Homeಮುಖಪುಟಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪ್ರತಿಭಟನಾಕಾರರ ಒಂದು ಗುಂಪು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿದೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಬಿಜೆಪಿಯು ಭಾರಿ ಕಸರತ್ತು ನಡೆಸುತ್ತಿದ್ದು ಬೇರೆ ಪಕ್ಷಗಳಿಂದ ಮತ್ತು ಜನಪ್ರಿಯ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸುತ್ತಿದೆ. ಪಕ್ಷದ ಈ ಕ್ರಮವು ಹಳೆಯ ಬಿಜೆಪಿ ಮತ್ತು ಹೊಸದಾಗಿ ಬಿಜೆಪಿ ಸೇರಿದವರ ನಡುವೆ ಬಿರುಕು ಮೂಡಿಸಿದೆ. ಪಕ್ಷವು ಭಾನುವಾರ ಬಿಡುಗಡೆ ಮಾಡಿರುವ ಚುನಾವಣಾ ಅಭ್ಯರ್ಥಿಗಳ ಎರಡನೆ ಪಟ್ಟಿಗೆ ಸಂಬಂಧಿಸಿದಂತೆ, ಬಿಜೆಪಿಯ ಕಚೇರಿಯ ಹೊರಗೆ ಮತ್ತು ಬಂಗಾಳದಾದ್ಯಂತ ಹಲವೆರೆಡೆ ಪ್ರತಿಭಟನೆಗಳು ಸೋಮವಾರ ನಡೆದವು.

ಪಕ್ಷದ ಕಾರ್ಯಕರ್ತರು ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ಹಿರಿಯ ಮುಖಂಡ ಅರ್ಜುನ್ ಸಿಂಗ್ ಅವರು ಬಿಜೆಪಿ ಕಚೇರಿ ಪ್ರವೇಶಿಸುವುದಕ್ಕೆ ತಡೆಯೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಒಂದು ಗುಂಪು ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿತು. ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿಯಿಂದ ಹೇಳಿಕೆ

“ಪಂಚಲದಲ್ಲಿ ಟಿಎಂಸಿಯಿಂದ ಬಂದಿರುವ ಮೋಹಿತ್‌ಲಾಲ್‌ ಘಾಟಿ ಅವರ ಉಮೇದುವಾರಿಕೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅವರನ್ನು ಅಭ್ಯರ್ಥಿಯಾಗಿ ಸ್ವೀಕರಿಸಲು ನಮಗೆ ಸಾಧ್ಯವಿಲ್ಲ” ಎಂದು ಪಕ್ಷದ ಕಚೇರಿಯ ಹೊರಗೆ ಪ್ರತಿಭಟನಾಗಾರರೊಬ್ಬರು ತಿಳಿಸಿದ್ದಾರೆ.

ಹೂಗ್ಲಿ ಜಿಲ್ಲೆಯ ಸಿಂಗೂರ್ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಕಾರ್ಯಕರ್ತರು ತಮ್ಮ ಕಚೇರಿಯಲ್ಲಿದ್ದ ಪಕ್ಷದ ಪದಾದಿಕಾರಿಗಳನ್ನು ಕೂಡಿಹಾಕಿ, ಟಿಎಂಸಿಯಿಂದ ಬಂದ ಶಾಸಕ ರವೀಂದ್ರನಾಥ್ ಭಟ್ಟಾಚಾರ್ಯ ಅವರಿಗೆ ಟಿಕೆಟ್ ನೀಡಿರುವುದನ್ನು ಪ್ರತಿಭಟಿಸಿದರು. ಟಿಎಂಸಿ ಪಕ್ಷವು ಭಟ್ಟಾಚಾರ್ಯ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿಗೆ ಪಕ್ಷಾಂತರ ಗೊಂಡಿದ್ದರು.

