Homeಮುಖಪುಟಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

- Advertisement -
- Advertisement -

ತಮ್ಮ ಉದ್ಯೋಗಗಳನ್ನು ಕೇಳಿಕೊಂಡು ಬಿಹಾರದ ‘ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(ಎಸ್‌‌ಟಿಇಟಿ)’ಯ ಅಭ್ಯರ್ಥಿಗಳು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಈ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪಾಟ್ನಾದ ಇಕೋ ಪಾರ್ಕ್‌ನಲ್ಲಿ ಭಾರಿ ಪ್ರತಿಭಟನೆ ನಡೆದಿದ್ದು, ಬಿಹಾರ ಶಿಕ್ಷಣ ಸಚಿವ ವಿಜಯ್ ಕುಮಾರ್ ಚೌಧರಿ ಅವರ ವಿರುದ್ಧ ಪ್ರತಿಭಟಿಸಲು ಎಸ್‌ಟಿಇಟಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು ಎಂದು ವರದಿಗಳು ಹೇಳಿವೆ.

ಎಸ್‌ಟಿಇಟಿ ಅಭ್ಯರ್ಥಿಗಳು ತಮ್ಮ ಉದ್ಯೋಗವನ್ನು ಕೋರಿ ಜಮಾಯಿಸಿದ್ದು, ರಾಜ್ ಭವನ ಮತ್ತು ಶಿಕ್ಷಣ ಸಚಿವರ ನಿವಾಸದ ಕಡೆಗೆ ಜಾಥಾ ಮಾಡಿದ್ದರು. ಪ್ರತಿಭಟನಾಕಾರರು ವಿಜಯ್ ಕುಮಾರ್ ಚೌಧರಿಯವರ ನಿವಾಸವನ್ನು ಘೆರಾವ್ ಮಾಡಲು ಯೋಜಿಸುತ್ತಿದ್ದಾರೆಂದು ತಿಳಿಯುತ್ತಿದ್ದಂತೆ, ಇಡೀ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿತ್ತು. ಇದರ ಪರಿಣಾಮವಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

“ನಿತೀಶ್‌ ಸರ್ಕಾರವು STET 2019 ರ ಅಭ್ಯರ್ಥಿಗಳ ಶಾಂತಿಯುತ ಪ್ರತಿಭಟನೆಗಳ ಮೇಲೆ ಲಾಠಿ ಚಾರ್ಜ್ ನಡೆಸಿ ಆ ಮೂಲಕ ಅಸಮಾಧಾನವನ್ನು ನಿಗ್ರಹಿಸಲು ಬಯಸಿದೆ. ಆದರೆ ಬಿಹಾರದ ಯುವಕರು ಇದಕ್ಕೆ ಅವಕಾಶ ನೀಡುವುದಿಲ್ಲ. ಸಾಮಾಜಿಕ ನ್ಯಾಯದ ನಿಬಂಧನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿ ಮತ್ತು ಪಾರದರ್ಶಕಗೊಳಿಸಿ. ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ನೀಡಿ” ಎಂದು ರೆವಲ್ಯೂಷನರಿ ಯೂತ್‌ ಅಸೋಷಿಯೇಷನ್‌ ಹೇಳಿದೆ.

ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನಿಷೇಧಿತ ಪ್ರದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಕೆಲವನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಎಸ್‌ಟಿಇಟಿ ಅಭ್ಯರ್ಥಿಗಳು ಏಕೆ ಪ್ರತಿಭಟಿಸುತ್ತಿದ್ದಾರೆ?

ಎಸ್‌ಟಿಇಟಿ ಎಂದರೆ ಸೆಕೆಂಡರಿ ಶಿಕ್ಷಕರ ಅರ್ಹತಾ ಪರೀಕ್ಷೆಯಾಗಿದೆ. ಕೆಲವು ಎಸ್‌ಟಿಇಟಿ ಅಭ್ಯರ್ಥಿಗಳ ಪ್ರಕಾರ, ಪರೀಕ್ಷೆಯ ನಂತರ ಉದ್ಯೋಗದ ನೀಡುವ ಭರವಸೆ ನೀಡಿದ್ದರೂ, ಅವರಿಗೆ ಶಿಕ್ಷಣ ಸಚಿವರಿಂದ ನೇಮಕಾತಿ ಪತ್ರ ಇನ್ನೂ ಬಂದಿಲ್ಲ. ಇದಲ್ಲದೆ, ಪರಿಕ್ಷೆಗಳಲ್ಲಿ ಹಗರಣ ನಡೆದಿದೆ ಎಂದು ಕೆಲವರು ಆರೋಪಿಸಿದ್ದಾರೆ. ಇನ್ನೂ ಕೆಲವರು, ಯಾವುದೇ ವಿವರಣೆಯಿಲ್ಲದೆ ತಮ್ಮ ಹೆಸರುಗಳನ್ನು ಆಯ್ಕೆಯ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...