Homeಕರೋನಾ ತಲ್ಲಣಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ!

ಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ!

ಬೇರೆ ಸಮಿತಿಯ ಸಭೆಗಿಂತ ಭಿನ್ನವಾಗಿ ಬಿಜೆಪಿಯ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಬಹುತೇಕ ಪೂರ್ಣ ಹಾಜರಾತಿಯಲ್ಲಿದ್ದು ಪ್ರಸ್ತಾಪವ್ನನು ವಿಫಲಗೊಳಿಸಿದರು.

- Advertisement -
- Advertisement -

ಈ ಹಿಂದೆ 2 ಜಿ ಸ್ಪೆಕ್ಟ್ರಮ್ ಹಗರಣದಂತಹ ವಿಷಯಗಳನ್ನು ಕೈಗೆತ್ತಿಕೊಂಡಿರುವ ಪ್ರಮುಖ ಸಂಸದೀಯ ಸಮಿತಿ‌ಗಳಲ್ಲಿ ಒಂದಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC)ಯು, ಕೊರೊನಾ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿಭಾಯಿಸಲು ಸ್ಥಾಪಿಸಲಾದ ಹೊಸ ಪಿಎಂ ಕೇರ್‌ ನಿಧಿಯನ್ನು ಪರಾಮರ್ಶಿಸುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ಸಮಿತಿಯ ಅಧ್ಯಕ್ಷರಾದ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರದ ಬಗ್ಗೆ ಯೋಚಿಸಿ ತಮ್ಮ ಆತ್ಮಸಾಕ್ಷಿಗನುಗುಣವಾಗಿ ನಡೆದುಕೊಂಡು ಪ್ರಮುಖ ವಿಷಯದ ಬಗ್ಗೆ ಒಮ್ಮತ ಕಂಡುಕೊಳ್ಳಬೇಕೆಂದು ಸದಸ್ಯರಿಗೆ ಮನವಿ ಮಾಡಿದರು.

ಬಿಜು ಜನತಾದಳ ಮತ್ತು ಡಿಎಂಕೆ ಸದಸ್ಯರು ಈ ಪ್ರಸ್ತಾಪವನ್ನು ಅನುಮೋದಿಸಿದರೂ, ಆಡಳಿತಾರೂಢ ಬಿಜೆಪಿಯ ಸದಸ್ಯರೆ ಹೆಚ್ಚಿದ್ದ ಸಭೆಯಲ್ಲಿ ಪಿಎಂ ಕೇರ್ಸ್‌ ಬಗ್ಗೆ ಪರಿಶೀಲನೆ ನಡೆಸುವ ಚೌಧರಿ ಅವರ ಪ್ರಸ್ತಾಪವನ್ನು ವಿರೋಧಿಸಿದರು ಎಂದು ಮೂಲಗಳು ತಿಳಿಸಿವೆ.

ಪಿಎಂ ಕೇರ್ಸ್‌ ಹಣದ ಖರ್ಚಿನ ಬಗ್ಗೆ ಬಿಜೆಪಿ ಸದಸ್ಯರಿಗೆ ಆತಂಕವಿರುವ ಕಾರಣಕ್ಕಾಗಿ ಸಂಸದೀಯ ಸಮಿತಿಯ ಪರಿಶೀಲನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ವೈಯಕ್ತಿಕ ಮತ್ತು ಖಾಸಗಿ ವಲಯದ ದೇಣಿಗೆಗಳನ್ನು ಸೆಳೆಯಲು ರಾಷ್ಟ್ರೀಯ ತುರ್ತು ಪರಿಸ್ಥಿತಿಗಾಗಿ ಸ್ಥಾಪಿಸಲಾದ ಪಿಎಂ ಕೇರ್ಸ್ ನಿಧಿಯನ್ನು ಸರ್ಕಾರದ ಲೆಕ್ಕಪರಿಶೋಧಕರಿಂದ ಪರಿಶೀಲಿಸಲಾಗುವುದಿಲ್ಲ. ಅದನ್ನು ಸ್ವತಂತ್ರ ಲೆಕ್ಕ ಪರಿಶೋಧಕರು ನೋಡುತ್ತಾರೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ತೆಗೆದುಹಾಕಿದ ನಂತರ ಸಮಿತಿ ಇದೇ ಮೊದಲು ಸಭೆಸೇರಿದ್ದು, ಬೇರೆ ಸಂಸದೀಯ ಸಮಿತಿಯ ಸಭೆಗೆ ಭಾಗವಹಿಸದ ಬಿಜೆಪಿಯ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಬಹುತೇಕ ಪೂರ್ಣ ಹಾಜರಾತಿ ಖಚಿತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಕಾರಣದಿಂದಾಗಿ, ಸಂಸದೀಯ ಸಮಿತಿಯು ವಿಶ್ವದ ಅತಿದೊಡ್ಡ ಲಾಕ್‌ಡೌನ್‌ಗಳಲ್ಲಿ ಸರ್ಕಾರದ ಪ್ರತಿಕ್ರಿಯೆ ಹೇಗಿತ್ತು ಹಾಗೂ ಅದು ಹೇಗೆ ಬಿಕ್ಕಟ್ಟನ್ನು ನಿಭಾಯಿಸುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಹಾಗೂ  ವಿಶ್ಲೇಷಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊರೊನಾಗೆ ಲಸಿಕೆ ಮುಂದಿನ ವರ್ಷವೇ ಸಾಧ್ಯ: ಸಂಸದೀಯ ಸಮಿತಿಗೆ ವಿಜ್ಞಾನಿಗಳ ಹೇಳಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...