Homeಮುಖಪುಟಬೈಕ್ ಬಿಜೆಪಿ ನಾಯಕನ ಮಗನದ್ದು; ಹೆಲ್ಮೆಟ್, ಮಾಸ್ಕ್ ಎಲ್ಲಿ ಮೈ ಲಾರ್ಡ್...!

ಬೈಕ್ ಬಿಜೆಪಿ ನಾಯಕನ ಮಗನದ್ದು; ಹೆಲ್ಮೆಟ್, ಮಾಸ್ಕ್ ಎಲ್ಲಿ ಮೈ ಲಾರ್ಡ್…!

ಮಾಸ್ಕ್, ಹೆಲ್ಮೆಟ್ ಧರಿಸದೆ ಬೈಕ್ ಏರಿದ ಮುಖ್ಯ ನ್ಯಾಯಮೂರ್ತಿಯನ್ನು ತರಾಟೆಗೆ ಪಡೆದ ಟ್ವಿಟ್ಟರಿಗರು.

- Advertisement -
- Advertisement -

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರು ಹಾರ್ಲೆ ಡೇವಿಡ್ಸನ್ ಸೂಪರ್‌ ಬೈಕ್‌ ಏರಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಪ್ರಸ್ತುತ ಬೈಕ್ ಬಿಜೆಪಿ ರಾಜಕಾರಣಿಯ ಮಗನದ್ದು ಎಂದು ಟ್ವಿಟ್ಟರಿಗರು ಹೇಳಿದ್ದು, ಮೈ ಲಾರ್ಡ್ ಹೆಲ್ಮೆಟ್ ಎಲ್ಲಿ ಎಂದು ಕೇಳಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಹಿಂದಿನಿಂದಲೂ ಬೈಕುಗಳ ಮೇಲೆ ವಿಶೇಷ ಅಭಿರುಚಿ ಹೊಂದಿದ್ದರು ಎನ್ನಲಾಗಿದ್ದು, ಭಾನುವಾರ ಟ್ವಿಟ್ಟರ್ನಲ್ಲಿ ವೈರಲ್ ಆದ ಫೋಟೋಗಳಲ್ಲಿ, ಹಾರ್ಲೆ ಡೇವಿಡ್ಸನ್ ಕಂಪೆನಿಯ ಲಿಮಿಟೆಡ್ ಎಡಿಷನ್ ಸಿವಿಒ 2020 ಜೊತೆ ಕಾಣಿಸಿಕೊಂಡಿದ್ದಾರೆ.

ಈ ಪೋಟೊವನ್ನು ಅವರ ತವರೂರಾದ ನಾಗ್ಪುರದಲ್ಲಿ ಈ ಫೋಟೋ ತೆಗೆಯಲಾಗಿದೆ. ಫೋಟೋಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆಗಳ ಸುರಿಮಳೆಯಾಗಿದೆ. ಕೆಲವರು ಇದನ್ನು ನ್ಯಾಯಮೂರ್ತಿಗಳ ಜೀವನ ಪ್ರೀತಿಯೆಂದು ಮೆಚ್ಚಿದ್ದರೆ ಇನ್ನು ಕೆಲವರು ತೀವ್ರವಾಗಿ ತರಾಟೆಗೆ ಪಡೆದುಕೊಂಡಿದ್ದಾರೆ.

ಹಲವಾರು ಜನ ನ್ಯಾಯಮೂರ್ತಿಯೂ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿಲ್ಲ ಎಂದು ಆಕ್ಷೇಪಿಸಿ, ”ಮಾಸ್ಕ್ ಹಾಗೂ ಹೆಲ್ಮಟ್ ಎಲ್ಲಿ ಮೈ ಲಾರ್ಡ್” ಎಂದು ಕೇಳಿದ್ದಾರೆ.

ಪ್ರಸ್ತುತ ಬೈಕು ನಾಗಪುರ ಬಿಜೆಪಿ ನಾಯಕ ಸೊನ್ಬಾ ಮುಸಳೆ ಅವರ ಪುತ್ರ ರೋಹಿತ್‌ ಮುಸಳೆ ಎಂಬುವವರಿಗೆ ಸೇರಿದ್ದು ಎಂದು ಹೇಳಿ ಅದರ ವಿವರಗಳನ್ನ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೊನ್ಬಾ ಮುಸಳೆ 2014ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು.

ಆದರೆ ಮುಖ್ಯ ನ್ಯಾಯಮೂರ್ತಿಯ ಆಪ್ತ ಮೂಲಗಳ ಪ್ರಕಾರ ಬೈಕ್‌ನ್ನು ವ್ಯಾಪಾರಿಯು ಡೆಮೊಗಾಗಿ ತಂದಿದ್ದು, ನ್ಯಾಯಮೂರ್ತಿ ಬಾಬ್ಡೆ ಒಂದು ಫೀಲ್‌ಗಾಗಿ ಅದರ ಮೇಲೆ ಕುಳಿತುಕೊಂಡಿದ್ದಾರೆ. ಅಲ್ಲದೆ ಬೈಕ್‌ನಲ್ಲಿ ಕುಳಿಕೊಳ್ಳುವಾಗ ಮಾಸ್ಕ್ ಅನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ವಿವಾದಿತ ಬಾಬರಿ ಮಸೀದಿ ತೀರ್ಪು ನೀಡಿದ ಐವರು‌ ನ್ಯಾಯಮೂರ್ತಿಗಳಲ್ಲಿ, ನ್ಯಾಯಮೂರ್ತಿ ಬೊಬ್ಡೆ ಕೂಡ ಒಬ್ಬರು.


ಓದಿ: ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...