Homeಮುಖಪುಟಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪ್ರತಿಭಟನಾಕಾರರ ಒಂದು ಗುಂಪು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿದೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಬಿಜೆಪಿಯು ಭಾರಿ ಕಸರತ್ತು ನಡೆಸುತ್ತಿದ್ದು ಬೇರೆ ಪಕ್ಷಗಳಿಂದ ಮತ್ತು ಜನಪ್ರಿಯ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸುತ್ತಿದೆ. ಪಕ್ಷದ ಈ ಕ್ರಮವು ಹಳೆಯ ಬಿಜೆಪಿ ಮತ್ತು ಹೊಸದಾಗಿ ಬಿಜೆಪಿ ಸೇರಿದವರ ನಡುವೆ ಬಿರುಕು ಮೂಡಿಸಿದೆ. ಪಕ್ಷವು ಭಾನುವಾರ ಬಿಡುಗಡೆ ಮಾಡಿರುವ ಚುನಾವಣಾ ಅಭ್ಯರ್ಥಿಗಳ ಎರಡನೆ ಪಟ್ಟಿಗೆ ಸಂಬಂಧಿಸಿದಂತೆ, ಬಿಜೆಪಿಯ ಕಚೇರಿಯ ಹೊರಗೆ ಮತ್ತು ಬಂಗಾಳದಾದ್ಯಂತ ಹಲವೆರೆಡೆ ಪ್ರತಿಭಟನೆಗಳು ಸೋಮವಾರ ನಡೆದವು.

ಪಕ್ಷದ ಕಾರ್ಯಕರ್ತರು ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ಹಿರಿಯ ಮುಖಂಡ ಅರ್ಜುನ್ ಸಿಂಗ್ ಅವರು ಬಿಜೆಪಿ ಕಚೇರಿ ಪ್ರವೇಶಿಸುವುದಕ್ಕೆ ತಡೆಯೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಒಂದು ಗುಂಪು ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿತು. ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿಯಿಂದ ಹೇಳಿಕೆ

“ಪಂಚಲದಲ್ಲಿ ಟಿಎಂಸಿಯಿಂದ ಬಂದಿರುವ ಮೋಹಿತ್‌ಲಾಲ್‌ ಘಾಟಿ ಅವರ ಉಮೇದುವಾರಿಕೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅವರನ್ನು ಅಭ್ಯರ್ಥಿಯಾಗಿ ಸ್ವೀಕರಿಸಲು ನಮಗೆ ಸಾಧ್ಯವಿಲ್ಲ” ಎಂದು ಪಕ್ಷದ ಕಚೇರಿಯ ಹೊರಗೆ ಪ್ರತಿಭಟನಾಗಾರರೊಬ್ಬರು ತಿಳಿಸಿದ್ದಾರೆ.

ಹೂಗ್ಲಿ ಜಿಲ್ಲೆಯ ಸಿಂಗೂರ್ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಕಾರ್ಯಕರ್ತರು ತಮ್ಮ ಕಚೇರಿಯಲ್ಲಿದ್ದ ಪಕ್ಷದ ಪದಾದಿಕಾರಿಗಳನ್ನು ಕೂಡಿಹಾಕಿ, ಟಿಎಂಸಿಯಿಂದ ಬಂದ ಶಾಸಕ ರವೀಂದ್ರನಾಥ್ ಭಟ್ಟಾಚಾರ್ಯ ಅವರಿಗೆ ಟಿಕೆಟ್ ನೀಡಿರುವುದನ್ನು ಪ್ರತಿಭಟಿಸಿದರು. ಟಿಎಂಸಿ ಪಕ್ಷವು ಭಟ್ಟಾಚಾರ್ಯ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿಗೆ ಪಕ್ಷಾಂತರ ಗೊಂಡಿದ್ದರು.

