Homeಮುಖಪುಟಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ಪ್ರತಿಭಟನಾಕಾರರ ಒಂದು ಗುಂಪು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿದೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಬಿಜೆಪಿಯು ಭಾರಿ ಕಸರತ್ತು ನಡೆಸುತ್ತಿದ್ದು ಬೇರೆ ಪಕ್ಷಗಳಿಂದ ಮತ್ತು ಜನಪ್ರಿಯ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸುತ್ತಿದೆ. ಪಕ್ಷದ ಈ ಕ್ರಮವು ಹಳೆಯ ಬಿಜೆಪಿ ಮತ್ತು ಹೊಸದಾಗಿ ಬಿಜೆಪಿ ಸೇರಿದವರ ನಡುವೆ ಬಿರುಕು ಮೂಡಿಸಿದೆ. ಪಕ್ಷವು ಭಾನುವಾರ ಬಿಡುಗಡೆ ಮಾಡಿರುವ ಚುನಾವಣಾ ಅಭ್ಯರ್ಥಿಗಳ ಎರಡನೆ ಪಟ್ಟಿಗೆ ಸಂಬಂಧಿಸಿದಂತೆ, ಬಿಜೆಪಿಯ ಕಚೇರಿಯ ಹೊರಗೆ ಮತ್ತು ಬಂಗಾಳದಾದ್ಯಂತ ಹಲವೆರೆಡೆ ಪ್ರತಿಭಟನೆಗಳು ಸೋಮವಾರ ನಡೆದವು.

ಪಕ್ಷದ ಕಾರ್ಯಕರ್ತರು ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ಹಿರಿಯ ಮುಖಂಡ ಅರ್ಜುನ್ ಸಿಂಗ್ ಅವರು ಬಿಜೆಪಿ ಕಚೇರಿ ಪ್ರವೇಶಿಸುವುದಕ್ಕೆ ತಡೆಯೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಒಂದು ಗುಂಪು ಮುಕುಲ್ ರಾಯ್ ಅವರ ಕಾರಿನ ಬಾನೆಟ್ ಮೇಲೆ ಬಡಿದು ಕಚೇರಿಯನ್ನು ಚೆಲ್ಲಾಪಿಲ್ಲಿ ಮಾಡುವುದಾಗಿ ಬೆದರಿಕೆ ಹಾಕಿತು. ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿಯಿಂದ ಹೇಳಿಕೆ

“ಪಂಚಲದಲ್ಲಿ ಟಿಎಂಸಿಯಿಂದ ಬಂದಿರುವ ಮೋಹಿತ್‌ಲಾಲ್‌ ಘಾಟಿ ಅವರ ಉಮೇದುವಾರಿಕೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅವರನ್ನು ಅಭ್ಯರ್ಥಿಯಾಗಿ ಸ್ವೀಕರಿಸಲು ನಮಗೆ ಸಾಧ್ಯವಿಲ್ಲ” ಎಂದು ಪಕ್ಷದ ಕಚೇರಿಯ ಹೊರಗೆ ಪ್ರತಿಭಟನಾಗಾರರೊಬ್ಬರು ತಿಳಿಸಿದ್ದಾರೆ.

ಹೂಗ್ಲಿ ಜಿಲ್ಲೆಯ ಸಿಂಗೂರ್ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಕಾರ್ಯಕರ್ತರು ತಮ್ಮ ಕಚೇರಿಯಲ್ಲಿದ್ದ ಪಕ್ಷದ ಪದಾದಿಕಾರಿಗಳನ್ನು ಕೂಡಿಹಾಕಿ, ಟಿಎಂಸಿಯಿಂದ ಬಂದ ಶಾಸಕ ರವೀಂದ್ರನಾಥ್ ಭಟ್ಟಾಚಾರ್ಯ ಅವರಿಗೆ ಟಿಕೆಟ್ ನೀಡಿರುವುದನ್ನು ಪ್ರತಿಭಟಿಸಿದರು. ಟಿಎಂಸಿ ಪಕ್ಷವು ಭಟ್ಟಾಚಾರ್ಯ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿಗೆ ಪಕ್ಷಾಂತರ ಗೊಂಡಿದ್ದರು.

