Homeಕರ್ನಾಟಕಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ.

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ. ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ಪತ್ರಿಕಾ ಹೇಳಿಕೆ ನೀಡಿದ್ದು, ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಹೇಳಿಕೆಯಲ್ಲಿ “ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ, ಒಕ್ಕೂಟ ಸರ್ಕಾರದ 2021-22 ಬಜೆಟ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಮತ್ತಷ್ಟು ಅನುದಾನಗಳು ಕಡಿತಗೊಳ್ಳುವ ವರದಿಗಳಾಗಿದೆ. ಇದು ಕರ್ನಾಟಕ ಸರ್ಕಾರ ಮತ್ತು ಎಲ್ಲ 28 ಲೋಕಸಭಾ ಸದಸ್ಯರ ಸಾಮೂಹಿಕ ಸೋಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೈಕಮಾಂಡ್ ಗುಲಾಮಗಿರಿಗೆ ಒಗ್ಗಿಹೋಗಿರುವ ನಮ್ಮ ಸಂಸದರಿಗೆ, ಜನಪ್ರತಿನಿಧಿಗಳಿಗೆ ಇದು ಅವಮಾನ ಎನ್ನಿಸದಿರಬಹುದು. ಆದರೆ ವಿಶ್ವಾಸವಿಟ್ಟು ಮತ ಚಲಾಯಿಸಿದ ರಾಜ್ಯದ ಜನತೆಯ ಪಾಲಿಗೆ ಇದು ಘೋರ ಅಪಮಾನವಾಗಿದೆ. ಸದ್ಯದಲ್ಲೇ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೆಚ್ಚು ಹೆಚ್ಚು ಅನುದಾನ ನೀಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಆದರೆ ಕರ್ನಾಟಕದಲ್ಲಿ ಚುನಾವಣೆ ಇದ್ದರೂ, ಇಲ್ಲದೇ ಇದ್ದರೂ ಅನುದಾನ ನೀಡುವುದಿಲ್ಲ. ಕನ್ನಡಿಗರೆಂದರೆ ಅಷ್ಟು ತಾತ್ಸಾರ ಒಕ್ಕೂಟ ಸರ್ಕಾರಕ್ಕೆ ಎಂದು ಕಿಡಿಕಾರಿದ್ದಾರೆ.

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂನಂಥ ರಾಜ್ಯಗಳಿಗೆ ಪ್ರತ್ಯೇಕವಾಗಿ ಹೆದ್ದಾರಿಗಳಿಗೆ ಅನುದಾನ ಬಿಡುಗಡೆ ಮಾಡಿರುವ ಒಕ್ಕೂಟ ಸರ್ಕಾರ ಆಳುವ ಪಕ್ಷದ 25 ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಿರುವ ಕರ್ನಾಟಕವನ್ನು ಮರೆತಿರುವುದು ಕನ್ನಡಿಗರಿಗೆ ಎಸಗಿದ ದ್ರೋಹ.

ಮೀನುಗಾರಿಕೆ ಕೂಡ ಕರ್ನಾಟಕದ ಒಂದು ಬಹುಮುಖ್ಯವಾದ ಉದ್ಯಮ. ಬಜೆಟ್ ನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ 5 ಮುಖ್ಯವಾದ ಮೀನುಗಾರಿಕೆಯ ಬಂದರುಗಳನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಯ 2‌A ಮತ್ತು 2‌B ಯೋಜನೆಗಳಿಗೆ ಎಷ್ಟು ಅನುದಾನ ನೀಡಲಾಗುವುದು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಿಲ್ಲದಿರುವುದು ಎದ್ದುಕಾಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ. ಪೆಟ್ರೋಲ್/ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವ ಬಗ್ಗೆ ನಿರೀಕ್ಷೆ ಇರಿಸಿಕೊಳ್ಳಲಾಗಿತ್ತು. ಈ ನಿರೀಕ್ಷೆಯನ್ನೂ ಹುಸಿಗೊಳಿಸಲಾಗಿದೆ. ಒಟ್ಟಾರೆಯಾಗಿ ಈ ಬಾರಿಯ ಒಕ್ಕೂಟ ಸರ್ಕಾರದ ಬಜೆಟ್, ಕನ್ನಡಿಗರ ಪಾಲಿಗೆ ಖಾಲಿ ಸೊನ್ನೆಯನ್ನು ಸುತ್ತಿದೆ. ಜಾತಿ, ಧರ್ಮದ ಹೆಸರಿನಲ್ಲಿ ಕನ್ನಡಿಗರ ಮತ ಪಡೆಯಬಹುದು, ಅಭಿವೃದ್ಧಿ ಯಾಕೆ ಎಂಬುದು ಅವರ ಆಲೋಚನೆ. ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...