Homeಕರ್ನಾಟಕಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ - ಕಾಂಗ್ರೆಸ್ ವ್ಯಂಗ್ಯ

ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

“ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ, ಮತ್ತೊಂದು ಮಂಚ” ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಅಶ್ಲೀಲ ಸಿಡಿ ಕುರಿತು ಕಾಂಗ್ರೆಸ್ ಈ ರೀತಿ ಪ್ರತಿಕ್ರಿಯಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ ಮತ್ತೊಂದು ಮಂಚ! ಸಿಡಿ ನಿಜಕ್ಕೂ ನಕಲಿಯೇ ಆಗಿದ್ದರೆ ರಮೇಶ್ ಜಾರಕಿಹೊಳಿಯವರು ದೂರು ನೀಡಲು ಮಿನಾಮೇಷ ಎಣಿಸುತ್ತಿರುವುದೇಕೆ? ಖಾಸಗಿ ಏಜೆನ್ಸಿಗಳ ಮೊರೆ ಹೋಗುವುದೇಕೆ? ಸರ್ಕಾರಿ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲವೇ ಅಥವಾ #BJP v/s BJP ತಿಕ್ಕಾಟದಲ್ಲಿ ತಾವೇ ಬಲಿಯಾಗುವ ಭಯವೇ?” ಎಂದು ಪ್ರಶ್ನಿಸಿದೆ.

”ಸ್ವತಃ ಬಿಜೆಪಿಯ ದಲಿತ ಮಹಿಳೆ ಚಾಂದಿನಿ ನಾಯ್ಕ ಮೇಲಿನ ಬಿಜೆಪಿ ಶಾಸಕ ಸಿದ್ದು ಸವದಿ ಹಲ್ಲೆ ನಡೆಸಿ ಗರ್ಭಪಾತವಾದರೂ ಕ್ರಮ ಕೈಗೊಳ್ಳದ ಸರ್ಕಾರ. ದಲಿತ ಮಹಿಳೆಯ ಪರ ನಿಲ್ಲದ ಬಿಜೆಪಿ. ಬಿಜೆಪಿ ದಲಿತ, ಹಿಂದುಳಿದವರ ವಿರೋಧಿ ಎನ್ನುವುದನ್ನ 16 ನಿಗಮಗಳಿಗೆ ಕೇವಲ 500 ಕೋಟಿ ನೀಡಿ ಬಜೆಟ್‌ನಲ್ಲಿಯೇ ಸಾಬೀತುಪಡಿಸಿದೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.


ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...