ದಕ್ಷಿಣ 24 ಪರಗಣಗಳ ರೈಡಿಘಿ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಬಿಜೆಪಿ ಬೆಂಬಲಿಗರು ಟಿಎಂಸಿಯಿಂದ ಪಕ್ಷಾಂತರಗೊಂಡ ಸಂತನು ಬಾಪುಲಿ ಅವರಿಗೆ ಟಿಕೆಟ್‌ ನೀಡಿರುವುದನ್ನು ವಿರೋಧಿಸಿ ಇಡೀ ದಿನ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು, “ಬಾಪುಲಿ ನಮ್ಮ ಮೇಲೆ ಈ ಹಿಂದೆ ಹಲ್ಲೆ ನಡೆಸಿದ್ದು, ಬಿಜೆಪಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೈತ್ರಿ ತುಂಬಾ ಕೆಟ್ಟ ಮತ್ತು ಕಹಿ ಅನುಭವ ನೀಡಿದೆ- ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಪಶ್ಚಿಮ ಬಂಗಾಳದವರಾದ ಕೇಂದ್ರ ಸಚಿವರಾದ ಬಾಬುಲ್ ಸುಪ್ರಿಯೋ ಮತ್ತು ಡೆಬಸ್ರೀ ಚೌಧುರಿ ಏಪ್ರಿಲ್ 6 ಮತ್ತು 10 ರಂದು ನಡೆಯುವ ಮೂರನೇ ಮತ್ತು ನಾಲ್ಕನೇ ಹಂತದ ಚುನಾವಣೆಗೆ 63 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಈ ಪ್ರಕಟಣೆಯ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಲವಾರು ನಾಯಕರು ಹೊಸಬರ ಉಮೇದುವಾರಿಕೆಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಬಂಗಾಳದಲ್ಲಿ, ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅಲಿಪುರ್ದಾರ್‌ನ ಅಶೋಕ್ ಲಹಿರಿ ಮತ್ತು ಕಲ್ಚಿನಿಯ ಗೂರ್ಖಾ ಜನಮುಕ್ತಿ ಮೋರ್ಚಾದಿಂದ ಬಿಜೆಪಿಗೆ ಬಂದಿರುವ ಬಿಷಾಲ್ ಲಾಮಾ ಅವರಿಗೆ ಟಿಕೆಟ್ ಘೋಷಿಸಿರುವುದನ್ನು ವಿರೋಧಿಸಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ GST ಅಡಿಯಲ್ಲಿ ತರುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

“ಈ ಅಶೋಕ್ ಲಾಹಿರಿ ಯಾರು ಮತ್ತು ಅವರಿಗೆ ಯಾಕೆ ಟಿಕೆಟ್ ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ಅಲಿಪುರ್ದಾರ್‌ನ ಹಳೆಯ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ. ಬಿಶಾಲ್ ಲಾಮಾ ಕೇವಲ ಎರಡು ದಿನಗಳ ಹಿಂದೆ ಪಕ್ಷಕ್ಕೆ ಸೇರಿಕೊಂಡರು, ಅವರಿಗೆ ಟಿಕೆಟ್ ನೀಡಲಾಗಿದೆ. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಇದನ್ನು ಎಂದಿಗೂ ಸ್ವೀಕರಿಸುವುದಿಲ್ಲ” ಎಂದು ಹೆಸರು ಹೇಳಲು ಇಚ್ಛಿಸದ ಕಾರ್ಯಕರ್ತನ ಹೇಳಿಕೆಯನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಈ ಪ್ರತಿಭಟನೆಗಳನ್ನು ಉಲ್ಲೇಖಿಸಿ ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ “ಇವು ಅಡ್ಡ ದಾರಿಯ ಘಟನೆಗಳು” ಎಂದು ಹೇಳಿದ್ದಾರೆ.

“ಹೆಚ್ಚು ಹೆಚ್ಚು ಜನರು ಪಕ್ಷಕ್ಕೆ ಸೇರುತ್ತಿರುವುದರಿಂದ ಬಿಜೆಪಿ ಬೆಳೆಯುತ್ತಿದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಕೆಲವು ಸಮಸ್ಯೆಗಳಿವೆ, ಆದರೆ ಅದನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...