Homeಮುಖಪುಟಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪ್ರತಿಭಟನಾಕಾರರ ಒಂದು ಗುಂಪು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿದೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಬಿಜೆಪಿಯು ಭಾರಿ ಕಸರತ್ತು ನಡೆಸುತ್ತಿದ್ದು ಬೇರೆ ಪಕ್ಷಗಳಿಂದ ಮತ್ತು ಜನಪ್ರಿಯ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸುತ್ತಿದೆ. ಪಕ್ಷದ ಈ ಕ್ರಮವು ಹಳೆಯ ಬಿಜೆಪಿ ಮತ್ತು ಹೊಸದಾಗಿ ಬಿಜೆಪಿ ಸೇರಿದವರ ನಡುವೆ ಬಿರುಕು ಮೂಡಿಸಿದೆ. ಪಕ್ಷವು ಭಾನುವಾರ ಬಿಡುಗಡೆ ಮಾಡಿರುವ ಚುನಾವಣಾ ಅಭ್ಯರ್ಥಿಗಳ ಎರಡನೆ ಪಟ್ಟಿಗೆ ಸಂಬಂಧಿಸಿದಂತೆ, ಬಿಜೆಪಿಯ ಕಚೇರಿಯ ಹೊರಗೆ ಮತ್ತು ಬಂಗಾಳದಾದ್ಯಂತ ಹಲವೆರೆಡೆ ಪ್ರತಿಭಟನೆಗಳು ಸೋಮವಾರ ನಡೆದವು.

ಪಕ್ಷದ ಕಾರ್ಯಕರ್ತರು ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ಹಿರಿಯ ಮುಖಂಡ ಅರ್ಜುನ್ ಸಿಂಗ್ ಅವರು ಬಿಜೆಪಿ ಕಚೇರಿ ಪ್ರವೇಶಿಸುವುದಕ್ಕೆ ತಡೆಯೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಒಂದು ಗುಂಪು ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿತು. ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿಯಿಂದ ಹೇಳಿಕೆ

“ಪಂಚಲದಲ್ಲಿ ಟಿಎಂಸಿಯಿಂದ ಬಂದಿರುವ ಮೋಹಿತ್‌ಲಾಲ್‌ ಘಾಟಿ ಅವರ ಉಮೇದುವಾರಿಕೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅವರನ್ನು ಅಭ್ಯರ್ಥಿಯಾಗಿ ಸ್ವೀಕರಿಸಲು ನಮಗೆ ಸಾಧ್ಯವಿಲ್ಲ” ಎಂದು ಪಕ್ಷದ ಕಚೇರಿಯ ಹೊರಗೆ ಪ್ರತಿಭಟನಾಗಾರರೊಬ್ಬರು ತಿಳಿಸಿದ್ದಾರೆ.

ಹೂಗ್ಲಿ ಜಿಲ್ಲೆಯ ಸಿಂಗೂರ್ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಕಾರ್ಯಕರ್ತರು ತಮ್ಮ ಕಚೇರಿಯಲ್ಲಿದ್ದ ಪಕ್ಷದ ಪದಾದಿಕಾರಿಗಳನ್ನು ಕೂಡಿಹಾಕಿ, ಟಿಎಂಸಿಯಿಂದ ಬಂದ ಶಾಸಕ ರವೀಂದ್ರನಾಥ್ ಭಟ್ಟಾಚಾರ್ಯ ಅವರಿಗೆ ಟಿಕೆಟ್ ನೀಡಿರುವುದನ್ನು ಪ್ರತಿಭಟಿಸಿದರು. ಟಿಎಂಸಿ ಪಕ್ಷವು ಭಟ್ಟಾಚಾರ್ಯ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿಗೆ ಪಕ್ಷಾಂತರ ಗೊಂಡಿದ್ದರು.