ದಕ್ಷಿಣ 24 ಪರಗಣಗಳ ರೈಡಿಘಿ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಬಿಜೆಪಿ ಬೆಂಬಲಿಗರು ಟಿಎಂಸಿಯಿಂದ ಪಕ್ಷಾಂತರಗೊಂಡ ಸಂತನು ಬಾಪುಲಿ ಅವರಿಗೆ ಟಿಕೆಟ್‌ ನೀಡಿರುವುದನ್ನು ವಿರೋಧಿಸಿ ಇಡೀ ದಿನ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು, “ಬಾಪುಲಿ ನಮ್ಮ ಮೇಲೆ ಈ ಹಿಂದೆ ಹಲ್ಲೆ ನಡೆಸಿದ್ದು, ಬಿಜೆಪಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೈತ್ರಿ ತುಂಬಾ ಕೆಟ್ಟ ಮತ್ತು ಕಹಿ ಅನುಭವ ನೀಡಿದೆ- ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಪಶ್ಚಿಮ ಬಂಗಾಳದವರಾದ ಕೇಂದ್ರ ಸಚಿವರಾದ ಬಾಬುಲ್ ಸುಪ್ರಿಯೋ ಮತ್ತು ಡೆಬಸ್ರೀ ಚೌಧುರಿ ಏಪ್ರಿಲ್ 6 ಮತ್ತು 10 ರಂದು ನಡೆಯುವ ಮೂರನೇ ಮತ್ತು ನಾಲ್ಕನೇ ಹಂತದ ಚುನಾವಣೆಗೆ 63 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಈ ಪ್ರಕಟಣೆಯ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಲವಾರು ನಾಯಕರು ಹೊಸಬರ ಉಮೇದುವಾರಿಕೆಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಬಂಗಾಳದಲ್ಲಿ, ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅಲಿಪುರ್ದಾರ್‌ನ ಅಶೋಕ್ ಲಹಿರಿ ಮತ್ತು ಕಲ್ಚಿನಿಯ ಗೂರ್ಖಾ ಜನಮುಕ್ತಿ ಮೋರ್ಚಾದಿಂದ ಬಿಜೆಪಿಗೆ ಬಂದಿರುವ ಬಿಷಾಲ್ ಲಾಮಾ ಅವರಿಗೆ ಟಿಕೆಟ್ ಘೋಷಿಸಿರುವುದನ್ನು ವಿರೋಧಿಸಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ GST ಅಡಿಯಲ್ಲಿ ತರುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

“ಈ ಅಶೋಕ್ ಲಾಹಿರಿ ಯಾರು ಮತ್ತು ಅವರಿಗೆ ಯಾಕೆ ಟಿಕೆಟ್ ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ಅಲಿಪುರ್ದಾರ್‌ನ ಹಳೆಯ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ. ಬಿಶಾಲ್ ಲಾಮಾ ಕೇವಲ ಎರಡು ದಿನಗಳ ಹಿಂದೆ ಪಕ್ಷಕ್ಕೆ ಸೇರಿಕೊಂಡರು, ಅವರಿಗೆ ಟಿಕೆಟ್ ನೀಡಲಾಗಿದೆ. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಇದನ್ನು ಎಂದಿಗೂ ಸ್ವೀಕರಿಸುವುದಿಲ್ಲ” ಎಂದು ಹೆಸರು ಹೇಳಲು ಇಚ್ಛಿಸದ ಕಾರ್ಯಕರ್ತನ ಹೇಳಿಕೆಯನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಈ ಪ್ರತಿಭಟನೆಗಳನ್ನು ಉಲ್ಲೇಖಿಸಿ ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ “ಇವು ಅಡ್ಡ ದಾರಿಯ ಘಟನೆಗಳು” ಎಂದು ಹೇಳಿದ್ದಾರೆ.

“ಹೆಚ್ಚು ಹೆಚ್ಚು ಜನರು ಪಕ್ಷಕ್ಕೆ ಸೇರುತ್ತಿರುವುದರಿಂದ ಬಿಜೆಪಿ ಬೆಳೆಯುತ್ತಿದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಕೆಲವು ಸಮಸ್ಯೆಗಳಿವೆ, ಆದರೆ ಅದನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...