಾತ್ಮಕ ಫಲಿತಾಂಶಗಳನ್ನು ನೀಡುವ ಬದಲು ಅಭಿವೃದ್ಧಿಗೆ ತೊಡಕಾಗಬಹುದಾದ ಸಾಧ್ಯತೆಯೇ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಎಂಸಿಎಆರ್ ಗೆ ಅಂಕಿತ ಪಡೆದು ಅದರ ಆಧಾರದಲ್ಲಿ  ಬಿಬಿಎಂಪಿಯನ್ನು ಪುನರ್ ರಚಿಸಿ ಚಿಕ್ಕವಾರ್ಡ್‌ಗಳ ರಚನೆಗೆ ಅನುವುಗೊಳಿಸಬೇಕೆಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೆಂಗಳೂರು ನಿವಾಸಿ ಡಾ.ಭಾನು ಪ್ರಕಾಶ್, ಸ್ಲಂಗಳನ್ನು ಮೂರ್ನಾಲ್ಕು ಭಾಗ ಮಾಡಿದ್ದಾರೆ. ಮುಸ್ಲಿಮರು, ದಲಿತರು ಮತ್ತು ತಮಿಳರು ಹೆಚ್ಚು ಇರುವ ಪ್ರದೇಶಗಳಲ್ಲಿ ಅವರನ್ನು ಮೂರು ವಾರ್ಡ್‌ಗೆ ಹಂಚಿಕೆ ಮಾಡಿದ್ದಾರೆ. ಇದರಿಂದ ಈ ಸಮುದಾಯ ತನಗೆ ಬೇಕಾದ ಕಾರ್ಪೋರೇಟರ್ ಅನ್ನು ಆಯ್ಕೆ ಮಾಡಿಕೊಳ್ಳಲಾಗದಂತೆ ಕ್ರಮ ವಹಿಸಲಾಗಿದೆ. ಒಂದು ಗಲ್ಲಿ ಒಂದು ವಾರ್ಡ್ ಸೇರಿದರೆ ಎದುರು ಮನೆ ಮತ್ತೊಂದು ವಾರ್ಡ್‌ಗೆ ಸೇರಿದೆ. ಕುಡಿಯುವ ನೀರಿನ ಪೈಪ್ ಲೈನ್ ಒಂದೇ ಆಗಿರುತ್ತದೆ. ನೀರು ಬರದಿದ್ದರೆ ಯಾರಿಗೆ ಪೋನ್ ಮಾಡಬೇಕು ಎಂಬ ಸಮಸ್ಯೆ ಕಾಡುತ್ತದೆ. ದಲಿತರು, ಮುಸ್ಲಿಮರು, ತಮಿಳರು ಹೆಚ್ಚಾಗಿರುವ ನಾಲ್ಕು ಓಣಿಗಳನ್ನು ಕಟ್ ಮಾಡಿ ಬೇರೆ ವಾರ್ಡ್‌ಗೆ ಸೇರಿಸಿದ್ದಾರೆ. ಇದರ ಹಿಂದೆ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುವಂತೆ ತಂತ್ರ ಹೆಣೆಯಲಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...