ದಕ್ಷಿಣ 24 ಪರಗಣಗಳ ರೈಡಿಘಿ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಬಿಜೆಪಿ ಬೆಂಬಲಿಗರು ಟಿಎಂಸಿಯಿಂದ ಪಕ್ಷಾಂತರಗೊಂಡ ಸಂತನು ಬಾಪುಲಿ ಅವರಿಗೆ ಟಿಕೆಟ್‌ ನೀಡಿರುವುದನ್ನು ವಿರೋಧಿಸಿ ಇಡೀ ದಿನ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು, “ಬಾಪುಲಿ ನಮ್ಮ ಮೇಲೆ ಈ ಹಿಂದೆ ಹಲ್ಲೆ ನಡೆಸಿದ್ದು, ಬಿಜೆಪಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೈತ್ರಿ ತುಂಬಾ ಕೆಟ್ಟ ಮತ್ತು ಕಹಿ ಅನುಭವ ನೀಡಿದೆ- ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಪಶ್ಚಿಮ ಬಂಗಾಳದವರಾದ ಕೇಂದ್ರ ಸಚಿವರಾದ ಬಾಬುಲ್ ಸುಪ್ರಿಯೋ ಮತ್ತು ಡೆಬಸ್ರೀ ಚೌಧುರಿ ಏಪ್ರಿಲ್ 6 ಮತ್ತು 10 ರಂದು ನಡೆಯುವ ಮೂರನೇ ಮತ್ತು ನಾಲ್ಕನೇ ಹಂತದ ಚುನಾವಣೆಗೆ 63 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಈ ಪ್ರಕಟಣೆಯ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಲವಾರು ನಾಯಕರು ಹೊಸಬರ ಉಮೇದುವಾರಿಕೆಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಬಂಗಾಳದಲ್ಲಿ, ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅಲಿಪುರ್ದಾರ್‌ನ ಅಶೋಕ್ ಲಹಿರಿ ಮತ್ತು ಕಲ್ಚಿನಿಯ ಗೂರ್ಖಾ ಜನಮುಕ್ತಿ ಮೋರ್ಚಾದಿಂದ ಬಿಜೆಪಿಗೆ ಬಂದಿರುವ ಬಿಷಾಲ್ ಲಾಮಾ ಅವರಿಗೆ ಟಿಕೆಟ್ ಘೋಷಿಸಿರುವುದನ್ನು ವಿರೋಧಿಸಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ GST ಅಡಿಯಲ್ಲಿ ತರುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

“ಈ ಅಶೋಕ್ ಲಾಹಿರಿ ಯಾರು ಮತ್ತು ಅವರಿಗೆ ಯಾಕೆ ಟಿಕೆಟ್ ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ಅಲಿಪುರ್ದಾರ್‌ನ ಹಳೆಯ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ. ಬಿಶಾಲ್ ಲಾಮಾ ಕೇವಲ ಎರಡು ದಿನಗಳ ಹಿಂದೆ ಪಕ್ಷಕ್ಕೆ ಸೇರಿಕೊಂಡರು, ಅವರಿಗೆ ಟಿಕೆಟ್ ನೀಡಲಾಗಿದೆ. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಇದನ್ನು ಎಂದಿಗೂ ಸ್ವೀಕರಿಸುವುದಿಲ್ಲ” ಎಂದು ಹೆಸರು ಹೇಳಲು ಇಚ್ಛಿಸದ ಕಾರ್ಯಕರ್ತನ ಹೇಳಿಕೆಯನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಈ ಪ್ರತಿಭಟನೆಗಳನ್ನು ಉಲ್ಲೇಖಿಸಿ ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ “ಇವು ಅಡ್ಡ ದಾರಿಯ ಘಟನೆಗಳು” ಎಂದು ಹೇಳಿದ್ದಾರೆ.

“ಹೆಚ್ಚು ಹೆಚ್ಚು ಜನರು ಪಕ್ಷಕ್ಕೆ ಸೇರುತ್ತಿರುವುದರಿಂದ ಬಿಜೆಪಿ ಬೆಳೆಯುತ್ತಿದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಕೆಲವು ಸಮಸ್ಯೆಗಳಿವೆ, ಆದರೆ ಅದನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...