Homeಮುಖಪುಟಬಿಜೆಪಿ ನನ್ನ ಮೇಲಿನ ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸುತ್ತಿದೆ: ಲಕ್ಷದ್ವೀಪದ ನಿರ್ಮಾಪಕಿ ಆಯಿಷಾ ಸುಲ್ತಾನ

ಬಿಜೆಪಿ ನನ್ನ ಮೇಲಿನ ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸುತ್ತಿದೆ: ಲಕ್ಷದ್ವೀಪದ ನಿರ್ಮಾಪಕಿ ಆಯಿಷಾ ಸುಲ್ತಾನ

- Advertisement -
- Advertisement -

ಟಿವಿ ಕಾರ್ಯಕ್ರಮವೊಂದರ ಚರ್ಚೆಯಲ್ಲಿ ಲಕ್ಷದ್ವೀಪ ಮೂಲದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ನೀಡಿದ ಹೇಳಿಕೆಯ ಆಧಾರದ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲಾಗಿತ್ತು. ಆದರೆ ಬಿಜೆಪಿಯು ನನಗೆ ಪಾಕಿಸ್ತಾನದ ಸಂಪರ್ಕವಿದೆ ಎಂದು ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸುತ್ತಿದೆ ಎಂದು ಆಯಿಷಾ ಸುಲ್ತಾನ ಆರೋಪಿಸಿದ್ದಾರೆ. ಅವರನ್ನು ಮೂರನೆ ಬಾರಿಗೆ ವಿಚಾರಣೆ ನಡೆಸಲಾಗಿದೆ ಎಂದು TNIE ವರದಿ ಮಾಡಿದೆ.

“ವಿವಾದಾತ್ಮಕ ಹೇಳಿಕೆಗೆ ಕಾರಣಕ್ಕೆ ಪೊಲೀಸರು ನನ್ನನ್ನು ವಿಚಾರಣೆ ನಡೆಸಿದ್ದರು. ಆದರೆ ಬಿಜೆಪಿಯ ಸಾಮಾಜಿಕ ಜಾಲತಾಣದ ಅಭಿಯಾನವು ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸಿದೆ. ಪೊಲೀಸರು ನನ್ನ ಫೋನ್ ವಿವರಗಳು, ವಾಟ್ಸಾಪ್ ಕರೆಗಳು ಮತ್ತು ಬ್ಯಾಂಕ್ ವಿವರಗಳನ್ನು ಪರಿಶೀಲಿಸಿದ್ದು, ನನಗೆ ಯಾವುದೇ ವಿದೇಶಿ ಸಂಪರ್ಕವಿದೆಯೇ ಎಂದು ವಿಚಾರಣೆ ನಡೆಸಿದ್ದಾರೆ. ನನ್ನ ಹೇಳಿಕೆಗಳನ್ನು ಪಾಕಿಸ್ತಾನದಲ್ಲಿ ಸಂಭ್ರಮಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರಿಂದ ಈ ವಿಚಾರಣೆ ಮಾಡುವುದು ಅಗತ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ” ಎಂದು ಆಯಿಷಾ ಸುಲ್ತಾನಾ ಹೇಳಿದ್ದಾರೆ.

ಇದನ್ನೂ ಓದಿ: 14 ವರ್ಷ ವನವಾಸದಿಂದ ಮರಳಿ ಬಂದಳೇ ಸೀತೆ?: ಕರೀನಾ, ಆಯಿಷಾ, ಭವ್ಯ ವಿರುದ್ಧ ನಿಂತ ಶಕ್ತಿಗಳು ಯಾವುವು?

ಈ ನಡುವೆ, ಲಕ್ಷದ್ವೀಪ ಪೊಲೀಸರು ಆಯಿಷಾ ಅವರನ್ನು ಗುರುವಾರ ಮೂರನೇ ಸುತ್ತಿನ ವಿಚಾರಣೆ ನಡೆಸಿದ್ದು ನಂತರ ಅವರನ್ನು ದ್ವೀಪದಿಂದ ಹೊರಗೆ ಹೊಗಲು ಅನುಮತಿ ನೀಡಿದ್ದಾರೆ. ತನ್ನ ಏಳು ದಿನಗಳ ಕಡ್ಡಾಯ ಕ್ವಾರಂಟೈನ್‌‌ ಅನ್ನು ಶುಕ್ರವಾರ ಕೊನೆಗೊಳಿಸಿ, ಶನಿವಾರ ಕೊಚ್ಚಿಗೆ ತೆರಳಲಿದ್ದೇನೆ ಎಂದು ಆಯಿಷಾ ಹೇಳಿದ್ದಾರೆ. ಈ ಮೊದಲು ಜೂನ್ 20 ಮತ್ತು 23 ರಂದು ಪೊಲೀಸರು ಆಯಿಷಾ ಅವರನ್ನು ವಿಚಾರಣೆ ನಡೆಸಿದ್ದರು.

“ಪ್ರಕರಣವು ತನಿಖೆಯ ಹಂತದಲ್ಲಿದೆ. ನಾವು ಆಯಿಷಾ ಅವರ ಹೇಳಿಕೆಯನ್ನು ದಾಖಲಿಸಿದ್ದೇವೆ. ದೂರಿನ ಆಧಾರದಲ್ಲಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಈ ಸಂಬಂಧಿತ ನಾವು ವಿಷಯಗಳ ಬಗ್ಗೆ ತನಿಖೆ ನಡೆಸಬೇಕಾಗಿದ್ದು, ಸಾಕ್ಷಿಗಳನ್ನು ಪರೀಶೀಲಿಸಬೇಕಾಗುತ್ತದೆ. ತನಿಖೆ ಪ್ರಗತಿಯಲ್ಲಿರುವುದರಿಂದ ಅದರ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ಲಕ್ಷದ್ವೀಪ ಎಸ್ಪಿ ಶರತ್‌ ಕುಮಾರ್‌ ಸಿನ್ಹಾ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, “ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ, ಹಲವು ತಿಂಗಳಿಗಿಂತಲೂ ಹೆಚ್ಚು ಕಾಲದಿಂದ ದ್ವೀಪವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....