Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...