ದಕ್ಷಿಣ 24 ಪರಗಣಗಳ ರೈಡಿಘಿ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಬಿಜೆಪಿ ಬೆಂಬಲಿಗರು ಟಿಎಂಸಿಯಿಂದ ಪಕ್ಷಾಂತರಗೊಂಡ ಸಂತನು ಬಾಪುಲಿ ಅವರಿಗೆ ಟಿಕೆಟ್‌ ನೀಡಿರುವುದನ್ನು ವಿರೋಧಿಸಿ ಇಡೀ ದಿನ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು, “ಬಾಪುಲಿ ನಮ್ಮ ಮೇಲೆ ಈ ಹಿಂದೆ ಹಲ್ಲೆ ನಡೆಸಿದ್ದು, ಬಿಜೆಪಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೈತ್ರಿ ತುಂಬಾ ಕೆಟ್ಟ ಮತ್ತು ಕಹಿ ಅನುಭವ ನೀಡಿದೆ- ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಪಶ್ಚಿಮ ಬಂಗಾಳದವರಾದ ಕೇಂದ್ರ ಸಚಿವರಾದ ಬಾಬುಲ್ ಸುಪ್ರಿಯೋ ಮತ್ತು ಡೆಬಸ್ರೀ ಚೌಧುರಿ ಏಪ್ರಿಲ್ 6 ಮತ್ತು 10 ರಂದು ನಡೆಯುವ ಮೂರನೇ ಮತ್ತು ನಾಲ್ಕನೇ ಹಂತದ ಚುನಾವಣೆಗೆ 63 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಈ ಪ್ರಕಟಣೆಯ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಲವಾರು ನಾಯಕರು ಹೊಸಬರ ಉಮೇದುವಾರಿಕೆಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಬಂಗಾಳದಲ್ಲಿ, ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅಲಿಪುರ್ದಾರ್‌ನ ಅಶೋಕ್ ಲಹಿರಿ ಮತ್ತು ಕಲ್ಚಿನಿಯ ಗೂರ್ಖಾ ಜನಮುಕ್ತಿ ಮೋರ್ಚಾದಿಂದ ಬಿಜೆಪಿಗೆ ಬಂದಿರುವ ಬಿಷಾಲ್ ಲಾಮಾ ಅವರಿಗೆ ಟಿಕೆಟ್ ಘೋಷಿಸಿರುವುದನ್ನು ವಿರೋಧಿಸಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ GST ಅಡಿಯಲ್ಲಿ ತರುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

“ಈ ಅಶೋಕ್ ಲಾಹಿರಿ ಯಾರು ಮತ್ತು ಅವರಿಗೆ ಯಾಕೆ ಟಿಕೆಟ್ ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ಅಲಿಪುರ್ದಾರ್‌ನ ಹಳೆಯ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ. ಬಿಶಾಲ್ ಲಾಮಾ ಕೇವಲ ಎರಡು ದಿನಗಳ ಹಿಂದೆ ಪಕ್ಷಕ್ಕೆ ಸೇರಿಕೊಂಡರು, ಅವರಿಗೆ ಟಿಕೆಟ್ ನೀಡಲಾಗಿದೆ. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಇದನ್ನು ಎಂದಿಗೂ ಸ್ವೀಕರಿಸುವುದಿಲ್ಲ” ಎಂದು ಹೆಸರು ಹೇಳಲು ಇಚ್ಛಿಸದ ಕಾರ್ಯಕರ್ತನ ಹೇಳಿಕೆಯನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಈ ಪ್ರತಿಭಟನೆಗಳನ್ನು ಉಲ್ಲೇಖಿಸಿ ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ “ಇವು ಅಡ್ಡ ದಾರಿಯ ಘಟನೆಗಳು” ಎಂದು ಹೇಳಿದ್ದಾರೆ.

“ಹೆಚ್ಚು ಹೆಚ್ಚು ಜನರು ಪಕ್ಷಕ್ಕೆ ಸೇರುತ್ತಿರುವುದರಿಂದ ಬಿಜೆಪಿ ಬೆಳೆಯುತ್ತಿದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಕೆಲವು ಸಮಸ್ಯೆಗಳಿವೆ, ಆದರೆ ಅದನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...